ಬಂಡಾಯದ ಬಾವುಟ ಹಾರಿಸಿದ ಬೆಳಮಗಿ


Team Udayavani, Apr 22, 2018, 3:48 PM IST

g2-bandayada.jpg

ಕಲಬುರಗಿ: ಇಲ್ಲಿನ ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ನಿಂದ ವಂಚಿತರಾಗಿರುವ ಮಾಜಿ ಸಚಿವ ರೇವು ನಾಯಕ ಬೆಳಮಗಿ ಪಕ್ಷದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದು, ಪಕ್ಷಕ್ಕೆ ಗುಡ್‌ ಬೈ ಹೇಳಿ ಸ್ಪರ್ಧಿಸಲು ಮುಂದಾಗಿದ್ದಾರೆ. 

ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಶನಿವಾರ ಮನೆಯಲ್ಲಿ  ಬೆಂಬಲಿಗರ, ನಾಯಕ ಸಮುದಾಯದವರ ಹಾಗೂ ಕಾರ್ಯಕರ್ತರ ಜತೆಗೆ ವಿವಿಧ ಸಮುದಾಯಗಳ ಸಭೆಗಳನ್ನು ಸರಣಿಯಾಗಿ ನಡೆಸಿದ ನಂತರ ಬಿಜೆಪಿ  ತೊರೆದು ಸ್ಪರ್ಧಿಸುವ ಖಚಿತ ನಿರ್ಧಾರಕ್ಕೆ ಬಂದಿದ್ದಾರೆ. ಶನಿವಾರ ರೇವು ನಾಯಕ ಬೆಳಮಗಿ ಮನೆ ಸಾವಿರಾರು ಜನರಿಂದ ತುಂಬಿ ತುಳುಕಿತ್ತು. ಈ ವೇಳೆ ಸಭೆಗಳನ್ನು ನಡೆಸಿ ಎಲ್ಲರೊಂದಿಗೆ ಸಮಾಲೋಚನೆ ನಡೆಸಲಾಯಿತು.

ತದನಂತರ ಗುಪ್ತ ಸ್ಥಳಗಳಲ್ಲಿಯೂ ಸಭೆ ನಡೆಸಿ ಸಮಗ್ರವಾಗಿ  ಚರ್ಚಿಸಲಾಯಿತು. ಈ ನಡುವೆ ಜೆಡಿಎಸ್‌ ಸೇರ್ತಾರೇ, ಇಲ್ಲವೇ ಕಾಂಗ್ರೆಸ್‌ ಪಕ್ಷ ಸೇರ್ತಾರೆ ಎಂಬ ಮಾತುಗಳು ಕೇಳಿ ಬಂದವು. ಸ್ಪರ್ಧೆ ಖಚಿತ  ಎನ್ನುವುದಾದರೂ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎನ್ನುವುದು ದಿನವಿಡಿ ಚರ್ಚೆ ನಡೆದರೂ ರಾತ್ರಿವರೆಗೂ ಯಾವುದೇ ನಿರ್ಧಾರ ಅಂತಿಮಗೊಳ್ಳಲಿಲ್ಲ.  

ಬಿಎಸ್‌ವೈ ವಿರುದ್ದ ಗುಡುಗು: ಬಿಜೆಪಿ ಟಿಕೆಟ್‌ ವಂಚಿತವಾಗಿದ್ದಕ್ಕೆ ಮಾಜಿ ಸಚಿವ ರೇವುನಾಯಕ ಬೆಳಮಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ ಯಡಿಯೂರಪ್ಪ  ಅವರ ವಿರುದ್ಧ ತೊಡೆ ತಟ್ಟಿದ್ದಾರೆ. ಕಲಬುರ್ಗಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ನಂತರ ಮಾತನಾಡಿದ ಬೆಳಮಗಿ, ರಾಜ್ಯಾದ್ಯಂತ ಪ್ರವಾಸ ಮಾಡಿ  ಯಡಿಯೂರಪ್ಪ ತಮಗೆ ಮಾಡಿರುವ ದ್ರೋಹವನ್ನು ಜನತೆಗೆ ತಿಳಿಸುತ್ತೇನೆ ಎಂದು ಗುಡುಗಿದರು. 

ಈ ಹಿಂದೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ದಾಗ ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡಲಿಲ್ಲ ಎನ್ನುವ ಕಾರಣಕ್ಕೆ ಬೆನ್ನಿಗೆ ಚೂರಿ ಹಾಕಿದರೆಂದು ಯಡಿಯೂರಪ್ಪ  ರಾಜ್ಯಾದ್ಯಂತ ಸಂಕಲ್ಪಯಾತ್ರೆ ಮಾಡಿದರು. ಆಗ ಅವರ ಹಿಂದೆ ನಾನಿದ್ದು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿ¨ªೆ. ಆದರೆ ಈಗ ತಮ್ಮ ಬೆನ್ನಿಗೆ ಚೂರಿ ಹಾಕಿದ್ದಾರೆ. ತಾವು ಸಹ ರಾಜ್ಯಾದ್ಯಂತ ಸಂಕಲ್ಪಯಾತ್ರೆ  ನಡೆಸಿ ಬಿಎಸ್‌ವೈ ವಿರುದ್ಧ ಪ್ರಚಾರ ಮಾಡುವುದಾಗಿ ರೇವುನಾಯಕ ಬೆಳಮಗಿ  ಘೋಷಿಸಿದರು.

ಬೆಂಬಲಿಗರ ಆಸೆಯಂತೆ ಬಿಜೆಪಿ ತೊರೆದು, ಯಾವುದಾದರೂ ಪಕ್ಷ ಸೇರಿ ಅಥವಾ ಪಕ್ಷೇತರವಾಗಿ ಸ್ಪರ್ಧಿಸುವುದು ಖಚಿತ ಎಂದು  ಸ್ಪಷ್ಟಪಡಿಸಿದರು. ಒಂದು ಹಂತದಲ್ಲಿ ಯಡಿಯೂರಪ್ಪರನ್ನು ಏಕವಚನದಲ್ಲಿ ನಿಂದಿಸಿದ ಬೆಳಮಗಿ, ಬಂಜಾರಾ ಸಮುದಾಯದ ತಾಕತ್ತು ಎಷ್ಟು ಅನ್ನೋದನ್ನು  ಅವನಿಗೆ ತೋರಿಸುತ್ತೇನೆ ಎಂದರು. ಜೆಡಿಎಸ್‌ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಹಿತಚಿಂತಕರು ಒತ್ತಡ ಹೇರುತ್ತಿದ್ದಾರೆ. 

ಒಟ್ಟಾರೆ  ಸಭೆಯ ನಂತರ ಸೂಕ್ತ ನಿರ್ಧಾರ ಕೈಗೊಳುತ್ತೇನೆ. ಚುನಾವಣೆಗೆ ನಿಲ್ಲುವುದು ನಿಶ್ಚಿತ. ಜೊತೆಗೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಬಿಜೆಪಿ ವಿರುದ್ಧ  ಪ್ರಚಾರ ನಡೆಸಲಿದ್ದೇನೆ ಎಂದು ಹೇಳಿದರು. ಪಕ್ಷದ ರಾಷ್ಟ್ರೀಯ  ನಾಯಕರು ನನ್ನ ಹೆಸರನ್ನೇ ಅಂತಿಮ ಗೊಳಿಸಿದ್ದರೂ ಅದನ್ನು ರಾಜ್ಯ ಘಟಕವು ತೆಗೆದುಹಾಕಿದೆ. ಈ ಕ್ರಮದ ಹಿಂದೆ ಯಡಿಯೂರಪ್ಪ ಅವರ ಕೈವಾಡವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಡೀ ರಾಜ್ಯದಲ್ಲಿಯೇ ಬಿಜೆಪಿ ಏನೂ  ಇಲ್ಲದ ಸಂದರ್ಭದಲ್ಲಿ ನಾನು ಶಾಸಕನಾಗಿ ಆಯ್ಕೆಯಾಗಿದ್ದೆ. ಇಲ್ಲಿಯವರೆಗೆ ನಾಲ್ಕು ಬಾರಿ ಬಿಜೆಪಿಯಿಂದಲೇ ಶಾಸಕನಾಗಿ ಜಿಲ್ಲೆಯಲ್ಲಿ ಪಕ್ಷವನ್ನು  ಕಟ್ಟಿ ಬೆಳೆಸಿರುವೆ. ಒಮ್ಮೆ ಸಚಿವನಾಗಿಯೂ ಕಾರ್ಯನಿರ್ವಹಿಸಿರುವೆ. ನಾನು ಯಾವುದೇ ತಪ್ಪು ಮಾಡದೇ ಇದ್ದರೂ ನನಗೆ ಏಕೆ ಟಿಕೆಟ್‌ ಕೊಡಲಿಲ್ಲ?  ಎಂಬುದರ ಕುರಿತು ಸ್ವತಃ ಬಿ.ಎಸ್‌. ಯಡಿಯೂರಪ್ಪ ಅವರೇ ಸ್ಪಷ್ಟನೇ ನೀಡಬೇಕು ಎಂದು ಒತ್ತಾಯಿಸಿದರು. 

ಟಾಪ್ ನ್ಯೂಸ್

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.