ಕುಂಚಾವರಂ ವನ್ಯಜೀವಿಧಾಮದಲ್ಲಿ ಹುಲಿ ಗಣತಿ


Team Udayavani, Feb 25, 2022, 9:19 AM IST

1forest

ಚಿಂಚೋಳಿ: ತಾಲೂಕಿನ ಕುಂಚಾವರಂ ವನ್ಯಜೀವಿ ಧಾಮ ಅರಣ್ಯ ಪ್ರದೇಶದಲ್ಲಿ ಹುಲಿ ಗಣತಿ ಹಾಗೂ ಇನ್ನಿತರ ಪ್ರಾಣಿಗಳ ಮಾಹಿತಿ ದಾಖಲಿಸುವ ಕಾರ್ಯವನ್ನು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸುತ್ತಿದ್ದಾರೆ.

ಅಖೀಲ ಭಾರತ ಹುಲಿ ಗಣತಿ ಸೇರಿದಂತೆ ಇನ್ನಿತರ ಪ್ರಾಣಿಗಳ ಕುರಿತು ಮಾಹಿತಿ ದಾಖಲಿಸುವ ಕಾರ್ಯ ಫೆ. 17ರಿಂದ ಪ್ರಾರಂಭವಾಗಿದ್ದು, ಮೊದಲ ಹಂತದಲ್ಲಿ ಕರ್ನಾಟಕ ರಾಷ್ಟ್ರೀಯ ವನ್ಯಜೀವಿಧಾಮ ಮತ್ತು ಸಂರಕ್ಷಿತ ಅರಣ್ಯ, ಇತರೆ ಪ್ರಾದೇಶಿಕ ಅರಣ್ಯ ವ್ಯಾಪ್ತಿಯಲ್ಲಿ ನಡೆಯುತ್ತಿದೆ.

ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶದಲ್ಲಿ ಪ್ರಾಣಿಗಳ ಗಣತಿ ಕಾರ್ಯ ಮಾಡುವುದಕ್ಕಾಗಿ 14 ತಂಡ ರಚಿಸಲಾಗಿದೆ. ಪ್ರತಿಯೊಂದು ತಂಡದಲ್ಲಿ ಮೂರರಿಂದ ಐವರು ಅರಣ್ಯ ಇಲಾಖೆ ಸಿಬ್ಬಂದಿ ಇರುತ್ತಾರೆ. ಈ ತಂಡಗಳು ಮೂರು ದಿನಗಳ ಕಾಲ (ಫೆ.28ರ ವರೆಗೆ) ಅರಣ್ಯಪ್ರದೇಶದ ಬೇರೆಬೇರೆ ಭಾಗಗಳಲ್ಲಿ 5ಕಿ.ಮೀ ವರೆಗೆ ಪ್ರತಿ ದಿನ ಗಸ್ತು ತಿರುಗಲಿವೆ. ಈ ವೇಳೆ ಕಂಡು ಬರುವ ಮಾಂಸಹಾರಿ ಪ್ರಾಣಿಗಳ ಮಾಹಿತಿ, ಇಲ್ಲವೇ ಧ್ವನಿ ಕೇಳಿಸಿದರೆ, ಅವುಗಳ ಹೆಜ್ಜೆ ಗುರುತು, ಹಿಕ್ಕೆ, ನೆಲ ಕೆದರುವುದು, ಗಿಡ ಕೆದರುವುದು, ಪ್ರಾಣಿಗಳ ಕಳೆಬರ ಕಂಡು ಬಂದರೆ ದಾಖಲಿಸಲಾಗುತ್ತದೆ.

ಮಾಂಸಹಾರಿ ಪ್ರಾಣಿಗಳಾದ ಹುಲಿ, ಚಿರತೆ, ಕಾಡು ನಾಯಿ, ತೋಳ, ನರಿ, ಕತ್ತೆಕಿರುಬ, ಪುನುಗು ಬೆಕ್ಕು, ಕಾಡು ಬೆಕ್ಕು, 2ಕಿ.ಮೀ ಉದ್ದದಲ್ಲಿ ಸುಣ್ಣದಿಂದ ರೇಖೆ ಹಾಕಿ ಅದರಲ್ಲಿ ವಿವಿಧ ವಿನ್ಯಾಸದ ವೃತ್ತ ಹಾಕಿ ಅದರಲ್ಲಿ ದೊರೆತ ಸಸ್ಯಪ್ರಕಾರಗಳು, ಹುಲ್ಲಿನ ಮಾಹಿತಿ ದಾಖಲಿಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶದಲ್ಲಿ ಬರುವ ಕುಸರಂಪಳ್ಳಿ ಅರಣ್ಯಪ್ರದೇಶದಲ್ಲಿ ಚಿರತೆಗಳ ಹೆಜ್ಜೆ ಗುರುತುಗಳು ಕಂಡು ಬಂದಿವೆ.

ಗೊಟ್ಟಂಗೊಟ್ಟ, ಮಾಣಿಕಪುರ, ಸಂಗಾಪುರ, ಧರ್ಮಸಾಗರ, ಸೇರಿಭಿಕನಳ್ಳಿ, ಭೋಗಾಲಿಂಗದಳ್ಳಿ, ಚಂದ್ರಂಪಳ್ಳಿ ಅರಣ್ಯಪ್ರದೇಶದಲ್ಲಿ ಕಳೆದ ಐದಾರು ವರ್ಷಗಳಿಂದ ಚಿರತೆ ಹೆಜ್ಜೆಗುರುತುಗಳು ಕಂಡು ಬರುತ್ತಿವೆ. ಕಲಬುರಗಿ ಎಸಿಎಫ್‌ ಸುನೀಲ ಚವ್ಹಾಣ, ಉಪ-ವಲಯ ಅರಣ್ಯಾಧಿಕಾರಿ ಸಿದ್ಧಾರೂಢ ಹೊಕ್ಕುಂಡಿ, ಭಾನುಪ್ರತಾಪಸಿಂಗ್‌, ನಟರಾಜ, ಅರಣ್ಯರಕ್ಷಕರಾದ ಶೇಖ್‌ ಅಹೆಮದ್‌, ಮಾಳಪ್ಪ ಪೂಜಾರಿ, ಹಾಲೇಶ ಪ್ರಭು ಜಾಧವ ಇನ್ನಿತರರು ಪ್ರಾಣಿಗಳ ಗಣತಿ ಕಾರ್ಯದಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.