ಯುವತಿ ನಿಶ್ಚಿತಾರ್ಥ ಮುರಿಯಲು ಯತ್ನ; ಸಹೋದರನ ಭೀಕರ ಕೊಲೆ


Team Udayavani, Jun 6, 2021, 10:58 AM IST

ಯುವತಿ ನಿಶ್ಚಿತಾರ್ಥ ಮುರಿಯಲು ಯತ್ನ; ಸಹೋದರನ ಭೀಕರ ಕೊಲೆ

ಕಲಬುರಗಿ: ನಿಶ್ಚಿತಾರ್ಥ ಆಗುತ್ತಿದ್ದ ಸಂಬಂಧ ಮುರಿಯಲು ಯತ್ನಿಸಿದ ಹಿನ್ನೆಲೆಯಲ್ಲಿ ನಡೆದ ಜಗಳದಲ್ಲಿ ಮಗನ ಕೊಲೆಯಾಗಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಸಂಬಂಧ ಮುರಿಯುವ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಗುಂಪೊಂದು ಮಗನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ ಅಟಲ್‌ ಬಿಹಾರಿ ವಾಜಪೇಯಿ ಬಡಾವಣೆ ಬಳಿ ಶನಿವಾರ ನಡೆದಿದೆ.

ನಿಖಿಲ್ ರಾಜು ಕನೇಗಾರ (22) ಕೊಲೆಯಾಗಿರುವ ಯುವಕ. ಈತ ಕರುಣೇಶ್ವರ ನಗರದ ನಿವಾಸಿಯಾಗಿದ್ದ. ಈತನ ತಾಯಿ ಕಮಲಾ ಎನ್ನುವರಿಗೆ ಗಂಭೀರ ಗಾಯಗಳಾಗಿವೆ. ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಈಕೆಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ನಿಖಿಲ್ ಸಹೋದರ ವಿಕಾಸ ಸೇರಿದಂತೆ ಮೂವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಮಲಮ್ಮ ತರಕಾರಿ ಮಾರಾಟ ಮಾಡಿಕೊಂಡಿದ್ದರೆ, ಪತಿ ರಾಜು ರಾಮ ಮಂದಿರ ಸಮೀಪದ ಕಾಲೇಜೊಂದರಲ್ಲಿ ಅಡುಗೆ ತಯಾರಕಾಗಿ ಕೆಲಸಮಾಡುತ್ತಿದ್ದಾರೆ. ಮೂವರು ಮಕ್ಕಳೊಂದಿಗೆ ಕರುಣೇಶ್ವರ ನಗರದಲ್ಲಿ ವಾಸವಾಗಿದ್ದರು. ಕೊಲೆ ಯಾಗಿರುವ ನಿಖಿಲ್‌ ಭಜಿ ಬಂಡಿ ಇಟ್ಟುಕೊಂಡಿದ್ದ. ನಿಖಿಲ್ ನ ಸಹೋದರಿ ಮದುವೆಯನ್ನು ಮುಂಬೈನಲ್ಲಿರುವ ವ್ಯಕ್ತಿಯ ಜತೆಗೆ ನಿಗದಿಪಡಿಸಲಾಗಿತ್ತು. ಸೋಮವಾರ ಸರಳವಾಗಿ ನಿಶ್ಚಿತಾರ್ಥ ನಡೆಸಲು ತಯಾರಿ ನಡೆದಿತ್ತು. ಇದನ್ನು ಅರಿತ ಸ್ಟೇಷನ್‌ ಬಜಾರ ಪ್ರದೇಶ ಯುವಕರಿಬ್ಬರು ಸೇರಿಕೊಂಡು ಸಂಬಂಧ ಮುರಿಯಲು ಕುತಂತ್ರ ಮಾಡಿ, ಯುವಕನಿಗೆ ಕರೆ ಮಾಡಿ ಇಲ್ಲದ್ದನ್ನು ಹೇಳಿದ್ದರು. ಆ ಯುವಕ ಮರಳಿ ಯುವತಿ ಮನೆಯವರಿಗೆ ತಿಳಿಸಿದ್ದ. ಅಲ್ಲದೇ ಆ ಸಂಖ್ಯೆಗಳನ್ನು ನೀಡಿದ್ದರು. ಆ ಸಂಖ್ಯೆಗೆ ಶನಿವಾರ ಕರೆ ಮಾಡಿದಾಗ ವಾಗ್ವಾದ ಆಗಿತ್ತು. ಅಲ್ಲದೇ ರಾಮ ಮಂದಿರ ಬಳಿ ಇದ್ದೇವೆ ಬಾ ಎಂದು ಕರೆದಿದ್ದರು.

ಅಲ್ಲಿಗೆ ಹೋದಾಗ ವಾಜಪೇಯಿ ಲೇಔಟ್‌ ಹತ್ತಿರವಿದ್ದೇವೆ ಬನ್ನಿ ಎಂದು ಸವಾಲು ಹಾಕಿದ್ದರು. ನಿಖಿಲ್ ಹಾಗೂ ಮನೆಯವರು ಅಲ್ಲಿಗೆ ಹೋಗಿದ್ದರು. ಇಲ್ಲದ್ದು ಹೇಳಿ ಹೀಗೆ ಮಾಡಬೇಡಿ ಎಂದು ತಿಳಿ ಹೇಳಿದರು. ಕೇಳದೇ ವಾಗ್ವಾದಕ್ಕಿಳಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದರಿಂದ ಕುಪಿತಗೊಂಡ ನಿಖೀಲ್‌ ಉದಯನಿಗೆ ಹೊಡೆದಿದ್ದ. ಆಗ ಆತ ತನ್ನ ಸ್ನೇಹಿತರಿಗೆ ಕರೆ ಮಾಡಿ ಕರೆಸಿಕೊಂಡು ಮಾರಕಾಸ್ತ್ರಗಳಿಂದ ಎಲ್ಲರ ಮೇಲೆ ದಾಳಿ ನಡೆಸಿದ. ದುಷ್ಕರ್ಮಿಗಳೆಲ್ಲರೂ ಸೇರಿಕೊಂಡು ನಡೆಸಿದ ದಾಳಿಯಲ್ಲಿ ಗಂಭೀರ ಗಾಯಗೊಂಡು ನಿಖಿಲ್‌ ಕೊನೆಯುಸಿ ರೆಳೆದಿದ್ದಾನೆ. ಉಳಿದ ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಡಿಸಿಪಿ ಕಿಶೋರಬಾಬು, ಎಸಿಪಿ ಜೆ.ಎಚ್‌.ಇನಾಮದಾರ, ಇನ್‌ಸ್ಪೆಕ್ಟರ್‌ ಶಿವಾನಂದ ಗಾಣಿಗೇರ ಮತ್ತು ಸಿಬ್ಬಂದಿ ಭೇಟಿ ನೀಡಿದ್ದಾರೆ. ಈ ಕುರಿತು ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಆರೋಪಿತರ ಪತ್ತೆಗೆ ಜಾಲ ಬೀಸಲಾಗಿದೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.