ಇಂದು ಹೊದ್ದೂರು ಗ್ರಾಪಂ ವಿರುದ್ಧ ಪ್ರತಿಭಟನೆ


Team Udayavani, Mar 9, 2017, 2:29 PM IST

09-KASARGOD-4.jpg

ಮಡಿಕೇರಿ: ಬಡವರ್ಗದ ಮಂದಿಗೆ ಅಗತ್ಯ ನಿವೇಶನ ಮತ್ತು ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಹೊದ್ದೂರು ಗ್ರಾ.ಪಂ. ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿರುವ ಬಹುಜನ ಕಾರ್ಮಿಕ ಸಂಘ ಮಾ. 9ರಂದು ಗ್ರಾ.ಪಂ. ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಕಾರ್ಯದರ್ಶಿ ಕೆ.  ಮೊಣ್ಣಪ್ಪ, ಹೊದ್ದೂರು ಗ್ರಾ.ಪಂ.  ವ್ಯಾಪ್ತಿಯ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾಕರು ಕಳೆದ ಹಲವು ವರ್ಷಗಳಿಂದ ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಿದ್ದರೂ ಇಲ್ಲಿಯವರೆಗೆ ಬೇಡಿಕೆ ಈಡೇರಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. 

ಸುಮಾರು 45 ಕುಟುಂಬಗಳು 2009-10ನೇ ಸಾಲಿನಲ್ಲಿ ನಿವೇಶನಕ್ಕಾಗಿ ಅರ್ಜಿಸಲ್ಲಿಸಿದ್ದು, ಅನಂತರದ ವರ್ಷ ಗಳಲ್ಲಿ ಸಲ್ಲಿಕೆಯಾದ ಅರ್ಜಿಗಳು ಸೇರಿದಂತೆ 100ಕ್ಕೂ ಅಧಿಕ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ. ಹೊದ್ದೂರು ಗ್ರಾಮದ ಪಾಲೆಮಾಡಿನಲ್ಲಿ     ನವಗ್ರಾಮ ಯೋಜನೆಗೆ ಕಾಯ್ದಿರಿಸಲಾಗಿದ್ದ ಜಾಗವನ್ನು ತಮ್ಮ ಸ್ವಾಧೀನಕ್ಕೆ ಪಡೆದುಕೊಂಡು ಬಡ ಮಂದಿಗೆ ಹಂಚಲು ಗ್ರಾ.ಪಂ ಯಾವುದೇ ಕ್ರಮ ಕೈಗೊಂಡಿಲ್ಲ. ಶ್ರೀಮಂತರೊಂದಿಗೆ ಶಾಮೀಲಾಗಿರುವ ಕೆಲವು ಆಡಳಿತಗಾರರು ಬಡವರ್ಗಕ್ಕೆ ಅನುಕೂಲ ಕಲ್ಪಿಸದೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಮೊಣ್ಣಪ್ಪ ಆರೋಪಿಸಿದರು.

ಕ್ರಿಕೆಟ್‌ ಸಂಸ್ಥೆಗೆ ಕ್ರೀಡಾಂಗಣ ನಿರ್ಮಾಣಕ್ಕೆ ಜಾಗ ನೀಡುವ ಮೂಲಕ ಬಡವರ್ಗದ ಮಂದಿಗೆ ಅನ್ಯಾಯ ಮಾಡಲಾಗಿದೆ. ಈ ಹಿಂದೆ ಮಂಜೂರಾದ ಜಾಗವನ್ನು ದುರಸ್ತಿ ಪಡಿಸಿಕೊಡುವಂತೆ ತಾಲೂಕು ಪಂಚಾಯತ್‌ ಕಾರ್ಯ ನಿರ್ವಹಣಾಧಿಕಾರಿಗಳ ಮೂಲಕ ತಹಸೀಲ್ದಾರರಿಗೆ ಮನವಿ ಮಾಡಲಾಗಿತ್ತು. ಆದರೆ, ಜಾಗದ ದುರಸ್ತಿ ಕಾರ್ಯ ಇಲ್ಲಿಯವರೆಗೆ ನಡೆಸಿಲ್ಲವೆಂದು ಆರೋಪಿಸಿದರು.

ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ವಿಫ‌ಲವಾಗಿದ್ದು, ಮಾ.9 ರಂದು ಬೆಳಗ್ಗೆ 11 ಗಂಟೆಗೆ ಹೊದ್ದೂರು ಗ್ರಾ.ಪಂ. ಎದುರು ಪ್ರತಿಭಟನೆ ನಡೆಸಲಾಗುವುದು ಎಂದರು. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಮೊಣ್ಣಪ್ಪ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾಪಂ ಸದಸ್ಯೆ ಕುಸುಮಾವತಿ, ಬಹುಜನ ಕಾರ್ಮಿಕ ಸಂಘದ ಸದಸ್ಯರಾದ ಸಿದ್ದು, ಜಾಜು, ಮಂಜುಳಾ ಹಾಗೂ  ಕಿರಣ್‌ ಜಗದೀಶ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.