ಸಮಸ್ಯೆ ಇತ್ಯರ್ಥಕ್ಕೆ ಗ್ರಾಮವಾಸ್ತವ್ಯ: ಮಹೇಶ್ವರಿ


Team Udayavani, Jul 21, 2022, 5:36 PM IST

17problem

ಆಳಂದ: ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನಪರ ಸಮಸ್ಯೆಗಳಿಗೆ ಸ್ಪಂದಿಸದೇ ಕಾಲಹರಣ ಮಾಡಿದ್ದು, ಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದರೆ ಪಕ್ಷದ ಪ್ರಣಾಳಿಕೆಯ ಜನಪರ ಯೋಜನೆಯಾದ ಪಂಚರತ್ನ ಯೋಜನೆಗಳು ಜಾರಿಗೊಳ್ಳಲಿವೆ ಎಂದು ಜೆಡಿಎಸ್‌ ನಾಯಕಿ ಮಹೇಶ್ವರಿ ವಾಲಿ ಹೇಳಿದರು.

ಆಳಂದ ವಿಧಾನಸಭೆ ಕ್ಷೇತ್ರದಾದ್ಯಂತ ಕೈಗೊಂಡ ಸರಣಿ ಗ್ರಾಮ ವಾಸ್ತವ್ಯ ಹಾಗೂ ಗ್ರಾಮಗಳ ಬಡಾವಣೆಯಲ್ಲಿ ನಡೆಸಿದ ಪಾದಯಾತ್ರೆ ಮಧ್ಯೆ ನಿರಂಬರಗಾ ಗ್ರಾಮದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಕೈಗೊಂಡ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಿಮ್ಮ ಮನೆಯೇ ನನ್ನ ತವರು ಮನೆ ಎಂಬಂತೆ ಜನರ ಸಮಸ್ಯೆಯೇ ನನ್ನ ಸಮಸ್ಯೆ ಎಂದುಕೊಂಡು ಗ್ರಾಮಗಳಲ್ಲಿ ಪಾದಯಾತ್ರೆ ಹಾಗೂ ವಾಸ್ತವ್ಯ ಕೈಗೊಂಡು ಜನರ ಸಮಸ್ಯೆ ಅರಿತು ಪರಿಹರಿಸಲು ಸಣ್ಣ ಪ್ರಯತ್ನ ಇದಾಗಿದೆ. ಹೋದೆಡೆ ಎಲ್ಲ ಸಮುದಾಯದ ಜನರು ಸ್ಪಂದಿಸುತ್ತಿದ್ದಾರೆ. ಸಮಸ್ಯೆ ಹಂಚಿಕೊಳ್ಳುತ್ತಿದ್ದಾರೆ. ಪಕ್ಷಕ್ಕೆ ಹೊಸಬರು ಸೇರ್ಪಡೆಗೊಳ್ಳುತ್ತಿದ್ದಾರೆ. ರಾಜ್ಯದಲ್ಲೂ ಪಕ್ಷ ಅಧಿಕಾರಕ್ಕೆ ಬಂದು ಮತ್ತೆ ಕುಮಾರಸ್ವಾಮಿ ಸಿಎಂ ಆಗಲಿದ್ದಾರೆ. ಕ್ಷೇತ್ರದಲ್ಲೂ ಪಕ್ಷದ ಶಾಸಕರು ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಗ್ರಾಮದ ಬಡಾವಣೆಯೊಂದಕ್ಕೆ ಭೇಟಿ ನೀಡಿದ ಮಹೇಶ್ವರಿ ವಾಲಿ ಅವರು, ಮನೆಯ ಮೇಲೆ ವಿದ್ಯುತ್‌ ತಂತಿ ಕಡಿದುಬಿದ್ದು ವಾರವಾದರೂ ಜೆಸ್ಕಾಂ ಸಿಬ್ಬಂದಿ ತೆರವುಗೊಳಿಸಿಲ್ಲ ಎಂದು ಮಹಿಳೆಯೊಬ್ಬರು ವಾಲಿ ಅವರ ಗಮನಕ್ಕೆ ತಂದಾಗ ಜೆಸ್ಕಾಂ ಅಧಿಕಾರಿಗಳನ್ನು ಮೊಬೈಲ್‌ನಿಂದ ಸಂಪರ್ಕಿಸಿ ತಂತಿ ತೆರವುಗೊಳಿಸಿ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಹದಗೆಟ್ಟ ರಸ್ತೆ, ಚರಂಡಿ ಕುಡಿಯುವ ನೀರಿನ ಕೊರತೆಯಂತ ಸಮಸ್ಯೆಗಳನ್ನು ಜನರು ಹೇಳಿಕೊಂಡಾಗ ಈ ಕುರಿತು ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಆಳಂಗಾ ಗ್ರಾಮದ ಹನುಮಾನ ದೇವಸ್ಥಾನ, ಬಸವಣ್ಣ ಸಂಗೋಳಗಿ ಬಸವೇಶ್ವರ ದೇವಸ್ಥಾನದಲ್ಲಿ ವಾಸ್ತವ್ಯ ಮಾಡಿ ಬಡಾವಣೆ ನಾಗರಿಕರನ್ನು ಭೇಟಿ ಮಾಡಿ ಕುಂದು ಕೊರತೆ ಆಲಿಸಿ ಕ್ರಮಕ್ಕೆ ಸಂಬಂಧಿತ ತಾಪಂ ಅಧಿಕಾರಿಗಳು, ತಹಶೀಲ್ದಾರ್‌ಗೆ ಒತ್ತಾಯಿಸಿದರು.

ಮುಖಂಡರಾದ ಶರಣ ಕುಲಕರ್ಣಿ ನಾವದಗಿ, ಸಂದೀಪ ಚವ್ಹಾಣ, ಫಯಾಜ್‌ ಶೇಖ, ಜೈರಾಮ ರಾಠೊಡ, ಉಮಾದೇವಿ ಹೂಗಾರ, ಶೀಲ್ಪಾ ಸಂಗೋಳಗಿ, ಲಕ್ಷ್ಮೀ ಪೂಜಾರಿ, ಸವಿತಾ ನಾಗಾ, ನಿರ್ಮಲಾ ತಳವಾರ, ಮಂಜು ಪೂಜಾರಿ, ಪ್ರವೀಣ ಕೋಣೆ ಮತ್ತಿತರರು ಜತೆಯಲ್ಲಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.