
ಪೊಲೀಸರ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಖಂಡನೆ
Team Udayavani, Nov 3, 2017, 10:45 AM IST

ಶಹಾಬಾದ: ಜೇವರ್ಗಿ ತಾಲೂಕಿನ ಆಂದೋಲಾದ ಕರುಣೇಶ್ವರ ಮಠದ ಪೂಜ್ಯರಾದ ಸಿದ್ದಲಿಂಗ ಶಿವಾಚಾರ್ಯರನ್ನು ಬಂಧಿಸಿದ ಪೊಲೀಸರ ಕ್ರಮ ವಿರೋಧಿಸಿ ನಗರದ ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಿದ ಉಪ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ವಿಎಚ್ಪಿ ಗೌರವ ಅಧ್ಯಕ್ಷ ನಾಗರಾಜ ಮೇಲಗಿರಿ, ಅಧ್ಯಕ್ಷ ಚಂದ್ರಕಾಂತ ಗೊಬ್ಬುರಕರ್, ಪ್ರಧಾನ ಕಾರ್ಯದರ್ಶಿ ರಾಮು ಕುಸಾಳೆ ನೇತೃತ್ವದಲ್ಲಿ ಕಾರ್ಯಕರ್ತರು ಶ್ರೀರಾಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಉಪ ತಹಶೀಲ್ದಾರ್ ಕಚೇರಿಗೆ ತಲುಪಿದರು.
ಅಂದೋಲಾ ಕರುಣೇಶ್ವರ ಮಠವು ಪುರಾತನ ಮಠವಾಗಿದೆ. ರಾಜಕೀಯ ಪ್ರೇರಿತವಾಗಿ, ಹಿಂದು ಧರ್ಮದ ಆಂದೋಲಾ ಸ್ರಿàಗಳ ತೇಜೋವಧೆಗಾಗಿ ಅ. 30 ರಂದು ಅವರನ್ನು ಬಂಧಿಸಲಾದ ಕ್ರಮ ಖಂಡನೀಯವಾದದ್ದು. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರಾಷ್ಟ್ರಪತಿಗಳಗೆ, ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಉಪ ತಹಶೀಲ್ದಾರ ಮಲ್ಲಿಕಾರ್ಜುನ ಶಿವಪುರೆ ಅವರಿಗೆ ನೀಡಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ನಗರ ಅಧ್ಯಕ್ಷ ಸುಭಾಷ ಜಾಪೂರ, ಕಾರ್ಮಿಕ ಮುಖಂಡ ಭೀಮರಾವ ಸಾಳೊಂಕೆ, ವಿರೇಶ ಬಂದಳ್ಳಿ, ಅರುಣಕುಮಾರ ಪಟ್ಟಣಕರ್, ಬಸವರಾಜ ಬಿರಾದಾರ, ಸಂಜಯ ಸೂಡಿ, ವಿಠಲ ಆನಚನಲ್, ಸಂತೋಷ ಪುಲಸೆ, ಅಂಬರೀಷ ಪುಲಸೆ, ಮಂಜುನಾಥ, ಶಿವಕುಮಾರ ತಳವಾರ, ವಿಶ್ವರಾಧ್ಯ ಸ್ವಾಮಿ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.