ಜನ ಸಾಮಾನ್ಯರಿಗೆ ಸಮಸ್ಯೆಯಾಗದಂತೆ ಸಾರಿಗೆ ಸಂಪರ್ಕ ಕಲ್ಪಿಸಿ

ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆ

Team Udayavani, Oct 18, 2019, 5:50 AM IST

Z-SAARIGE-MEETING-2

ಮಡಿಕೇರಿ: ಜನ ಸಾಮಾನ್ಯರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಾರಿಗೆ ಸಂಪರ್ಕ ಕಲ್ಪಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸಮಗ್ರ ಸಾರಿಗೆ ಅಭಿವೃದ್ಧಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ ಮಾಲಿಕರು ಒಟ್ಟಾಗಿ ಸಮೀಕ್ಷೆ ನಡೆಸಿದ ವರದಿಯನ್ನು 15 ದಿನದೊಳಗೆ ನೀಡುವಂತೆ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶ ನೀಡಿದರು.

ಖಾಸಗಿ ಬಸ್‌ ಮಾಲಿಕರು ಕುಶಾಲನಗರ ಖಾಸಗಿ ಬಸ್‌ ನಿಲ್ದಾಣದಲ್ಲಿ ಯಾವುದೇ ಮೂಲಭೂತ ಸೌಲಭ್ಯವಿಲ್ಲದಿರುವ ಕುರಿತು ಸಭೆಯ ಗಮನಕ್ಕೆ ತಂದರು. ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ನಗರದ ಹಳೇ ಖಾಸಗಿ ಬಸ್‌ ನಿಲ್ದಾಣದಲ್ಲಿ ನಿಲುಗಡೆ ಮಾಡುವುದಕ್ಕೆ ಅಸಮಾದಾನ ವ್ಯಕ್ತಪಡಿಸಿದರು.

ಕುಶಾಲನಗರ ಖಾಸಗಿ ಬಸ್‌ ನಿಲ್ದಾಣದಲ್ಲಿ ಇರುವಂತಹ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಖಾಸಗಿ ಬಸ್‌ ಮಾಲಿಕರ ಸಂಘದ ಸದಸ್ಯರುು ಜಿಲ್ಲೆಯಲ್ಲಿ ಅವಶ್ಯವಿರುವ ಕಡೆಗಳಲ್ಲಿ ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದು, ಇವುಗಳ ರಹದಾರಿಯನ್ನು ಮುಂದುವರಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ.ಪಿ ಮಾತನಾಡಿದರು. ಸಾರಿಗೆ ಇಲಾಖೆಯ ಅಧೀಕ್ಷಕ ಶಿವಣ್ಣ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ಇಬ್ರಾಹಿಂ, ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕಿ ಗೀತಾ, ‌ ಕಾರ್ಯಪಾಲಕ ಎಂಜಿನಿಯರ್‌ ರೇವಣ್ಣ, ನಗರಾಭಿವೃದ್ಧಿ ಇಲಾಖೆಯ ಸಂಜೀವ್‌ಉಪಸ್ಥಿತರಿದ್ದರು.

ಸುರಕ್ಷತಾ ಸಮಿತಿ ಸಭೆ
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು.ರಾಜಾಸೀಟು ಬಳಿ ವಾಹನ ನಿಲುಗಡೆ ಕಾಮಗಾರಿ ಸಂಬಂಧಿಸಿದ ಮಾಹಿತಿಯನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು.ಜಿಲ್ಲೆಯಾದ್ಯಂತ ವಿಶೇಷವಾಗಿ ಗೋಣಿಕೊಪ್ಪ ಮತ್ತು ಕುಶಾಲನಗರ ಪಟ್ಟಣದಲ್ಲಿ ಏಕಮುಖ ಸಂಚಾರ ವ್ಯವಸ್ಥೆಗೆ ಹೊರಡಿಸಲಾದ ಅಧಿಸೂಚನೆ ಕುರಿತು ಚರ್ಚಿಸಲಾಯಿತು. ಮಡಿಕೇರಿಯ‌ ಖಾಸಗಿ ಬಸ್‌ ನಿಲ್ದಾಣದಲ್ಲಿ ಸ್ವತ್ಛತೆ, ಶೌಚಾಲಯ, ವಿದ್ಯುತ್‌ ಸಂಪರ್ಕ ಸೌಲಭ್ಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಸಂಬಂಧಪಟ್ಟ 9ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶ ನೀಡಿದರು.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.