ಕಿನ್ನಿಗೋಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯೇ ಆಧಾರ

ಕಿಲ್ಪಾಡಿ, ಅತಿಕಾರಿಬೆಟ್ಟು ಗ್ರಾ. ಪಂ.

Team Udayavani, Apr 29, 2019, 10:52 AM IST

29-April-5

ಅತಿಕಾರಿ ಬೆಟ್ಟು ಸಂಪೂರ್ಣ ಶಿಥಿಲಾವಸ್ಥೆಯಲ್ಲಿರುವ ನೀರಿನ ಸಂಗ್ರಹಣೆ ಟ್ಯಾಂಕ್‌.

ಮೂಲ್ಕಿ: ಕಿಲ್ಪಾಡಿ ಮತ್ತು ಅತಿಕಾರಿಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದ್ದರೂ ಕಿನ್ನಿಗೋಳಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದಾಗಿ ಈ ಭಾಗದಲ್ಲಿ ಅತಿಯಾದ ನೀರಿನ ಸಮಸ್ಯೆ ಕಾಣಿಸಿಕೊಂಡಿಲ್ಲ. ಆದರೆ ನೀರಿನ ಒರತೆ ಕಡಿಮೆ ಯಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಕಿಲ್ಪಾಡಿ ಗ್ರಾಮ ಪಂಚಾಯತ್‌ ನಾಲ್ಕೈದು ವರ್ಷಗಳ ಹಿಂದೆ ಇಬ್ಟಾಗವಾಗಿ ಕಿಲ್ಪಾಡಿ ಮತ್ತು ಅತಿಕಾರಿಬೆಟ್ಟು ಗ್ರಾ. ಪಂ. ಆಗಿ ಪರಿವರ್ತನೆ ಯಾಯಿತು. ಕಿಲ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಿಲ್ಪಾಡಿ ಗ್ರಾಮ ಒಂದೇ ಇದ್ದು, ಅತಿಕಾರಿಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಮಂತೂರು ಮತ್ತು ಅತಿಕಾರಿ ಬೆಟ್ಟು ಗ್ರಾಮಗಳು ಸೇರಿ ಕೊಂಡಿವೆ. ಹೊಸದಾಗಿ ರೂಪಿಸಲಾದ ಈ ಎರಡೂ ಗ್ರಾ.ಪಂ. ಗಳಿಗೂ ಒಬ್ಬರೇ ಅಭಿವೃದ್ಧಿ ಅಧಿಕಾರಿ ಇದ್ದು, ವಾರದಲ್ಲಿ ಮೂರು ದಿನ ಎರಡು ಅವಧಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಟ್ಯಾಂಕ್‌ ನಿರ್ಮಾಣ
ಕಿಲ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಎಸ್‌.ಸಿ. ಮತ್ತು ಎಸ್‌.ಟಿ. ಕಾಲನಿಯ ಬಳಿಯ ಸುಮಾರು ಐದು ಮನೆಗೆ ನೀರಿನ ಸಮಸ್ಯೆ ತೀವ್ರವಾಗಿದ್ದು, ಇದನ್ನು ಪರಿಹರಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆ ಮೂಲಕ ಟ್ಯಾಂಕ್‌ ನಿರ್ಮಿಸಲಾಗಿದೆ. ಕೊಳವೆ ಬಾವಿ ಮೂಲಕ ಟ್ಯಾಂಕ್‌ಗೆ ನೀರು ಸಂಪರ್ಕಕೊಟ್ಟು ಸಮಸ್ಯೆ ಪರಿಹರಿಸಲು ಪಂಚಾಯತ್‌ ಮುಂದಾಗಿದೆ. ಈ ಎರಡು ಪಂಚಾಯತ್‌ನಲ್ಲಿ ಹೇಳಿಕೊಳ್ಳುವಂತಹ ನೀರಿನ ಸಮಸ್ಯೆ ಸದ್ಯಕ್ಕಿಲ್ಲ ಎನ್ನುತ್ತಾರೆ ಪಂಚಾಯತ್‌ ಪಿಡಿಒ.

ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್‌ನ ಕಕ್ವ, ಮಟ್ಟು ಮತ್ತು ಬಾನಬೆಟ್ಟು ಪ್ರದೇಶ ಮಾತ್ರವಲ್ಲ ಇತರ ಕಡೆಗಳಲ್ಲೂ ನೀರಿನ ಸಮಸ್ಯೆ ಇದೆಯಾದರೂ ಎರಡು ವರ್ಷಗಳಿಂದ ಕಿನ್ನಿಗೋಳಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ಸರಬರಾಜು ಆಗುತ್ತಿದೆ ಹೀಗಾಗಿ ಇಲ್ಲಿನ ನೀರಿನ ಸಮಸ್ಯೆಗೆ ಸದ್ಯ ಪರಿಹಾರ ಸಿಕ್ಕಿದೆ.

ಟ್ಯಾಂಕ್‌ ಕುಸಿಯುವ ಭೀತಿ
ಬಾನಬೆಟ್ಟು ಎಂಬಲ್ಲಿ ನೀರು ಸಂಗ್ರಹಕ್ಕಾಗಿ ಇರುವ ಟ್ಯಾಂಕ್‌ ಕುಸಿಯುವ ಹಂತದಲ್ಲಿದೆ. ಈ ಟ್ಯಾಂಕ್‌ನಲ್ಲಿ ನೀರು ತುಂಬಿಸುವ ಹಾಗಿಲ್ಲದಿದ್ದರೂ ತುಂಬಿಸಲಾಗುತ್ತಿದೆ. ಈ ಪರಿಸರದಲ್ಲಿ ಅಂಗನವಾಡಿ ಹಾಗೂ ಮನೆಯೊಂದು ಇದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ್‌, ಜಿಲ್ಲಾ ಪಂಚಾಯತ್‌ ಗಮನಕ್ಕೆ ತಂದಿದ್ದರೂ ಈ ವರೆಗೆ ಕ್ರಮಕೈಗೊಂಡಿಲ್ಲ ಎನ್ನುತ್ತಾರೆ ಸ್ಥಳೀಯರು.

•ಸರ್ವೋತ್ತಮ ಅಂಚನ್‌

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.