ನೀರಿನ ಮೂಲ ಪರಿಶೀಲಿಸಿದ ಶಾಸಕ


Team Udayavani, Apr 28, 2017, 2:58 PM IST

gul5.jpg

ಶಹಾಬಾದ: ಸಮೀಪದ ತೊನಸನಹಳ್ಳಿ (ಎಸ್‌) ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸುವ ಸಂಬಂಧ ಗುರುವಾರ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಜಿ.ರಾಮಕೃಷ್ಣ ಅವರು ತೆಗನೂರ ಗ್ರಾಮದ ಕೊಳವೆ ಬಾವಿ, ಗೋಳಾ ಗ್ರಾಮದ ಬ್ರಿಡ್ಜ್ ಕಮ್‌ ಬ್ಯಾರೇಜ್‌ಗೆ ಬೇಟಿ ನೀಡಿ ನೀರಿನ ಮೂಲವನ್ನು ಪರಿಶೀಲಿಸಿದರು. 

ನಂತರ ಮಾತನಾಡಿದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಜಿ.ರಾಮಕೃಷ್ಣ, ಬಹುಗ್ರಾಮದ ಕುಡಿಯುವ ನೀರಿನ ಯೋಜನೆ ಸರ್ಕಾರ ಮಟ್ಟದಲ್ಲಿ ತಾಂತ್ರಿಕ ತೊಂದರೆ ಇದ್ದು, ಯೋಜನೆ ಅನುಮೋದನೆ ನೀಡಲು ಇನ್ನೂ ನಾಲ್ಕು ತಿಂಗಳು ವಿಳಂಬವಾಗಬಹುದು. ಸದ್ಯದಲ್ಲಿ ತೆಗನೂರ ಗ್ರಾಮದ ಕೊಳವೆ ಬಾವಿಯಿಂದ ನೀರಿನ ಸರಬರಾಜು ಮಾಡಲಾಗುತ್ತಿದೆ ಎಂದರು. 

ಅಂತರ್ಜಲ ಕಡಿಮೆಯಿರುವ ಕಾರಣ ಹಾಗೂ ಪದೇ ಪದೇ ಪೈಪ್‌ಲೈನ್‌ ದುರಸ್ತಿ ಬರುತ್ತಿರುವುದರಿಂದ ಮತ್ತೆ ಸಮಸ್ಯೆ ಎದುರಾಗುತ್ತಿದೆ. ಆದ್ದರಿಂದ ಬೇಸಿಗೆ ಕಾಲ ಇರುವುದರಿಂದ ತುರ್ತಾಗಿ ಗ್ರಾಮದ ಜನರಿಗೆ ಕುಡಿಯುವ ನೀರನ್ನು ಒದಗಿಸಲು ಎಚ್‌.ಕೆ.ಆರ್‌.ಡಿ.ಬಿ ಅನುದಾನದಲ್ಲಿ

ಸುಮಾರು 1.80ಲಕ್ಷ ರೂ.ದಲ್ಲಿ ಗೋಳಾ ಗ್ರಾಮದ ಬ್ರಿಡ್ಜ್ ಕಮ್‌ ಬ್ಯಾರೇಜ್‌ನಿಂದ ತೊನಸನಹಳ್ಳಿ ಗ್ರಾಮಕ್ಕೆ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸಲು ಸುಮಾರು 10ಕಿಮೀ ಪೈಪ್‌ಲೈನ್‌ ಮಾಡಲು ಕ್ರಿಯಾಯೋಜನೆ ರೂಪಿಸಲಾಗಿದೆ.

ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ಅವರಿಗೆ ತೊನಸನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಬೀರವಾಗಿದೆ ಎಂದು ಮನವರಿಕೆ ಮಾಡಲಾಗಿದೆ ಎಂದು ಹೇಳಿದರು. ಉಸ್ತುವಾರಿ ಸಚಿವರು ತೊನಸಿನಹಳ್ಳಿ (ಎಸ್‌) ಗ್ರಾಮದ ಕುಡಿಯುವ ನೀರಿನ ಜ್ವಲಂತ ಸಮಸ್ಯೆಯನ್ನು ಹೋಗಲಾಡಿಸಲು

ಗೋಳಾ(ಕೆ) ಗ್ರಾಮದ ಕಾಗಿಣಾ ನದಿಯ ಬ್ರಿಡ್ಜ್ ಕಮ್‌ ಬ್ಯಾರೇಜ್‌ದಿಂದ ತೊನಸನಹಳ್ಳಿ (ಎಸ್‌) ಗ್ರಾಮಕ್ಕೆ ಕುಡಿಯುವ ನೀರಿನ ಪೈಪ್‌ಲೈನ್‌ನ ಸರ್ವೇ ಮಾಡಲು ಮೇಲಾಧಿಧಿಕಾರಿಗಳಿಗೆ ಸೂಚಿಸಿದ್ದಾರೆ. ಒಂದೆರಡು ದಿನದಲ್ಲಿ ಅಧಿಧಿಕಾರಿಗಳು ಸರ್ವೇ ಮಾಡಲು ಬರಲಿದ್ದಾರೆ. ಸದ್ಯದಲ್ಲೇ ಶಾಶ್ವತ ಪರಿಹಾರ ಸಿಗಲಿದೆ.

ಇದರಿಂದ ತೊನಸನಹಳ್ಳಿ ಗ್ರಾಮದ ಜನರು ಎರಡು ದಶಕದಿಂದ ಕುಡಿಯುವ ನೀರಿನ ಕೂಗಿಗೆ ಶಾಶ್ವತ ಪರಿಹಾರ ಸಿಕ್ಕಂತಾಗುತ್ತದೆ ಎಂದರು.ಯೋಜನೆ ಫಲಪ್ರವಾದರೆ ಮುಂದಿನ ದಿನಗಳಲ್ಲಿ ತರನಳ್ಳಿ ಹಾಗೂ ಕಡೆಹಳ್ಳಿ ಗ್ರಾಮಕ್ಕೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದೆಂದು ಹೇಳಿದರು. 

ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ ಮರತೂರ, ಮುಖಂಡ ವಿಜಯಕುಮಾರ ರಾಮಕೃಷ್ಣ,ಮರತೂರ ಗ್ರಾಪಂ ಸದಸ್ಯ ಅಜೀತಕುಮಾರ ಪಾಟೀಲ, ಕಾಂಗ್ರೆಸ್‌ ಮುಖಂಡರಾದ ಅಪ್ಪುಗೌಡ ತರನಳ್ಳಿ, ಮರತೂರ ಗ್ರಾಪಂ ಉಪಾಧ್ಯಕ್ಷ ಸಂಜಕುಮಾರ ದಳಪತಿ, ಶೇರ್‌ಅಲಿ ಸೌದಾಗರ್‌, ಮಹೇಶ ದೇವಣಿ, ಹಣಮಂತ ಸೂರಿ, ಲಕ್ಷಣ ತರನಳ್ಳಿ ಇತರರು ಇದ್ದರು. 

ಟಾಪ್ ನ್ಯೂಸ್

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.