![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 23, 2020, 5:37 PM IST
ಕಲಬುರಗಿ: ರೈಲಿನಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಜಿಲ್ಲೆ ಚಿತ್ತಾಪೂರ ರೈಲ್ವೆ ಸ್ಟೇಷನ್ ನಲ್ಲಿ
ರವಿವಾರ ಸಂಭವಿಸಿದೆ.
ಯುವಕನೋರ್ವ ರವಿವಾರ ಬೆಳಿಗ್ಗೆ ಚಲಿಸುತ್ತಿದ್ದ ರೈಲಿನಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಸಂದರ್ಭ ರೈಲಿನ ಚಕ್ರ ಕಾಲಿನ ಮೇಲೆ ಹರಿದು ಕಾಲು ತುಂಡಾಗಿದೆ. ಈತನ ಸ್ಥಿತಿ ಚಿಂತಾಜನಕವಾಗಿದ್ದು, ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಯುವಕ ಯಾರು, ಎಲ್ಲಿಯವನು ಎನ್ನುವುದರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.