ಕೊಡಗಿನಲ್ಲಿ ಮುಂದುವರಿದ ಮಹಾಮಳೆ; ಸಚಿವರಿಂದ ಪರಿಶೀಲನೆ


Team Udayavani, Aug 9, 2022, 8:44 AM IST

ಕೊಡಗಿನಲ್ಲಿ ಮುಂದುವರಿದ ಮಹಾಮಳೆ; ಸಚಿವರಿಂದ ಪರಿಶೀಲನೆ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಹಾಮಳೆ ಮುಂದುವರಿದಿದೆ. ಹಲವೆಡೆ ಮನೆಗಳು ಬಿದ್ದಿವೆ, ಸಂಪರ್ಕ ರಸ್ತೆಗಳು ಪ್ರವಾಹದಿಂದ ಆವರಿಸಲ್ಪಟ್ಟಿವೆ. ಕಾವೇರಿ ಮತ್ತು ಲಕ್ಷ್ಮಣ ತೀರ್ಥ ನದಿಗಳ ಪ್ರವಾಹದಿಂದ ನದಿ ಪಾತ್ರದ ನಿವಾಸಿಗಳ ಬದುಕು ಅಸ್ತವ್ಯಸ್ತಗೊಂಡಿದೆ.

ಭಾಗಮಂಡಲ, ತಲಕಾವೇರಿ ವ್ಯಾಪ್ತಿಯಲ್ಲಿ ಕಳೆದ ಒಂದು ದಿನದ ಅವಧಿಯಲ್ಲಿ 7 ಇಂಚಿಗೂ ಹೆಚ್ಚಿನ ಮಳೆೆಯಾಗಿದ್ದು, ಕ್ಷೇತ್ರ ವ್ಯಾಪ್ತಿಯ ಎಲ್ಲ ಕಿರು ತೊರೆಗಳು ಉಕ್ಕಿ ಹರಿದು ಕಾವೇರಿಯನ್ನು ಸೇರುತ್ತಿರುವುದರಿಂದ ಪ್ರವಾಹದ ಮಟ್ಟ ಗಣನೀಯ ಪ್ರಮಾಣದಲ್ಲಿ ಹೆಚ್ಚಿ ಆತಂಕವನ್ನು ಹುಟ್ಟು ಹಾಕಿದೆ.

ನದಿ ಪಾತ್ರದ ನಾಪೋಕ್ಲು, ಮೂರ್ನಾಡು, ಸಿದ್ದಾಪುರದಲ್ಲೂ ಉತ್ತಮ ಮಳೆೆಯಾಗುತ್ತಿದ್ದು, ಸಿದ್ದಾಪುರ ಬಳಿಯ ನೆಲ್ಲಿಹುದಿಕೇರಿ, ಕರಡಿಗೋಡು ವಿಭಾಗಗಳಲ್ಲಿ ಸಂಪರ್ಕ ರಸ್ತೆಗಳು ಮುಳುಗಡೆಯಾಗಿದೆ. ಕಾವೇರಿಯ ಪ್ರವಾಹದಿಂದ ಮಡಿಕೇರಿ-ಮೂರ್ನಾಡು ನಡುವಿನ ಬೇತ್ರಿಯ ಸೇತುವೆಯಲ್ಲಿ ಪ್ರವಾಹದ ಮಟ್ಟ ಏರಿಕೆಯಾಗುತ್ತಿದ್ದು, ಮಳೆಯ ತೀವ್ರತೆ ಮುಂದುವರಿದಲ್ಲಿ ಸಂಪರ್ಕ ಕಡಿತವಾಗುವ ಆತಂಕ ಎದುರಾಗಿದೆ.

35 ಕುಟುಂಬಗಳ ಸ್ಥಳಾಂತರ
ಭಾರೀ ಜಲಸ್ಫೋಟವಾಗಿದ್ದ ಎರಡನೇ ಮೊಣ್ಣಂಗೇರಿ ಗ್ರಾಮ ವ್ಯಾಪ್ತಿಯಲ್ಲಿ ನೆಲೆಸಿರುವ 35 ಕುಟುಂಬಗಳನ್ನು ಮುಂಜಾಗ್ರತ ಕ್ರಮವಾಗಿ ಮಡಿಕೆೇರಿ ರೆಡ್‌ ಕ್ರಾಸ್‌ ಭವನದ ಕಾಳಜಿ ಕೇಂದ್ರಕ್ಕೆ ದಾಖಲಿಸಲಾಗಿದೆ.

ವಿವಿಧೆಡೆ ಮನೆಗಳಿಗೆ ಹಾನಿ
ಭಾರೀ ಗಾಳಿ ಮಳೆಯಿಂದ ಜಿಲ್ಲೆಯ ಹಲವೆಡೆಗಳಲ್ಲಿ ಮನೆಗಳ ಗೋಡೆಗಳು ಕುಸಿದು ಹಾನಿಯುಂಟಾಗಿರುವ ಘಟನೆಗಳು ವರದಿಯಾಗಿದ್ದು, ಹೆಬ್ಟಾಲೆಯ ಬಸಮ್ಮ ಎಂಬವರ ಮನೆಯ ಪಾರ್ಶ್ವ ಕುಸಿದಿದ್ದರೆ, ಅದೇ ಗ್ರಾಮದ ಪುಟ್ಟರಾಜ ಎಂಬವರ ಮನೆಗೂ ಹಾನಿಯಾಗಿದೆ.

“ಕೊಡಗನ್ನು ಅವಗಣಿಸುವ ಪ್ರಶ್ನೆಯೇ ಇಲ್ಲ’
ಮಡಿಕೇರಿ, ಆ. 8: ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ಪ್ರವಾಹ ಪೀಡಿತ ಪ್ರದೇಶ, ಮನೆ ಹಾನಿ ಮತ್ತು ನಗರದ ಕಾಳಜಿ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಸೋಮವಾರಪೇಟೆ ತಾಲೂಕಿನ ಬೆಸೂರು, ನಿರುಗುಂದ ಹಾಗೂ ಕೆಳಕೊಡ್ಲಿ ಗ್ರಾಮದಲ್ಲಿ ನಿರಂತರ ಮಳೆಯಿಂದಾಗಿ ಹಾನಿಯಾಗಿರುವ ಮನೆಗಳನ್ನು ವೀಕ್ಷಿಸಿ ಸ್ಥಳದಲ್ಲಿಯೇ ಪರಿಹಾರದ ಚೆಕ್‌ ವಿತರಿಸಿದರು.

ಅನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು ಮಳೆಹಾನಿ ಪರಿಹಾರದ ವಿಚಾರದಲ್ಲಿ ಕೊಡಗನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದರು.

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಖಾತೆಯಲ್ಲಿ 35 ಕೋಟಿ ರೂ. ಹಣವಿದೆ. ಮುಂದಿನ ದಿನಗಳಲ್ಲಿ ಅನುದಾನದ ಅವಶ್ಯಕತೆ ಇದ್ದಲ್ಲಿ ಕೂಡಲೇ ಜಿಲ್ಲಾಡಳಿತಕ್ಕೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲೆಯ 2ನೇ ಮೊಣ್ಣಂಗೇರಿ, ಚೆಂಬು, ಪೆರಾಜೆ ಭಾಗದಲ್ಲಿ ಆಗಾಗ ಸಂಭವಿಸುತ್ತಿರುವ ಭೂಕಂಪನ ಹಾಗೂ ಭೂ ಕುಸಿತಗಳಿಗೆ ಸೂಕ್ತ ಕಾರಣ ತಿಳಿಯಲು ಕೇಂದ್ರ ತಜ್ಞರ ತಂಡವು ಜಿಲ್ಲೆಗೆ ಆಗಮಿಸಲಿದೆ. ಮಳೆ ನಿಂತ ಕೂಡಲೇ ತಜ್ಞರು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

5 ಕಾಳಜಿ ಕೇಂದ್ರಗಳು
ಜಿಲ್ಲಾಧಿಕಾರಿ ಡಾ| ಬಿ.ಸಿ.ಸತೀಶ ಅವರು ಮಾತನಾಡಿ ಜಿಲ್ಲೆಯಲ್ಲಿ 5 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ಹಲವು ಮಂದಿ ಸಂತ್ರಸ್ತರು ಇದ್ದಾರೆ. ನಗರದ ರೆಡ್‌ಕ್ರಾಸ್‌ ಭವನದಲ್ಲಿ ಇರುವ ಕಾಳಜಿ ಕೇಂದ್ರಕ್ಕೆ ಸಚಿವರು ಭೇಟಿ ನೀಡಿ ಸಂತ್ರಸ್ತರ ಯೋಗ ಕ್ಷೇಮ ವಿಚಾರಿಸಿದರು. ಕಾಳಜಿ ಕೇಂದ್ರದಲ್ಲಿರುವ ಮಕ್ಕಳ ಜತೆ ಹುಟ್ಟು ಹಬ್ಬದಲ್ಲಿ ಪಾಲ್ಗೊಂಡರು, ಸಂತ್ರಸ್ತ ಮಕ್ಕಳು ಸಚಿವರ ಜತೆ ಕೇಕ್‌ ಕತ್ತರಿಸಿ ಸಂಭ್ರಮಿಸಿದರು.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.