ಕಾಲು ಜಾರಿ ಗಣಿಗೆ ಬಿದ್ದು ಬಾಲಕ ಸಾವು


Team Udayavani, Aug 20, 2021, 2:11 PM IST

Vaadi Chittapura News

ವಾಡಿ (ಚಿತ್ತಾಪುರ) : ತಂದೆ ಜತೆಗೆ ಹಾಸುಗಲ್ಲು ಗಣಿಗೆ ಹೋದ ಬಾಲಕನೋರ್ವ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪುರಸಭೆ ವ್ಯಾಪ್ತಿಯ ಬಸವನಗುಡಿ ಬಡಾವಣೆ ಪ್ರದೇಶದಲ್ಲಿ ಸಂಭವಿಸಿದೆ.

ಬಸವನಗುಡಿ ಬಡಾವಣೆ ನಿವಾಸಿ ಮಂಗೇಶ ಮಿಥುನ್ ಜಾಧವ (8) ಮೃತ ಬಾಲಕ. ಪಟ್ಟಣದ ಖಾಸಗಿ ಶಾಲೆಯೊಂದರಲ್ಲಿ ಮೂರನೇ ತರಗತಿ ಓದುತ್ತಿದ್ದ ಎಂದು ತಿಳಿದುಬಂದಿದೆ.

ಇಂದು(ಶುಕ್ರವಾರ, ಆಗಸ್ಟ್ 20) ಬೆಳಗ್ಗೆ ಎಂದಿನಂತೆ ಕೂಲಿ ಕೆಲಸಕ್ಕಾಗಿ  ಕಲ್ಲು ಗಣಿಗೆ ತೆರಳಿದ ಕಾರ್ಮಿಕ ಮಿಥುನ್ ಜತೆಗೆ ಆತನ ಮಗ ಮಂಗೇಶ ಕೂಡ ಹೋಗಿದ್ದಾನೆ. ಸತತ ಮಳೆಯಿಂದ ಅಪಾರ ಪ್ರಮಾಣದ ನೀರು ತುಂಬಿಕೊಂಡ ಗಣಿಯಲ್ಲಿ ಹಾಸುಗಲ್ಲು ಕತ್ತರಿಸುವ ಯಂತ್ರದ ವಿದ್ಯುತ್ ಕೇಬಲ್ ಮುಳಿಗಿತ್ತು ಎನ್ನಲಾಗಿದ್ದು, ಅದನ್ನು ಹೊರ ತೆಗೆಯಲು ಬಾಲಕನ ತಂದೆ ನೀರಿಗಿಳಿದಿದ್ದಾರೆ. ಗಣಿ ತ್ಯಾಜ್ಯದ ರಾಶಿಯಲ್ಲಿ ಕುಳಿತಿದ್ದ ಬಾಲಕ ಮಂಗೇಶ ಕಾಲುಜಾರಿ ಅದೇ ನೀರಿಗೆ ಬಿದ್ದಿದ್ದಾನೆ.

ಇದನ್ನೂ ಓದಿ : ಹುಣಸೂರನ್ನು ಜಿಲ್ಲೆಯನ್ನಾಗಿಸಲು ಹೋರಾಟ ನಡೆಸುತ್ತೇವೆ: ಶಾಸಕ ಎಚ್.ಪಿ.ಮಂಜುನಾಥ್

ನೀರಿನಲ್ಲಿ ಮುಳುಗಿದ್ದವನನ್ನು ರಕ್ಷಣೆ ಮಾಡಿ ಹೊರ ತಂದರೂ ಬಾಲಕ ಬದುಕುಳಿಯಲಿಲ್ಲ. ಹೆತ್ತ ಕರುಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು. ಸ್ಥಳಕ್ಕೆ ಭೇಟಿನಿಡಿದ ವಾಡಿ ಠಾಣೆ ಪಿಎಸ್ ಐ ವಿಜಯಕುಮಾರ ಭಾವಗಿ ಹಾಗೂ ಸಿಬ್ಬಂದಿ, ವಾಡಿ  ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ  ಮರಣೋತ್ತರ ಶವ ಪರೀಕ್ಷೆ ನಡೆಸಿದ್ದಾರೆ. ಈ ಕುರಿತು ವಾಡಿ ಪೋಲಿಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದೆ.

ಜೀವ ಬಲಿ ಕೇಳುವ ಗಣಿ : ಸಿಮೆಂಟ್ ನಗರಿ ವಾಡಿ (ಜಂಕ್ಷನ್) ಪಟ್ಟಣದ ಬಸವನಗುಡಿ ಪ್ರದೇಶ ಮತ್ತು ಲಕ್ಷ್ಮೀಪುರವಾಡಿ ವ್ಯಾಪ್ತಿಯಲ್ಲಿರುವ ಅಸುರಕ್ಷಿತ ಹಲವು ಕಲ್ಲು ಗಣಿಗಳಲ್ಲಿ ಇದಕ್ಕೂ ಮೊದಲು ಕೆಲವರು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಗಣಿ ಕಾರ್ಮಿಕರು ಕೆಲಸ ಮಾಡುವಾಗ ಅಪಘಾತಕ್ಕೀಡಾಗಿ ಸಾವಿಗೀಡಾದರೆ, ಶೇಖರಣೆಯಾದ ಗಣಿ ನೀರಿನಲ್ಲಿ ಬಟ್ಟೆ ತೊಳೆಯಲು ಹೋದ ಬಾಲಕೀಯರು ಕಾಲು ಜಾರಿ ಬಿದ್ದುಮೃತಪಟ್ಟ ಉದಾಹರಣೆಗಳಿವೆ. ಪದೇಪದೆ ಇಂಥಹ ದುರ್ಘಟನೆಗಳು ಸಂಭವಿಸುತ್ತಿರುವುದು ಸ್ಥಳೀಯರಲ್ಲಿ ಆಂತಕ ಮೂಡಿದೆ.

ಅಸುರಕ್ಷಿತ ಗಣಿ ತಾಣಗಳಿಗೆ ಭದ್ರತೆ ಒದಗಿಸದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಹುಣಸೂರನ್ನು ಜಿಲ್ಲೆಯನ್ನಾಗಿಸಲು ಹೋರಾಟ ನಡೆಸುತ್ತೇವೆ: ಶಾಸಕ ಎಚ್.ಪಿ.ಮಂಜುನಾಥ್

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.