ಹೆಸರಿಗೆ ಮಾತ್ರ ಎಂಬಂತಿದೆ ತೊಗರಿ ಅಭಿವೃದ್ದಿ ಮಂಡಳಿ


Team Udayavani, Jun 13, 2022, 9:59 AM IST

2toordaal

ಕಲಬುರಗಿ: ಎರಡು ದಶಕಗಳ ಹಿಂದೆ ಈ ಭಾಗದ ತೊಗರಿ ಅಭಿವೃದ್ಧಿ ನಿಟ್ಟಿನಲ್ಲಿ ಅಸ್ತಿತ್ವಕ್ಕೆ ಬಂದ ತೊಗರಿ ಅಭಿವೃದ್ಧಿ ಮಂಡಳಿ ಹೆಸರಿಗೆ ಮಾತ್ರ ಎಂಬಂತಿದೆ.

ಎಸ್‌.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಅಸ್ತಿತ್ವಕ್ಕೆ ಬಂದಿರುವ ತೊಗರಿ ಅಭಿವೃದ್ಧಿ ಮಂಡಳಿ ಆರಂಭಗೊಂಡ ದಿನದಿಂದಲೂ ಇಂದಿನವರೆಗೂ ಹಾಗೆ ಇದೆ. ಎಳ್ಳು ಕಾಳಷ್ಟು ಪ್ರಗತಿ ಇಲ್ಲ. 5 ಕೋ.ರೂ ಅನುದಾನದೊಂದಿಗೆ ಮಂಡಳಿ ಅಸ್ತಿತ್ವಕ್ಕೆ ಬಂದಿದ್ದು, ತದ ನಂತರ ನಯಾಪೈಸೆ ಅನುದಾನ ದೊರಕಿಲ್ಲ. ಯಾವುದೋ ಸಾಂಸ್ಕೃತಿಕ ಸಂಘಕ್ಕೆ ನೂರಾರು ಕೋ. ರೂ. ನೀಡುವ ಸರ್ಕಾರ ಲಕ್ಷಾಂತರ ರೈತರ ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಆರ್ಥಿಕ ಸ್ಥಿತಿಯನ್ನೇ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ತೊಗರಿ ಅಭಿವೃದ್ಧಿ-ಉತ್ತೇಜನಕ್ಕೆ ನಿರ್ಲಕ್ಷ್ಯತನ ವಹಿಸಿರುವುದು ಒಂದು ದುರಂತವೆಂದೇ ಹೇಳಬಹುದು.

ತೊಗರಿ ಅಭಿವೃದ್ಧಿ ಮಂಡಳಿ ಕಾಫಿ, ತೆಂಗು ಅಭಿವೃದ್ಧಿ ಮಂಡಳಿಯಷ್ಟು ಸಬಲತೆ ಹೊಂದಿದ್ದರೆ ತೊಗರಿ ಬೆಂಬಲ ಬೆಲೆ ಹೆಸರಿಗಿಂತ ಹೆಚ್ಚಾಗಿರುವಲ್ಲಿ ಯಾವುದೇ ಅನುಮಾನ ಇರುತ್ತಿರಲಿಲ್ಲ. ಮೊದಲು ಸ್ಥಳೀಯವಾಗಿಯೇ ಅಭಿವೃದ್ಧಿಗೆ ಸೂಕ್ತ ವಾತಾವರಣ ಕಲ್ಪಿಸದೇ ಇದ್ದು, ಕೇಂದ್ರದತ್ತ ಬೊಟ್ಟು ಮಾಡುವುದು ಸಮಂಜಸವೆನಿಸಲ್ಲ.

ವಿಧಾನಸಭಾ ಅಧಿವೇಶನದಲ್ಲಿ ಕಬ್ಬು, ರೇಷ್ಮೆ, ಕಾಫಿ, ಭತ್ತ, ರಾಗಿ, ತೆಂಗು ಸೇರಿದಂತೆ ಇತರೆ ಬೆಳೆಗಳ ಕುರಿತಾಗಿ ಚರ್ಚೆಯಾಗುತ್ತದೆ. ಆದರೆ ತೊಗರಿ ಬಗ್ಗೆ ಹೆಚ್ಚಿನ ಚರ್ಚೆಯಾದ ಉದಾಹರಣೆಯೇ ಇಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಂದಾಜು 20 ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ಬಿತ್ತನೆಯಾಗುವ ತೊಗರಿಗೆ ಸೂಕ್ತ ಬೆಂಬಲ ಬೆಲೆ, ಮಾರುಕಟ್ಟೆಯಲ್ಲಿ ಕೃಷಿ ವೆಚ್ಚಕ್ಕಾಗುವ ಖರ್ಚಿಗಿಂತ ಹೆಚ್ಚಿನ ಬೆಲೆ ಸ್ಥಿರವಾಗದಿರುವುದು ನಿಜಕ್ಕೂ ಆತ್ಮಾವಲೋಕನ ಮಾಡುವಂತಿದೆ.

ತೊಗರಿ ಬೆಂಬಲ ಬೆಲೆಯಲ್ಲಿನ ಶೋಷಣೆ, ಜನಪ್ರತಿನಿಧಿಗಳ ನಿರ್ಲಕ್ಷ್ಯತನ, ಬೆಳೆವಿಮೆ ಮಂಜೂರಾತಿಯಲ್ಲೂ ಅನ್ಯಾಯ ಕುರಿತಾಗಿ ಬರೆಯಲು ಹೋದರೆ ಧಾರಾವಾಹಿಯಾಗುತ್ತದೆ. ಹೀಗಾಗಿ ಇದಕ್ಕೆ ಸಾರ್ವಜನಿಕ ವ್ಯಾಪಕ ಹೋರಾಟವೇ ಸೂಕ್ತ ಮದ್ದಾಗಿದೆ. ಪ್ರಮುಖವಾಗಿ ಯಾವುದೇ ಜನಪ್ರತಿನಿಧಿ ತಮ್ಮ ಬಳಿ ಬಂದಾಗ ತೊಗರಿ ಬೆಲೆ ಹೆಚ್ಚಾಗಲು ಏನು ಮಾಡುತ್ತೀರಿ? ಎಂದು ಪ್ರತಿಯೊಬ್ಬ ರೈತರು ಕೇಳಬೇಕು. ಹೀಗೆ ಕೇಳುವುದು ಒಂದು ಜನಾಂದೋಲನವಾದಲ್ಲಿ ತಕ್ಕಮಟ್ಟಿಗೆ ತೊಗರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಕೆಎಂಫ್ ಮಾದರಿಯಲ್ಲಾಗಲಿ ತೊಗರಿ ಮಂಡಳಿ

ಹಾಲು ಉತ್ಪಾದಕರ ಸಹಕಾರ ಮಂಡಳಿಯಂತೆ ತೊಗರಿ ಅಭಿವೃದ್ಧಿ ಮಂಡಳಿಯಾದಲ್ಲಿ ಜತೆಗೆ ಸರ್ಕಾರದ ವಿವಿಧ ಯೋಜನೆಗಳಿಗೆ ಸರ್ಕಾರದಿಂದಲೇ ದಾಲ್‌ಮಿಲ್‌ ಸ್ಥಾಪಿಸಿ ಅದರಿಂದ ಬೇಳೆ ತಯಾರಿಸಿ ಪೂರೈಸಿದಲ್ಲಿ ಸರ್ಕಾರಕ್ಕೆ ಕೋಟ್ಯಂತರ ರೂ. ಉಳಿಕೆಯಾಗುತ್ತದೆಯಲ್ಲದೇ ತೊಗರಿಗೂ ಉತ್ತಮ ಬೆಲೆ ಜತೆಗೆ ಬೆಂಬಲ ಬೆಲೆ ಹೆಚ್ಚಳಕ್ಕೂ ಪೂರಕವಾಗುತ್ತದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಸಣ್ಣದಾದ ಪ್ರಯತ್ನ ಮಾಡುತ್ತಿಲ್ಲ. ಸುಮ್ಮನೆ ಹೇಳಿಕೆ ಕೊಡುವುದಕ್ಕೆ ಮಾತ್ರ ಸಿಮೀತವಾಗಿರುವುದು ತೊಗರಿ ಸಮಸ್ಯೆಗೆ ಪರಿಹಾರ ಇಲ್ಲದಂತಾಗಿದೆ.

ತೊಗರಿ ಅಭಿವೃದ್ಧಿ ಮಂಡಳಿಯು ಕಾಫಿ ಮಂಡಳಿಯಂತಾಗಲಿ. ಕಾಫಿ ಮಂಡಳಿಗಿರುವ ಹಣಕಾಸು ವ್ಯವಹಾರದ ಅಧಿಕಾರ, ಅನುದಾನ ನಮ್ಮ ತೊಗರಿ ಮಂಡಳಿಗೂ ನೀಡಿದರೆ ಕಲಬುರಗಿ ತೊಗರಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿ ಬೆಲೆ ಹೆಚ್ಚಿಸಿಕೊಳ್ಳಬ ಹುದಾಗಿದೆ. ಕಲಬುರಗಿ ತೊಗರಿ ವಿದೇಶಕ್ಕೂ ರಫ್ತಾಗಲಿ. ಆಗ ನಮ್ಮ ತೊಗರಿ ಮೌಲ್ಯ ಎಷ್ಟು ಎಂಬುದು ಗೊತ್ತಾಗುತ್ತದೆ. ಬಸವರಾಜ ಇಂಗಿನ್‌, ಅಧ್ಯಕ್ಷ, ಕರ್ನಾಟಕ ಪ್ರದೇಶ ತೊಗರಿ ಬೆಳೆಗಾರರ ಸಂಘ

ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

police crime

Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.