Vande Bharat: ಕಲಬುರಗಿಗೆ ಶೀಘ್ರದಲ್ಲೇ ವಂದೇ ಭಾರತ್ ರೈಲು… ಸಂಸದ ಉಮೇಶ್ ಜಾಧವ್


Team Udayavani, Mar 5, 2024, 8:06 PM IST

Vande Bharat: ಕಲಬುರಗಿಗೆ ಶೀಘ್ರದಲ್ಲೇ ವಂದೇ ಭಾರತ್ ರೈಲು… ಸಂಸದ ಉಮೇಶ್ ಜಾಧವ್

ಕಲಬುರಗಿ: ಕಲಬುರಗಿಯಲ್ಲಿ ರೈಲು ನಿರ್ವಹಣಾ ವ್ಯವಸ್ಥೆಗೆ ಎರಡನೇ ಪಿಟ್ ಲೈನ್ ನಿರ್ಮಾಣಗೊಳ್ಳುತ್ತಿರುವುದರಿಂದ ಶೀಘ್ರದಲ್ಲೇ ವಂದೇ ಭಾರತ್ ರೈಲು ಆರಂಭವಾಗಲಿದೆ ಎಂದು ಸಂಸದ ಡಾ. ಉಮೇಶ್ ಜಾಧವ್ ಹೇಳಿದರು.

ಇಲ್ಲಿನ ಕಲಬುರರ್ಗ ರೈಲು ನಿಲ್ದಾಣದಲ್ಲಿ ಎರಡನೇ ಫಿಟ್ ಲೈನ್ ಗೆ ಭೂಮಿ ಪೂಜೆ ನೆರವೇರಿಸಿದ ನಂತರ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಕಲಬುರಗಿಯಲ್ಲಿ ರೈಲುಗಳ ನಿರ್ವಹಣೆಗೆ ಪಿಟ್ ಲೈನ್ ಕೊರತೆಯಿದ್ದು ಇದೀಗ 33 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡನೇ ಪಿಟ್ ಲೈನ್ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿರುವುದರಿಂದ ಮುಂದಿನ ಎರಡು ತಿಂಗಳ ಒಳಗೆ ಕಾಮಗಾರಿ ಪ್ರಾರಂಭವಾಗಿ ಶೀಘ್ರದಲ್ಲಿ ಮುಕ್ತಾಯವಾಗಲಿದೆ ಎಂದರು.

ರೈಲುಗಳ ಸುರಕ್ಷತಾ ಪರೀಕ್ಷೆ , ನೀರಿನ ಶೇಖರಣೆ, ಬೆಳಕಿನ ವ್ಯವಸ್ಥೆ, ದುರಸ್ತಿ ಕಾರ್ಯ, ಶೌಚಾಲಯ ಶುಚೀಕರಣ ಮುಂತಾದ ಕೆಲಸಗಳಿಗೆ ಪಿಟ್ ಲೈನ್ ಅತ್ಯಂತ ಅಗತ್ಯವಾಗಿದ್ದು ಈ ಸಮಸ್ಯೆ ಶೀಘ್ರದಲ್ಲೇ ನಿವಾರಣೆಗೊಳ್ಳುವುದರಿಂದ ಮುಂದಿನ ದಿನಗಳಲ್ಲಿ ವಂದೇ ಭಾರತ್ ರೈಲು ಗಾಡಿ ಕೂಡ ಇಲ್ಲಿಂದ ಪ್ರಾರಂಭಿಸಲು ಅನುಕೂಲಕರವಾಗಲಿದೆ. ವಂದೇ ಭಾರತ್ ರೈಲು ಗಾಡಿಗೆ ಬೇಡಿಕೆ ಮುಂದಿಟ್ಟಾಗ ಕಲಬುರಗಿ ನಿಲ್ದಾಣದಲ್ಲಿ ನಿರ್ವಹಣಾ ವ್ಯವಸ್ಥೆಯ ಕೊರತೆ ಮತ್ತು ಪಿಟ್ ಲೈನ್ ಸೌಲಭ್ಯಗಳ ತೀವ್ರ ಕೊರತೆ ಎದುರಿಸಿ ರೈಲು ಪಡೆಯಲು ಸಾಧ್ಯವಾಗಲಿಲ್ಲ. ಸದ್ಯ ದೊಡ್ಡ ಸಮಸ್ಯೆಯೊಂದು ನಿವಾರಣೆಗೊಂಡು ಶೀಘ್ರದಲ್ಲೇ ಬೇಡಿಕೆ ಈಡೇರಲಿದೆ ಎಂದು ಡಸ. ಜಾಧವ್ ಹೇಳಿದರು.

2014ರಿಂದ ರೈಲು ಇಲಾಖೆಯಲ್ಲಿ ಸಮಗ್ರ ಪ್ರಗತಿ ಸಾಧಿಸಲಾಗುತ್ತಿದ್ದು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಲಬುರಗಿಗೆ ಉನ್ನತ ಸೌಲಭ್ಯಗಳು ಲಭ್ಯವಾಗುತ್ತಿದೆ. ಶಹಾಬಾದ್ ನಲ್ಲಿ ಮೂರು ರೈಲುಗಳ ನಿಲುಗಡೆ ಆರಂಭಗೊಂಡಿದೆ. ಶೀಘ್ರದಲ್ಲೇ ಮಳಖೇಡ್ ನಿಲ್ದಾಣದಲ್ಲೂ ರೈಲುಗಳ ನಿಲುಗಡೆ ಪ್ರಕ್ರಿಯೆ ಆರಂಭವಾಗಲಿದೆ. ಕಲಬುರಗಿ ಗೆ ಕಿಸಾನ್ ರೈಲು ಸಂಚಾರ ಪ್ರಸ್ತಾಪವಿದ್ದು ಇದರಿಂದ ರೈತರಿಗೆ ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಅನುಕೂಲವಾಗಲಿದೆ ಎಂದು ವಿವರಣೆ ನೀಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಿದ್ದಾರೆ. ಹಲವಾರು ವರ್ಷಗಳ ಹೋರಾಟದ ನಂತರ ನೀಲೂರು ಪ್ರದೇಶದ ಹತ್ತು ಸಾವಿರ ಜನರಿಗೆ ಅನುಕೂಲವಾಗುವ ಕೆಳ ಸೇತುವೆ ನಿರ್ಮಾಣಗೊಂಡು ಪ್ರಧಾನಿ ಮೋದಿ ಉದ್ಘಾಟಿಸಿದರು. ಚಿತಾಪುರದಲ್ಲಿ ಎಂಟು ತಾಂಡಾ ನಿವಾಸಿಗಳಿಗೆ ಅನುಕೂಲ ವಾಗುವ ಫೂಟ್ ಓವರ್ ಬ್ರಿಡ್ಜ್ ಮುಂತಾದ ಅಭಿವೃದ್ಧಿ ಕಾರ್ಯಗಳು ಮೋದಿ ಆಡಳಿತದಲ್ಲಿ ನೆರವೇರಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸೊಲ್ಲಾಪುರ ವಿಭಾಗದ ಡಿಸಿಎಂ ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಹತ್ತು ವರ್ಷಗಳ ಪಿಟ್ ಲೈನ್ ಬೇಡಿಕೆಯು ಲೋಕಸಭಾ ಸದಸ್ಯರ ಸತತ ಪ್ರಯತ್ನದಿಂದಾಗಿ ಈಡೇರಿದೆ. ಜೊತೆಗೆ ಸೋಲಾಪುರ ವಿಭಾಗದಲ್ಲಿ ಬರುವ ಕಲಬುರ್ಗಿ ಸಂಸದೀಯ ಕ್ಷೇತ್ರದ ಹಲವಾರು ನಿಲ್ದಾಣಗಳು ಅಮೃತ ಭಾರತ್ ಯೋಜನೆಯಡಿಯಲ್ಲಿ ಅಭಿವೃದ್ಧಿಯಲ್ಲಿ ಹೊಸ ಹೆಜ್ಜೆ ಹಾಕುತ್ತಿರುವುದು ಅಭಿವೃದ್ಧಿ ಪೂರಕ ವಿಷಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಶಶಿಕಾಂತ ಪಾಟೀಲ್, ಕೇಂದ್ರ ಆಹಾರ ನಿಗಮದ ಸದಸ್ಯರಾದ ರವಿರಾಜ್ ಸಾಹುಕಾರ್, ರೈಲ್ವೆ ಸಲಹಾ ಸಮಿತಿಯ ಸದಸ್ಯರಾದ ಅರವಿಂದ ನವಲಿ, ಸಂದೀಪ್ ಮಿಶ್ರ, ಶಾಬಾದ್ ಹೋರಾಟ ಸಮಿತಿಯ ಅಧ್ಯಕ್ಷರಾದ ಶಿವರಾಜ್ ಇಂಗಿನ್ ಶೆಟ್ಟಿ, ರವಿ ರಾಜ್ ಕೊರವಿ ಉಪಸ್ಥಿತರಿದ್ದರು ಶರಣಪ್ಪ ಹದನೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸಿದ್ದಾಂತ ಒಪ್ಪಿ ಬಂದರೆ ಸೋಮಶೇಖರ್, ಶಿವರಾಮ ಹೆಬ್ಬಾರ್ ಗೆ ಸ್ವಾಗತ: ಸಿಎಂ

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.