ವಾಡಿಯಲ್ಲಿ ಪ್ರತಿನಿತ್ಯ 10 ಸಾವಿರ ಲೀಟರ್‌ ನೀರು ಮಾರಾಟ


Team Udayavani, Apr 28, 2017, 2:50 PM IST

gul1.jpg

ವಾಡಿ: ಬಿರುಬಿಸಿಲು ಹೆಚ್ಚುತ್ತಿದ್ದಂತೆ ಕುಡಿಯುವ ನೀರಿನ ಬೇಡಿಕೆ ಹೆಚ್ಚಿದ್ದು, ಶುದ್ಧ ನೀರು ಸುಗ್ಗಿ ರೂಪದಲ್ಲಿ ಮಾರಾಟವಾಗುತ್ತಿದೆ. ಸಿಮೆಂಟ್‌ ನಗರಿ ವಾಡಿ ಪಟ್ಟಣದಲ್ಲಿ ವಾಸಿಸುವ 50 ಸಾವಿರ ಜನರು 6 ಕಿ.ಮೀ. ಅಂತರದ ಕಂದನೂರಿನ ಭೀಮಾ ನದಿಯ ನೀರನ್ನೇ ಅವಲಂಬಿಸಿದ್ದಾರೆ.

ನದಿ ನೀರನ್ನು ಶುದ್ಧೀಕರಿಸಿ ಪೂರೈಸಲು ಕೋಟ್ಯಂತರ ರೂ. ಅನುದಾನ ಸುರಿದು ಕುಂದನೂರಿನಲ್ಲೇ ಶುದ್ಧ ನೀರಿನ ಘಟಕ ಸ್ಥಾಪಿಸಲಾಗಿದೆ. ಘಟಕ ಕಾರ್ಯಾರಂಭಗೊಂಡು ಸುಮಾರು ಹತ್ತು ವರ್ಷಗಳೇ ಗತಿಸಿವೆ. ಇಂದಿಗೂ ಘಟಕದ  ನಿರ್ವಹಣೆಗೆ ಪ್ರತಿ ತಿಂಗಳು ಲಕ್ಷಾಂತರ ರೂ. ಖರ್ಚು ಭರಿಸಲಾಗುತ್ತಿದೆ.

ಆದರೂ ಸ್ಥಳೀಯರಿಗೆ ಶುದ್ಧ ನೀರು ಎಂಬುದು ಗಗನಕುಸುಮ ಆಗಿದೆ. ಪುರಸಭೆ ಪೂರೈಸುವ ಗಲ್ಲಿಗಳ  ನಳಗಳಲ್ಲಿ ಗಲೀಜು ನೀರು ಸರಬರಾಜು ಆಗುತ್ತಿದ್ದು, ಕುಡಿಯಲು ಜನರು ಹಿಂಜರಿಯುತ್ತಿದ್ದಾರೆ. ಬೇಸಿಗೆ ಎದುರಿಸಲು ನದಿಗಳಲ್ಲಿ ಹರಿಯುವ ನೀರಿಗೆ ತಡೆಯೊಡ್ಡಲಾಗಿದ್ದು, ನಿಂತ ನೀರು ಹಳಸಿ ಹುಳುಹುಪ್ಪಡಿಗಳು ಹುಟ್ಟಿಕೊಂಡಿವೆ. 

ಪಾಚಿಗಟ್ಟಿದ ನೀರನ್ನು ಶುದ್ಧೀಕರಿಸಿ ಪೂರೈಸಲಾಗುತ್ತಿದೆ ಎಂದು ಪುರಸಭೆ ಅಧಿಧಿಕಾರಿಗಳು ಹೇಳುತ್ತಿದ್ದರೂ ಊರಿನ  ಜನರು ಮಾತ್ರ ಶುದ್ಧ ನೀರನ್ನು ಖರೀದಿಸಿಯೇ ಕುಡಿಯುತ್ತಿದ್ದಾರೆ. ನಳದ ನೀರು ಗೃಹ ಬಳಕೆಗೆ ಮಾತ್ರ ಉಪಯೊಗವಾಗುತ್ತಿದೆ.

ಪಟ್ಟಣದ ವಾರ್ಡ್‌ 4ರ ರೆಸ್ಟ್‌ಕ್ಯಾಂಪ್‌ ತಾಂಡಾ ಬಡಾವಣೆಯಲ್ಲಿ ಜಲಮಂಡಳಿ ವತಿಯಿಂದ ಶುದ್ಧ ನೀರಿನ ಕಿರು ಘಟಕ ಸ್ಥಾಪಿಸಲಾಗಿದೆ. ಖಾಸಗಿ ಸಂಸ್ಥೆಯೊಂದು ಅದರ ನಿರ್ವಹಣೆ ಮಾಡುತ್ತಿದ್ದು, ಕಳೆದ ನಾಲ್ಕು ವರ್ಷಗಳಿಂದ ಶುದ್ಧ ನೀರಿನ ಮಾರಾಟ ದಂಧೆಯಲ್ಲಿ ತೊಡಗಿದೆ.

20 ಲೀಟರ್‌ ನೀರಿಗೆ ಐದು ರೂ. ನಿಗದಿಪಡಿಸಲಾಗಿದ್ದು, ಜನರು ಮುಗಿಬಿದ್ದು ಶುದ್ಧ ನೀರು ಪಡೆಯುತ್ತಿದ್ದಾರೆ. ಒಟ್ಟು 750 ಸದಸ್ಯರನ್ನು ಹೊಂದಿರುವ ಈ ಘಟಕದಿಂದ ಪ್ರತಿನಿತ್ಯ 10 ಸಾವಿರ ಲೀಟರ್‌ ನೀರು ಖರ್ಚಾಗುತ್ತಿದೆ. ವಿವಿಧ ಬಡಾವಣೆ ನಿವಾಸಿಗಳು ಬೈಕ್‌  ಮೇಲೆ ಬಂದು ನೀರು ಖರೀದಿಸುತ್ತಾರೆ.

ಕಿರು ಘಟಕದ ಮುಂದೆ ಕ್ಯಾನ್‌ ಗಳ ಸಾಲು ನೋಡಿದರೆ ಶುದ್ಧ ನೀರಿನ ಬೇಡಿಕೆ ಎಷ್ಟು ಎಂಬುದು ಅರ್ಥವಾಗುತ್ತದೆ. ಪಟ್ಟಣದಲ್ಲಿ  ಕೋಟ್ಯಂತರ ರೂ. ಮೌಲ್ಯದ ಶುದ್ಧ ನೀರಿನ ಘಟಕವಿದ್ದರೂ ವ್ಯರ್ಥ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. 

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.