Heavy Rain 104 ಪ್ರದೇಶಗಳಲ್ಲಿ ಅತಿ ನೆರೆ ಸಂಭವ; ಕೊಡಗಿನಲ್ಲಿ 10 ಕಾಳಜಿ ಕೇಂದ್ರ

300 ಕುಟುಂಬ ಸ್ಥಳಾಂತರ

Team Udayavani, Aug 7, 2024, 12:33 AM IST

RaHeavy Rain 104 ಪ್ರದೇಶಗಳಲ್ಲಿ ಅತಿ ನೆರೆ ಸಂಭವ; ಕೊಡಗಿನಲ್ಲಿ 10 ಕಾಳಜಿ ಕೇಂದ್ರ

ಮಡಿಕೇರಿ: ಕೊಡಗಿನಲ್ಲಿ ಮತ್ತೆ ಭಾರೀ ಮಳೆ ನೆರೆ ಭೀತಿಯೊಂದಿಗೆ ಗುಡ್ಡ ಕುಸಿತದಂತಹ ಪ್ರಕೃತಿ ವಿಕೋಪಗಳು ನಡೆಯುವ ಸಾಧ್ಯತೆ ಇದೆ ಎಂದಿರುವ ಭಾರತೀಯ ಭೌಗೋಳಿಕ ಸರ್ವೆ ಇಲಾಖೆ, 104 ಪ್ರದೇಶಗಳನ್ನು ಗುರುತಿಸಿದ್ದು, ಎಚ್ಚರಿಕೆ ವಹಿಸುವಂತೆ ತಿಳಿಸಿದೆ.

ಈ ಎಚ್ಚರಿಕೆಯ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಈಗಾಗಲೇ 10 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, 300 ಕುಟುಂಬಗಳನ್ನು ಅಪಾಯಕಾರಿ ಪ್ರದೇಶಗಳಿಂದ ಸ್ಥಳಾಂತರಿಸಲಾಗಿದೆ.

ಕೊಡಗಿನಲ್ಲಿ 2018 ಮತ್ತು 2019ರಲ್ಲಿ ಭಾರೀ ಭೂಕುಸಿತ ಉಂಟಾಗಿ ಅಪಾರ ನಷ್ಟ ಉಂಟಾಗಿತ್ತು. ಇತ್ತೀಚೆಗೆ ಕೇರಳದ ವಯನಾಡಿನಲ್ಲಿಯೂ ಪ್ರಳಯ ಸದೃಶ ಭೂಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ಭೌಗೋಳಿಕ ಸರ್ವೆ ಇಲಾಖೆ ವಿವಿಧ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಅದರಂತೆ ಕೊಡಗಿನಲ್ಲಿ ಅತೀ ಹೆಚ್ಚು ಪ್ರದೇಶಗಳು ಅಪಾಯದ ಅಂಚಿನಲ್ಲಿವೆ ಎಂದು ಹೇಳಿದೆ.

ಮಡಿಕೇರಿ, ಕುಶಾಲನಗರದಲ್ಲಿ
ಹೆಚ್ಚು ಅಪಾಯ?
ಜಿಲ್ಲಾ ಕೇಂದ್ರವಾಗಿರುವ ಮಡಿಕೇರಿ ತಾಲೂಕಿನಲ್ಲಿಯೇ ಹೆಚ್ಚು ಅಪಾಯಕಾರಿ ಪ್ರದೇಶಗಳಿರುವುದು ಸಹಜವಾಗಿಯೇ ಇಲ್ಲಿನ ಜನರನ್ನು ಅತಂಕಕ್ಕೀಡು ಮಾಡಿದೆ. ಮಡಿಕೇರಿ ಮತ್ತು ಕುಶಾಲನಗರ ತಾಲೂಕಿನಲ್ಲಿ 40 ಅಪಾಯಕಾರಿ ಪ್ರದೇಶಗಳಿದ್ದರೆ, ವಿರಾಜಪೇಟೆ, ಪೊನ್ನಂಪೇಟೆಯಲ್ಲಿ 13 ಮತ್ತು ಸೋಮವಾರಪೇಟೆ ತಾಲೂಕಿ ನಲ್ಲಿ 11 ಅಪಾಯದ ತಾಣಗಳನ್ನು ಗುರುತಿಸಲಾಗಿದೆ.

ಜುಲೈನಲ್ಲಿ ಶೇ. 50 ಹೆಚ್ಚು ಮಳೆ
ಕಾಫಿನಾಡಿನಲ್ಲಿ ಜುಲೈ ತಿಂಗಳಿನಲ್ಲಿ ಈ ಬಾರಿ ವಾಡಿಕೆ ಮಳೆಗಿಂತ ಶೇ. 50ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ವರದಿ ತಿಳಿಸಿದೆ. ಜುಲೈನಲ್ಲಿ ಕೊಡಗಿನಲ್ಲಿ 1,286 ಮಿ.ಮೀ. ಮಳೆಯಾಗಿದೆ.

ಆಗಸ್ಟ್‌ ತೀರಾ ಅಪಾಯಕಾರಿ!
ಈಗಾಗಲೇ ಜುಲೈಯಲ್ಲಿ ಭಾರೀ ಪ್ರಮಾಣದ ಮಳೆಯಾಗಿ ಅಪಾರ ಪ್ರಮಾಣದ ನಾಶ ನಷ್ಟವಾಗಿದೆ. ಜನರು ಮಳೆಯಿಂದಾಗಿ ಹೈರಾಣಾಗಿದ್ದಾರೆ. ಈ ನಡುವೆ ಮಳೆ ಕಡಿಮೆಯಾಗಬೇಕಿದ್ದ ಆಗಸ್ಟ್‌ನಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್‌ನಲ್ಲಿ ವಾಡಿಕೆ ಮಳೆಗಿಂತ ಶೇ. 24ರಷ್ಟು ಹೆಚ್ಚು ಮಳೆಯಾಗುವ ಸಂಭವ ಇದೆ. ಈ ರೀತಿಯಾದಲ್ಲಿ ಹೆಚ್ಚಿನ ಅಪಾಯ ಎದುರಾಗಲಿದೆ. ಆದುದರಿಂದ ಅದಕ್ಕೆ ತಕ್ಕುದಾಗಿ ವ್ಯವಸ್ಥೆಗಳನ್ನು ಮಾಡುವಂತೆ ಈಗಾಗಲೇ ಕೊಡಗಿಗೆ ಮಾಹಿತಿ ರವಾನಿಸಲಾಗಿದೆ.

ಈ ಹಿಂದೆ ಪ್ರಕೃತಿ ವಿಕೋಪ ಸಂಭವಿಸಿದ ಪ್ರದೇಶಗಳು ಮತ್ತು ಭೌಗೋಳಿಕ ಸರ್ವೇ ಇಲಾಖೆ ಗುರುತಿಸಿದ ಪ್ರದೇಶದ ಆಸುಪಾಸಿನ ಸುರಕ್ಷಿತ ಪ್ರದೇಶಗಳಲ್ಲಿ ಕಾಳಜಿ ಕೇಂದ್ರ ತೆರೆಯುವ ಕುರಿತು ಗಮನ ನೀಡುವಂತೆ ಸೂಚಿಸಲಾಗಿದೆ. ಕೊಡಗು ಜಿಲ್ಲಾಡಳಿತ ಕೂಡ ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯತತ್ಪರವಾಗಿದೆ.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Kasaragod: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Kasaragod: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Arrest

Kasaragod: ಚಿನ್ನ ವ್ಯವಹಾರದಿಂದ ನಷ್ಟ; ಮಧ್ಯವರ್ತಿಗಳನ್ನು ಅಪಹರಿಸಿ ಹಲ್ಲೆ: ಆರು ಮಂದಿ ಬಂಧನ

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.