![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-415x247.jpg)
ಕಾಯ್ದೆ ತಿದ್ದುಪಡಿ ವಿರೋಧಿಸಿ ಖಾಸಗಿ ಆಸ್ಪತ್ರೆ ಬಂದ್
Team Udayavani, Nov 4, 2017, 10:18 AM IST
![gul.jpg](https://www.udayavani.com/wp-content/uploads/2017/11/4/gul-620x265.jpg)
ಕಲಬುರಗಿ: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ರಾಜ್ಯವ್ಯಾಪಿ ಕರೆಯ ಮೇರೆಗೆ ಶುಕ್ರವಾರ ಖಾಸಗಿ ಆಸ್ಪತ್ರೆಗಳ ವೈದ್ಯರು ತಮ್ಮ ಆಸ್ಪತ್ರೆಗಳನ್ನು ಬಂದ್ ಮಾಡಿ ಮುಷ್ಕರ ನಡೆಸಿದ್ದರಲ್ಲದೇ ಬೃಹತ್ ಪ್ರತಿಭಟನೆ ನಡೆಸಿದರು.
ಖಾಸಗಿ ವೈದ್ಯರೆಲ್ಲ ಮುಷ್ಕರ ಕೈಗೊಂಡ ಪರಿಣಾಮ ರೋಗಿಗಳು ವೈದ್ಯಕೀಯ ಸೇವೆ ಸಿಗದೇ ಪರದಾಡಿದರು. ಆಸ್ಪತ್ರೆಗಳ ಓಪಿಡಿ ಬೀಕೋ ಎನ್ನುತ್ತಿದ್ದವು. ಮುಷ್ಕರದಲ್ಲಿ ವೈದ್ಯಕೀಯ ಸಂಸ್ಥೆಗಳು, ವೈದ್ಯಕೀಯ ಶಿಕ್ಷಣ ಸಂಸ್ಥೆಗಳು, ದಂತ ವೈದ್ಯರ ಒಕ್ಕೂಟ, ಪ್ರಯೋಗಾಲಯಗಳು, ಕರ್ನಾಟಕ ಖಾಸಗಿ ಅಸ್ಪತ್ರೆಗಳ ಒಕ್ಕೂಟ, ವಿವಿಧ ತಜ್ಞ ವೈದ್ಯರ ಸಂಘಟನೆಗಳು, ನರ್ಸಿಂಗ್ ಹೋಮ್ಸ್ ಅಸೋಶಿಯೇಶನ್, ರಕ್ತನಿಧಿಗಳು ಸೇರಿದಂತೆ ಇತರರೆಲ್ಲರೂ ಪಾಲ್ಗೊಂಡಿದ್ದರಿಂದ ಖಾಸಗಿ ಆಸ್ಪತ್ರೆಗಳು ರೋಗಿಗಳು ಇಲ್ಲದೇ ಭಣಗುಡುತ್ತಿದ್ದವು.
ಬಂದ್ ಕರೆಯಿಂದಾಗಿ ನಗರದ ಪ್ರತಿಷ್ಠಿತ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಮತ್ತು
ಸಾರ್ವಜನಿಕ ಆಸ್ಪತ್ರೆ, ಸಂಗಮೇಶ್ವರ್ ಆಸ್ಪತ್ರೆ, ಯುನೈಟೆಡ್ ಆಸ್ಪತ್ರೆ ಸೇರಿದಂತೆ ಬಹುತೇಕ ಜಿಲ್ಲೆಯಾದ್ಯಂತ ಇರುವ ಎಲ್ಲ 700 ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದವು. ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಶಾಖೆಯ ನೇತೃತ್ವದಲ್ಲಿ ಖಾಸಗಿ ವೈದ್ಯರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನಾ ಪ್ರದರ್ಶನ ನಡೆಸಿದರಲ್ಲದೇ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಭಾರತೀಯ ವೈದ್ಯ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ಡಾ| ಕಿರಣ ದೇಶಮುಖ, ಹಿರಿಯ ವೈದ್ಯರಾದ ಡಾ| ಎಸ್. ಎಸ್. ಪಾಟೀಲ, ಡಾ| ಇಂದಿರಾ ಶಕ್ತಿ, ಡಾ| ಜಗನ್ನಾಥ ಬಿಜಾಪುರ, ಡಾ| ಎನ್.ಜಿ ಗಚ್ಚಿನಮನಿ, ಡಾ| ಆಂದೋಲಾ, ಡಾ| ಸಂತೋಷ ಮಂಗಶೆಟ್ಟಿ, ಡಾ| ಅಲೋಕ ಸಿ. ಪಾಟೀಲ ರೇವೂರ, ಡಾ| ಸಚೀನ ಶಹಾ ಇದ್ದರು.
ಸೇಡಂ: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಕೈಗೊಂಡ ಒಂದು ದಿನದ ಸಾಂಕೇತಿಕ ಬಂದ್ ಯಶಸ್ವಿಯಾಯಿತಾದರೂ ರೋಗಿಗಳು ಪರದಾಡಿದರು. ಬೆಳಗ್ಗೆಯಿಂದ ಹೊರ ರೋಗಿಗಳಿಗೆ ಅವಕಾಶ ನೀಡದೆ ಖಾಸಗಿ ಆಸ್ಪತ್ರೆಗಳ ಬಾಗಿಲು ಮುಚ್ಚಿದ್ದವು ಇದರಿಂದ ರೋಗಿಗಳು ಸರ್ಕಾರಿ ಆಸ್ಪತ್ರೆಯತ್ತ ಮುಖ ಮಾಡಿದರಾದರೂ ಸರಿಯಾದ ಸೌಕರ್ಯ ಸಿಗದೆ ಹಿಂದಿರುಗಿದ ಪ್ರಸಂಗಗಳು ನಡೆದವು.
ಭಾರತೀಯ ವೈದ್ಯಕೀಯ ಸಂಘದೊಂದಿಗೆ ಸಹಾಯಕ ಆಯುಕ್ತರ ಕಚೇರಿಗೆ ಆಗಮಿಸಿದ ಅನೇಕ ವೈದ್ಯರು ತಮ್ಮ ಬೇಡಿಕೆಗಳುಳ್ಳ ಮನವಿ ಪತ್ರವನ್ನು ಎಸಿ ಡಾ| ಸುಶೀಲಾ ಅವರಿಗೆ ಸಲ್ಲಿಸಿದರು.
ಹಿರಿಯ ವೈದ್ಯ ಡಾ| ಎಸ್.ಬಿ. ಸುಂಕದ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ| ಸದಾನಂದ ಬೂದಿ, ಕುಟುಂಬ ವೈದ್ಯರ ಸಂಘದ ಅಧ್ಯಕ್ಷ ಡಾ| ಮೋಹನರೆಡ್ಡಿ ರುದ್ರವಾರ, ಡಾ| ಶ್ರೀನಿವಾಸರೆಡ್ಡಿ ಕೋಲಕುಂದಾ, ಡಾ| ಶಿವಶಂಕರ ತಳ್ಳಳ್ಳಿ, ಡಾ| ಉದಯಕುಮಾರ ಶಹಾ, ಡಾ| ಶರತಕುಮಾರ ದೇಸಾಯಿ, ನಿಸರ್ಗ ಆಸ್ಪತ್ರೆ ನಿರ್ದೇಶಕ ಡಾ| ಶ್ರೀನಿವಾಸ ಮೊಕದಮ್, ಡಾ| ರಾಜಕುಮಾರ ಬಿರಾದಾರ, ಡಾ| ಎಸ್.ಎಚ್. ಲಗಶೆಟ್ಟಿ ಇವಣಿ, ಡಾ| ಜಗನ್ನಾಥ ಗಡ್ಡದ ಡಾ| ಶ್ರೀನಿವಾಸ ರಂಜೋಳಕರ್, ಡಾ| ಸಲ್ಲಾವುದ್ದಿನ್, ಡಾ| ಸಂಗಪ್ಪ ಮುಧೋಳ, ಡಾ| ಸಂತೋಷ ಚವ್ಹಾಣ, ಡಾ| ಮೋಯಿನ್, ಸಿದ್ಧರಾಜ ತೊಟೇಂದ್ರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sharana-Patil](https://www.udayavani.com/wp-content/uploads/2024/12/Sharana-Patil-150x90.jpg)
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
![All set for the Indian Cultural Festival](https://www.udayavani.com/wp-content/uploads/2024/12/samas-150x86.jpg)
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
![Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ](https://www.udayavani.com/wp-content/uploads/2024/12/cafe-150x86.jpg)
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
![Collection of donations in the name of Sri Siddalinga of Siddaganga Math: Old students upset](https://www.udayavani.com/wp-content/uploads/2024/12/kal-1-150x84.jpg)
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
![Togari completely destroyed by neti disease](https://www.udayavani.com/wp-content/uploads/2024/12/toigar-150x84.jpg)
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
![1](https://www.udayavani.com/wp-content/uploads/2024/12/1-37-150x80.jpg)
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
![Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್](https://www.udayavani.com/wp-content/uploads/2024/12/3-35-150x90.jpg)
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
![28 cricketers who said goodbye in 2024; Here is the list](https://www.udayavani.com/wp-content/uploads/2024/12/retired-150x87.jpg)
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
![5-hunsur](https://www.udayavani.com/wp-content/uploads/2024/12/5-hunsur-150x90.jpg)
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.