![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-415x255.jpg)
ಮಳೆ ನೀರಿಗೆ ಜಿನುಗುತ್ತಿದೆ ಶಾಲೆ ಕಟ್ಟಡ
Team Udayavani, Jul 15, 2022, 4:57 PM IST
![17school](https://www.udayavani.com/wp-content/uploads/2022/07/17school-620x355.jpg)
ಆಳಂದ: ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ವಿವಿಧ ಗ್ರಾಮದಲ್ಲಿ 17 ಮನೆಗಳಿಗೆ ಹಾನಿಯಾಗಿದೆ. ಅಲ್ಲದೇ ತಡೋಳಾ, ಮಾಡಿಯಾಳ, ಸರಸಂಬಾ, ಕೊಡಲಹಂಗರಗಾ ಸೇರಿದಂತೆ ಅನೇಕ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಕಟ್ಟಡದ ಛಾವಣಿಯಿಂದ ನೀರು ಒಸರುತ್ತಿದೆ. ಇದರಿಂದ ಪಾಠ ಬೋಧನೆಗೆ ಅಡೆ, ತಡೆಯಾಗುತ್ತಿದೆ. ತಡೋಳಾ ಗ್ರಾಮದ ಹೊರವಲಯದಲ್ಲಿ 2011ರಲ್ಲಿ ಸರ್ಕಾರಿ ಪ್ರೌಢಶಾಲೆ ಕಟ್ಟಡ ನಿರ್ಮಾಣವಾಗಿದೆ.
ಮರಾಠಿ ಮಾಧ್ಯಮ ಪ್ರೌಢಶಾಲೆಯಲ್ಲಿ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಯ ಛಾವಣಿ ಮೇಲೆ ನೀರು ಸಂಗ್ರಹವಾಗಿ ಕೋಣೆಗಳ ಒಳಗೆ ನೀರು ಜಿನುಗುತ್ತಿದೆ. ತಡೋಳಾ ಗ್ರಾಪಂ ಅಧ್ಯಕ್ಷ ಮೈಲಾರಿ ಜೋಗೆ ನೇತೃತ್ವದಲ್ಲಿ ಪಾಲಕರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಭೇಟಿಯಾಗಿ ಕೋಣೆಗಳ ದುರಸ್ಥಿಗೆ ಮನವಿ ಮಾಡಿದರು.
ಕಳೆದ 10ವರ್ಷಗಳ ಹಿಂದೆ ಕಟ್ಟಿದ ಶಾಲಾ ಕಟ್ಟಡದ ಕಾಮಗಾರಿ ಕಳಪೆಯಾಗಿದ್ದರಿಂದ ಈ ಸ್ಥಿತಿ ನಿರ್ಮಾಣವಾಗಿದೆ. ಎಂಜಿನಿಯರ್ ಕರೆಯಿಸಿ ಕಟ್ಟಡದ ಬಾಳಿಕೆ ಪರಿಶೀಲಿಸಿ ಎಂದು ಹೋರಾಟಗಾರ ಮೌಲಾ ಮುಲ್ಲಾ ಒತ್ತಾಯಿಸಿದರು.
ಡಿಡಿಪಿಐಗಳಿಗೆ ತಕ್ಷಣ ವರದಿ ಸಲ್ಲಿಸಲಾಗುವುದು. ತಾತ್ಕಾಲಿಕವಾಗಿ ಸಮೀಪದಲ್ಲಿನ ಸರ್ಕಾರಿ ಕಟ್ಟಡದಲ್ಲಿ ಪ್ರೌಢಶಾಲೆ ತರಗತಿಗಳು ನಡೆಸುವ ವ್ಯವಸ್ಥೆ ಮಾಡುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗಲಮುಡಿ ಭರವಸೆ ನೀಡಿದರು.
ಗ್ರಾಪಂ ಸದಸ್ಯರಾದ ಮಹಾವೀರ ಕಾಂಬಳೆ, ಕಮಲೇಶ ಅವಟೆ, ಪ್ರಭಾಕರ ಸುತಾರ, ಜೈಭೀಮ ಗಾಯಕವಾಡ, ಅಸ್ಪಾಕ್ ಮುಲ್ಲಾ, ತುಕರಾಮ ನಕಾತೆ ಇದ್ದರು. ಮಳೆಗೆ ಸೋರುತ್ತಿರುವ ಕುರಿತು ಸಾಕಷ್ಟು ಶಾಲೆಗಳಿಂದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾ ಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಶಾಲೆಯ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-415x255.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sharana-Patil](https://www.udayavani.com/wp-content/uploads/2024/12/Sharana-Patil-150x90.jpg)
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
![All set for the Indian Cultural Festival](https://www.udayavani.com/wp-content/uploads/2024/12/samas-150x86.jpg)
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
![Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ](https://www.udayavani.com/wp-content/uploads/2024/12/cafe-150x86.jpg)
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
![Collection of donations in the name of Sri Siddalinga of Siddaganga Math: Old students upset](https://www.udayavani.com/wp-content/uploads/2024/12/kal-1-150x84.jpg)
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
![Togari completely destroyed by neti disease](https://www.udayavani.com/wp-content/uploads/2024/12/toigar-150x84.jpg)
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು](https://www.udayavani.com/wp-content/uploads/2024/12/CHIKKAMAGALURU-150x98.jpg)
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
![Mulabagil](https://www.udayavani.com/wp-content/uploads/2024/12/Mulabagil-150x90.jpg)
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
![Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್](https://www.udayavani.com/wp-content/uploads/2024/12/gpar-150x93.jpg)
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
![Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ](https://www.udayavani.com/wp-content/uploads/2024/12/pet-dog-150x84.jpg)
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.