ಮಳೆಯಲ್ಲಿ ಹರಿದು ಹೋಯ್ತು ತರಕಾರಿ


Team Udayavani, Aug 31, 2017, 10:59 AM IST

gul-5.jpg

ಅಫಜಲಪುರ: ಕುಂಭದ್ರೋಣ ಮಳೆ ಪ್ರಭಾವದಿಂದ ಪಟ್ಟಣದಲ್ಲಿ ಸುರಿದ ಅಲ್ಪ ಪ್ರಮಾಣದ ಮಳೆಯಿಂದ
ಸೋಮವಾರದ ಸಂತೆಯಲ್ಲಿದ್ದ ತರಕಾರಿ ಹರಿದು ಹೋಗಿ ವ್ಯಾಪಾರಿಗಳು ಕಂಗಾಲಾಗುವಂತೆ ಆಗಿತ್ತು.

ಪಟ್ಟಣದ ಮಳೇಂದ್ರ ಮಠದಿಂದ ಚೌಡಿ, ನಿಚೆಗಲ್ಲಿ ಹಾಗೂ ಹಳೆ ಪುರಸಭೆ ಕಚೇರಿ ವರೆಗೂ ಕಿರಿದಾದ ರಸ್ತೆಗಳಲ್ಲಿ ವಾರದ ಸಂತೆ ನೆರೆಯುತ್ತದೆ. ಈ ರಸ್ತೆಗಳಿಗೆ ದೊಡ್ಡದಾದ ಚರಂಡಿ ವ್ಯವಸ್ಥೆಯೂ ಇಲ್ಲ, ಜನಸಾಮಾನ್ಯರು ಓಡಾಡಲು ಹೆಚ್ಚಿನ ಸ್ಥಳಾವಕಾಶವೂ ಇಲ್ಲ. ಹೀಗಾಗಿ ಈ ರಸ್ತೆಯಲ್ಲಿ ಮಳೆ ನೀರು ಹರಿದು ಹೋಗಲು ಜಾಗವಿಲ್ಲದಂತಾಗಿದೆ.

ಸೋಮವಾರ ಸುರಿದ ಮಳೆಗೆ ವಾರದ ಸಂತೆಯಲ್ಲಿ ಮಾರಾಟಕ್ಕೆ ತಂದಿದ್ದ ತರಕಾರಿ ಸಂಪೂರ್ಣ ಮಳೆ
ನೀರಲ್ಲಿ ಕೊಚ್ಚಿ ಹೋಯಿತು. ಬೀದಿ ವ್ಯಾಪಾರಿಗಳು, ಸುತ್ತಮುತ್ತಲಿನ ಗ್ರಾಮಗಳ ಸಣ್ಣ ರೈತರು ಇದರಿಂದ
ಸಂಕಷ್ಟ ಅನುಭವಿಸುವಂತೆ ಆಯಿತು. ಪಟ್ಟಣದ ನಿವಾಸಿಗಳು, ಅಕ್ಕಪಕ್ಕದ ಗ್ರಾಮಗಳ ಜನರು ತರಕಾರಿಗಳನ್ನು ಕೊಂಡು ಹೋಗಬೇಕಾಗಿತ್ತು. ಆದರೆ ಪಟ್ಟಣದ ಕಿರಿದಾದ ರಸ್ತೆಗಳಲ್ಲಿ ಹರಿದ ಮಳೆ ನೀರಲ್ಲಿ ತರಕಾರಿಗಳು ಕೊಚ್ಚಿಕೊಂಡು ಹೋಗುವುದನ್ನು ಕಂಡು ವ್ಯಾಪಾರಿಗಳು ಮರುಗಿದರೆ, ಗ್ರಾಹಕರು ಪರದಾಡುವಂತೆ ಆಗಿತ್ತು.

ಸ್ಥಳಾಂತರ ಆಗದ ವಾರದ ಸಂತೆ: ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿರುವ ಖಾಯಂ ವಾರದ ಸಂತೆಕಟ್ಟೆ ನಿರ್ಮಾಣವಾಗಿ ವರ್ಷಗಳೇ ಗತಿಸಿವೆ. ಈಗ ಪುನಃ ವಾರದ ಸಂತೆ ಕಟ್ಟೆಯಲ್ಲಿ ಜಾಲಿ ಕಂಟಿ ಬೆಳೆದು ಹಾಳಾಗುತ್ತಿದೆ. ಆದರೂ ವಾರದ ಸಂತೆಯನ್ನು ಎಪಿಎಂಸಿ ಯಾರ್ಡ್‌ನಲ್ಲಿರುವ ವಾರದ ಸಂತೆ ಕಟ್ಟೆಗೆ ಸ್ಥಳಾಂತರಿಸಲು
ಸಂಬಂಧಪಟ್ಟವರು ಮುಂದಾಗುತ್ತಿಲ್ಲ. ಆರೋಪ: ಜೆಡಿಎಸ್‌ ಪಕ್ಷದ ವತಿಯಿಂದ ರೈತರೊಡನೆ ಸೇರಿ ವಾರದ ಸಂತೆಯನ್ನು ಎಪಿಎಂಸಿ ಯಾರ್ಡ್‌ ನಲ್ಲಿರುವ ಖಾಯಂ ಸಂತೆ ಕಟ್ಟೆಗೆ ಸ್ಥಳಾಂತರಿಸಬೇಕೆಂದು ಅನೇಕ ಬಾರಿ ಸಂಬಂಧಪಟ್ಟವರಿಗೆ ಮನವಿ ನೀಡಿದ್ದೇವೆ, ಹೋರಾಟಗಳು ಮಾಡಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಜೆಡಿಎಸ್‌ ತಾಲೂಕು ಅಧ್ಯಕ್ಷ ರಾಜಕುಮಾರ ಬಡದಾಳ ಆರೋಪಿಸಿದ್ದಾರೆ. ನಾವು ನೀರಿನ ಕೊರತೆಯಲ್ಲೂ ಕಷ್ಟ ಪಟ್ಟು ತರಕಾರಿ ಬೆಳೆದು ಪಟ್ಟಣಕ್ಕೆ ಮಾರಾಟಕ್ಕೆ ತಂದರೆ ಮಳೆಯು ನಮ್ಮೊಂದಿಗೆ ಆಟವಾಡಿದಂತಾಯ್ತು. ಮಳೆ ನೀರಲ್ಲಿ ನಾವು ಕಷ್ಟ ಪಟ್ಟು ಬೆಳೆದ ತರಕಾರಿ ಕೊಚ್ಚಿ ಹೋಗುವಾಗ ನಮ್ಮ ಜೀವ ಹೋದಂತಾಯ್ತು.

ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.