ಬಿಜೆಪಿಗೆ ದೊಡ್ಡ ಶಕ್ತಿಯಾಗಿದ್ದರು ವಾಜಪೇಯಿ
Team Udayavani, Aug 18, 2018, 11:26 AM IST
ವಾಡಿ: ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಭಾರತೀಯ ಜನತಾ ಪಕ್ಷದ ದೊಡ್ಡ ಶಕ್ತಿಯಾಗಿದ್ದರು. ಅವರ ಅಗಲಿಕೆಯಿಂದ ಕಪ್ಪು ಛಾಯೆ ಆವರಿಸಿದಂತಾಗಿದೆ ಎಂದು ಮಾಜಿ ಶಾಸಕ, ಬಿಜೆಪಿಯ ಹಿರಿಯ ಮುಖಂಡ ವಾಲ್ಮೀಕಿ ನಾಯಕ ಎಂದು ಹೇಳಿದರು.
ಮಹಾತ್ಮಾ ಗಾಂಧಿ ವೃತ್ತದಲ್ಲಿ ಬಿಜೆಪಿ ನಗರ ಶಕ್ತಿ ಕೇಂದ್ರದ ವತಿಯಿಂದ ಏರ್ಪಡಿಸಲಾಗಿದ್ದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಶ್ರದ್ಧಾಂಜಲಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ರಾಜಕೀಯ ಅನ್ಯಾಯದ ಧೋರಣೆಗಳ ವಿರುದ್ಧ ಚುರುಕಿನಿಂದ ಚಾಟಿ ಬೀಸುತ್ತಿದ್ದರು. ಪಕ್ಷ ಬೇಧ ಮರೆತು ರಾಜಕಾರಣಿಗಳ ಪ್ರಬುದ್ಧ ವಾದಗಳನ್ನು ಮೆಚ್ಚುತ್ತಿದ್ದರು. ಸ್ವರಚಿತ ಕವನಗಳ ಮೂಲಕ ರಾಜಕೀಯ ಪ್ರಶಂಸೆ ಮತ್ತು ಟೀಕೆಗಳನ್ನು ಮಾಡುತ್ತಿದ್ದರು. ಸಾಹಿತ್ಯ ಪ್ರೇಮ ಮೈಗೂಡಿಸಿಕೊಂಡಿದ್ದ ಅಟಲ್ಜಿ, ದೇಶದ ಜನರ ಕಷ್ಟಗಳನ್ನು ಕಾವ್ಯದ ರೂಪದಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನ ಸೆಳೆಯುತ್ತಿದ್ದರು ಎಂದರು.
ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ ವಾಜಪೇಯಿ ಬರೆದ ಕವಿತೆ ವಾಚಿಸಿದರು. ವೀರಶೈವ ಸಮಾಜದ ಅಧ್ಯಕ್ಷ, ಭಾಜಪ ಹಿರಿಯ ಮುಖಂಡ ಸಿದ್ದಣ್ಣ ಕಲಶೆಟ್ಟಿ ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ, ಪುರಸಭೆ ಸದಸ್ಯರು ಹಾಗೂ ಮುಖಂಡರು ಇದ್ದರು.
ಪುರಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸದ್ದಕ್ಕೆ ಆಕ್ರೋಶ: ಪುರಸಭೆ ಕಚೇರಿಯಲ್ಲಿ ವಾಜಪೇಯಿ ಭಾವಚಿತ್ರ ಇಟ್ಟು ಶ್ರದ್ಧಾಂಜಲಿ
ಸಲ್ಲಿಸಿಲ್ಲ ಎಂದು ಆರೋಪಿಸಿ, ಮಾಜಿ ಶಾಸಕ ವಾಲ್ಮೀಕಿ ನಾಯಕ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪಿಎಸ್ಐ ವಿಜಯಕುಮಾರ ಭಾವಗಿ ಅವರು ಸ್ಥಳಕ್ಕೆ ಆಗಮಿಸಿದಾಗ ಸರಕಾರಿ ರಜೆಯಿರುವ ಕಾರಣಕ್ಕೆ ಶುಕ್ರವಾರ ಶೋಕಾಚರಣೆ, ಶನಿವಾರ ಶ್ರದ್ಧಾಂಜಲಿ ಸಲ್ಲಿಸುವುದಾಗಿ ಮುಖ್ಯಾಧಿಕಾರಿ ತಿಳಿಸಿದ ನಂತರ ಪರಿಸ್ಥಿತಿ ತಿಳಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.