![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 16, 2020, 1:13 PM IST
ಕಲಬುರಗಿ: ಹವಾಮಾನ ವೈಪರೀತ್ಯದಿಂದಾಗಿ ರವಿವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಇಳಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಬೆಂಗಳೂರು-ಕಲಬುರಗಿ ನಡುವಿನ ಅಲಯನ್ಸ್ ಏರ್ ವಿಮಾನವನ್ನು ಹೈದರಾಬಾದ್ ಗೆ ಕಳುಹಿಸಲಾಯಿತು. ಮತ್ತೊಂದು ಸ್ಟಾರ್ ಏರ್ ವಿಮಾನ ಸಹ ಬೆಂಗಳೂರಿಗೆ ಮರಳುವ ಸಾಧ್ಯತೆ ಇದೆ.
ಬೆಳಿಗ್ಗೆ ಬೆಂಗಳೂರಿನಿಂದ ಕಲಬುರಗಿಯತ್ತ ಅಲಯನ್ಸ್ ವಿಮಾನ ಹೊರಟಿತ್ತು. ಆದರೆ, ಕಲಬುರಗಿಯಲ್ಲಿ ಮೋಡ ಕವಿದ ವಾತಾವರಣ ಮತ್ತು ಜಿಟಿಜಿಟಿ ಮಳೆ ಸುರಿಯುತ್ತಿದ್ದು, ವಿಮಾನ ಲ್ಯಾಂಡ್ ಆಗಲು ಸಾಧ್ಯವಾಗಿಲ್ಲ. ಎಟಿಸಿ ಸಿಗ್ನಲ್ ಸಿಗದೆ ಕೆಲ ಹೊತ್ತು ಆಗಸದಲ್ಲೇ ಸುತ್ತುವರಿದು ಹೈದರಾಬಾದ್ ಗೆ ತೆರಳಿದೆ. ಅಲ್ಲಿ ವಿಮಾನ ಲ್ಯಾಂಡ್ ಆಗಲು ಯಾವುದೇ ವಾತಾವರಣದ ಸಮಸ್ಯೆ ಇಲ್ಲ ಎಂದು ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರ ರಾವ್ ‘ಉದಯವಾಣಿ’ಗೆ ತಿಳಿಸಿದರು.
ಇದನ್ನೂ ಓದಿ: ಸಿಗ್ನಲ್ ಸಿಗದೆ ಒಂದು ಗಂಟೆಗೂ ಹೆಚ್ಚು ಕಾಲ ಆಗಸದಲ್ಲೇ ಸುತ್ತಿದ ಅನಂತ್ ಹೆಗಡೆ ಇದ್ದ ವಿಮಾನ
ಬೆಂಗಳೂರಿನಿಂದ ಸ್ಟಾರ್ ಏರ್ ವಿಮಾನ ಸಹ ಆಗಮಿಸಿದೆ. ಆದರೆ, ಅದಕ್ಕೂ ಲ್ಯಾಂಡ್ ಆಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಆಗಸದಲ್ಲೇ ಸುತ್ತುತ್ತಿದ್ದು, ಇನ್ನೂ ಕೆಲ ಹೊತ್ತಿನ ಬಳಕೆಯೂ ಇಳಿಯಲು ಸಾಧ್ಯವಾಗದೇ ಹೋದಲ್ಲಿ ಬೆಂಗಳೂರಿಗೆ ಮರಳಿ ಸ್ಟಾರ್ ಏರ್ ವಿಮಾನ ಹೋಗಲಿದೆ ಎಂದು ಅವರು ಮಾಹಿತಿ ನೀಡಿದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.