Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌


Team Udayavani, Sep 27, 2024, 11:41 PM IST

Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌

ಮಡಿಕೇರಿ: ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯ ಹಿನ್ನೆಲೆಯಲ್ಲಿ ಮುಂಬರುವ ಜಿ.ಪಂ, ತಾ.ಪಂ., ಪುರಸಭೆ, ಪಟ್ಟಣ ಪಂಚಾಯತ್‌ ಚುನಾವಣೆಗಳಲ್ಲಿ ಎನ್‌ಡಿಎ ಮೈತ್ರಿ ಕೂಟದ ಮೂಲಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ.

ಜೆಡಿಎಸ್‌ ಪ್ರಭಾವ ಇರುವ ಕಡೆಗಳಲ್ಲಿ ಪಕ್ಷದ ಸಮರ್ಥ ಕಾರ್ಯಕರ್ತರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಜಾತ್ಯತೀತ ಜನತಾದಳದ ಸದಸ್ಯತ್ವ ಅಭಿಯಾನದ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್‌ ತಿಳಿಸಿದ್ದಾರೆ.

ನಗರದ ರಾಜದರ್ಶನ್‌ ಸಭಾಂಗಣದಲ್ಲಿ ಜೆಡಿಎಸ್‌ ಸದಸ್ಯತ್ವ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ‌ ಅವರು ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಪಕ್ಷಕ್ಕೆ ಕನಿಷ್ಠ 10 ಸಾವಿರ ಸದಸ್ಯರನ್ನು ನೋಂದಾಯಿಸುವ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಬೇಕು ಎಂದು ಕರೆ ನೀಡಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಸಂದರ್ಭ 6 ತಿಂಗಳಲ್ಲಿ 8 ಬಾರಿ ಜಿಲ್ಲೆಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಜತೆಗೆ ನೂರಾರು ಸಂತ್ರಸ್ತರಿಗೆ 9.80 ಲಕ್ಷ ರೂ.ಗಳಲ್ಲಿ ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಟ್ಟಿದ್ದರು. ಇದು ಜೆಡಿಎಸ್‌ ಹೆಗ್ಗಳಿಕೆಯೂ ಆಗಿದೆ ಎಂದರು.

ಈಗ ಬಿಜೆಪಿ ಜತೆಗೆ ಜೆಡಿಎಸ್‌ ಮೈತ್ರಿಯಾಗಿ ಎನ್‌ಡಿಎ ಒಕ್ಕೂಟದಲ್ಲಿದೆ. ಮುಂಬರುವ ಚುನಾವಣೆಗಳಲ್ಲಿ ಎನ್‌ಡಿಎ ಮೈತ್ರಿ ಕೂಟದ ಮೂಲಕ ಅಭ್ಯರ್ಥಿಗಳನ್ನು ಕಣಕ್ಕಿಳಿಸ ಲಾಗುತ್ತದೆ. ಜೆಡಿಎಸ್‌ ಪ್ರಭಾವ ಇರುವ ಕಡೆಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಅಭ್ಯರ್ಥಿಯಾಗಿ ಮಾಡಲಾಗುತ್ತದೆ. ಆ ಕಾರಣ ಜೆಡಿಎಸ್‌ ಪಕ್ಷದ ನೋಂದಣಿಯನ್ನು ಹೆಚ್ಚಿಸಬೇಕಿದೆ. ಕಾರ್ಯಕರ್ತರು ಶ್ರಮ ವಹಿಸಬೇಕು ಎಂದು ಕರೆ ನೀಡಿದರು. ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Congress-Symbol

Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

man-a

Kumble: ಕಾರು ಅಪಘಾತ; ಗಾಯಾಳು ಮಹಿಳೆ ಸಾವು

12

Madikeri: 2022ರಲ್ಲಿ ನಡೆದ ಮಹಿಳೆಯ ಹತ್ಯೆ: ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

Kasaragod: ಹಳಿಯಲ್ಲಿ ಸಿಲುಕಿದ ಸರಕು ರೈಲು: ಗೇಟು ತೆರೆಯದೆ ಸಂಚಾರ ಅಸ್ತವ್ಯಸ್ತ

Kasaragod: ಹಳಿಯಲ್ಲಿ ಸಿಲುಕಿದ ಸರಕು ರೈಲು: ಗೇಟು ತೆರೆಯದೆ ಸಂಚಾರ ಅಸ್ತವ್ಯಸ್ತ

madikeri

Madikeri: ಅಪಘಾತದಲ್ಲಿ ವಿರಾಜಪೇಟೆಯ ಶಿಕ್ಷಕಿ ಸಾವು

“ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

Kasaragod: “ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.