![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Apr 19, 2023, 6:40 AM IST
ಮಡಿಕೇರಿ: ಕೇರಳದ ಕಣ್ಣೂರಿನಲ್ಲಿರುವ ಪಯ್ಯಂಬಲ ಕಡಲ ತೀರದಲ್ಲಿ ಕಾಣೆಯಾಗಿದ್ದ ತಣ್ಣೀರುಹಳ್ಳ ಗ್ರಾಮದ ಸೃಜನ್ನ ಮೃತದೇಹ ಪತ್ತೆಯಾಗಿದೆ.
ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಮುಗಿದ ಹಿನ್ನೆಲೆ ಕುಟುಂಬದ ಸದಸ್ಯರೊಂದಿಗೆ ಕೇರಳದ ದೇವಾಲಯಗಳು ಹಾಗೂ ಪ್ರವಾಸಿತಾಣಗಳಿಗೆ ತೆರಳಿದ್ದ ತಣ್ಣೀರುಹಳ್ಳ ಗ್ರಾಮದ ನಿವಾಸಿ ಶಶಿಕುಮಾರ್ ಅವರ ಪುತ್ರ ಸೃಜನ್ (15) ಪಯ್ಯಂಬಲ ಕಡಲ ಕಿನಾರೆಯಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ.
ಕೋಸ್ಟಲ್ ಗಾರ್ಡ್ ಸಿಬಂದಿ, ನುರಿತ ಈಜುಗಾರರು ಕಾರ್ಯಾಚರಣೆ ಕೈಗೊಂಡಿದ್ದರು. ಸೋಮವಾರ ರಾತ್ರಿ 8.30ರ ಸುಮಾರಿಗೆ ಸೃಜನ್ ಮೃತದೇಹ ಪತ್ತೆಯಾಗಿದೆ.
You seem to have an Ad Blocker on.
To continue reading, please turn it off or whitelist Udayavani.