![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 1, 2022, 10:31 AM IST
ಜೇವರ್ಗಿ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ 50ಕ್ಕೂ ಹೆಚ್ಚು ಗಿಡಮರಗಳಿಗೆ ಕಾಲೇಜಿನ ಪ್ರಾಚಾರ್ಯ ಅಲ್ಲಾವುದ್ದೀನ್ ಸಾಗರ, ಉಪನ್ಯಾಸಕರು ಗುರುವಾರ ನೀರುಣಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಸ್ಥಳಿಯ ಅರಣ್ಯ ಇಲಾಖೆ ಸಿಬ್ಬಂದಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ 50ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು, ನಿರ್ವಹಣೆ ಮಾಡಿದ್ದರು. ಪ್ರಸಕ್ತ ವರ್ಷದ ಕೆಂಡದಂತ ಬಿಸಿಲಿಗೆ ಕಾಲೇಜಿನ ಆವರಣದಲ್ಲಿರುವ ಗಿಡಮರಗಳು ಒಣಗಿ ಕೇವಲ ಟೊಂಗೆಗಳು ಕಾಣುತ್ತಿದ್ದವು. ಈ ಕುರಿತು “ಉದಯವಾಣಿ’ “ರಣರಣ ಬಿಸಿಲಿಗೆ ಒಣಗುತ್ತಿವೆ ಗಿಡಮರ’ ಎನ್ನುವ ಶೀರ್ಷಿಕೆಯಡಿ ಕಳೆದ ಮಾ. 30ರಂದು ವರದಿ ಪ್ರಕಟಿಸಿತ್ತು.
ವರದಿಗೆ ಸ್ಪಂದಿಸಿದ ಕಾಲೇಜಿನ ಪ್ರಾಚಾರ್ಯ ಹಾಗೂ ಸಿಬ್ಬಂದಿ ವರ್ಗ ನೀರಿನ ಟ್ಯಾಂಕರ್ ಮೂಲಕ ಕಾಲೇಜಿನ ಆವರಣದಲ್ಲಿನ ಎಲ್ಲ ಗಿಡಮರಗಳಿಗೆ ನೀರು ಹರಿಸಿದ್ದಾರೆ. ಸರ್ಕಾರಿ ಕನ್ಯಾ ಪ್ರೌಢಶಾಲೆ ಆವರಣದಲ್ಲಿ ನೂತನ ಶಾಲಾ ಕೋಣೆಗಳ ನಿರ್ಮಾಣ ಕಾಮಗಾರಿಗೆ ಬಳಸುತ್ತಿದ್ದ ನೀರಿನ ಟ್ಯಾಂಕರ್ ಮೂಲಕ ಗುತ್ತಿಗೆದಾರ ಹಾಗೂ ಕಾಲೇಜಿನ ಸಿಬ್ಬಂದಿ ಜತೆಗೂಡಿ ಎಲ್ಲ ಗಿಡಮರಗಳಿಗೆ ನೀರು ಹರಿಸಿ ಪರಿಸರ ಉಳಿವಿಗೆ ನೆರವಾಗಿದ್ದಾರೆ.
ಕನ್ಯಾ ಪ್ರೌಢಶಾಲೆ ಮುಖ್ಯಶಿಕ್ಷಕ ವಿ.ವೈ. ಗುಡುಮಿ, ಎನ್ಎಸ್ಎಸ್ ಅಧಿಕಾರಿ ಎಚ್.ಬಿ.ಪಾಟೀಲ, ಗುತ್ತಿಗೆದಾರ ಶರಣು ಗುತ್ತೇದಾರ, ದೈಹಿಕ ಶಿಕ್ಷಕಿ ಶಾಂತಾಬಾಯಿ ಹಾಗೂ ಸಿಬ್ಬಂದಿ ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.