ಕೊಡಗಿನಲ್ಲಿ ಲೋಕಾಯುಕ್ತ ದಾಳಿ : ಮೂವರು ಅಧಿಕಾರಿಗಳ ಬಳಿ ನಗದು, ಚಿನ್ನಾಭರಣ ಪತ್ತೆ
Team Udayavani, Oct 23, 2022, 8:27 AM IST
ಮಡಿಕೇರಿ: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಪೊಲೀಸ್ ಅಧಿಕಾರಿಗಳು ಕುಶಾಲನಗರ ಮತ್ತು ಮಡಿಕೇರಿಯಲ್ಲಿ ಸರಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಶುಕ್ರವಾರ ದಾಳಿ ನಡೆಸಿದ್ದಾರೆ.
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತ ಡಿ. ನಾಗರಾಜು ಅವರ ಮನೆಯಲ್ಲಿ 1,086 ಗ್ರಾಂ ಚಿನ್ನ, 9,928 ಗ್ರಾಂ ಬೆಳ್ಳಿ, ನಗದು ಹಣ 23.91 ಲಕ್ಷ ರೂ., ಒಂದು ಕಿಯಾ ಕಾರು, ಒಂದು ಸೆಲೆರಿಯೋ ಕಾರು, ಒಂದು ಸ್ಕೂಟರ್ ಹಾಗೂ ದಾಖಲಾತಿಗಳು ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿ ಬ್ಯಾಂಕಿನ 1 ಅಕೌಂಟ್ ನಲ್ಲಿ ಒಟ್ಟು 59.36 ಲಕ್ಷ ರೂ. ಪತ್ತೆಯಾಗಿದೆ.
ಸಣ್ಣ ನೀರಾವರಿ ಇಲಾಖೆಯ ಜೂನಿಯರ್ ಎಂಜಿನಿಯರ್ ಕುಶಾಲನಗರದ ನಿವಾಸಿ ರಫೀಕ್ ಅವರ ಬಳಿ ಬೈಚೇನಹಳ್ಳಿಯಲ್ಲಿ ಒಂದು ಮನೆ, 2 ಎಕರೆ ಕಾಫಿ ತೋಟ, 680 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ, ನಗದು ಹಣ 2.82 ಲಕ್ಷ ರೂ., ಇನ್ನೋವಾ ಕಾರು, ಬೊಲೆರೋ ಜೀಪ್, ಒಂದು ಸ್ಕೂಟರ್ ಹಾಗೂ ದಾಖಲೆಗಳು ಪತ್ತೆಯಾಗಿದೆ.
ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆ ಆದೇಶದಲ್ಲಿರುವ ಈ ಹಿಂದೆ ಕುಶಾಲನಗರದ ವೃತ್ತ ನಿರೀಕ್ಷಕರಾಗಿದ್ದ ಮಹೇಶ್ ಎಂ. ಅವರ ಬಳಿ ಕುಶಾಲನಗರದ ಮಾದಪಟ್ಟಣದಲ್ಲಿ ಒಂದು ಮನೆ, 200 ಗ್ರಾಂ ಚಿನ್ನ, 2.5 ಕೆ.ಜಿ ಬೆಳ್ಳಿ, 5,500 ರೂ. ನಗದು ಹಾಗೂ ಕುಟುಂಬದ ಸದಸ್ಯರ ಹೆಸರುಗಳಲ್ಲಿ ಬ್ಯಾಂಕಿನ 4 ಅಕೌಂಟ್ಗಳಲ್ಲಿ ಒಟ್ಟು 4.99 ಲಕ್ಷ ರೂ. ನಗದು, ಒಂದು ಕಾರು, ಒಂದು ಸ್ಕೂಟರ್ ಹಾಗೂ ದಾಖಲಾತಿಗಳು ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿತ ಅಧಿಕಾರಿಗಳ ಹಾಗೂ ಕಚೇರಿಗಳ ಮೇಲಿನ ದಾಳಿ ಕಾರ್ಯಾಚರಣೆಯನ್ನು ಕರ್ನಾಟ ಲೋಕಾಯುಕ್ತದ ಅಪರ ಪೊಲೀಸ್ ಮಹಾನಿರ್ದೇಶಕರಾದ ಪ್ರಶಾಂತ್ ಕುಮಾರ್ ಠಾಕೂರ್ ಇವರ ಮಾರ್ಗದರ್ಶನದಲ್ಲಿ, ಮೈಸೂರು ಲೋಕಾಯುಕ್ತ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಎಸ್. ಸುರೇಶ್ ಬಾಬು ಅವರ ನೇತೃತ್ವದಲ್ಲಿ ಡಿ.ವೈ.ಎಸ್.ಪಿ ಗಳಾದ ಪವನಕುಮಾರ್, ಕೃಷ್ಣಯ್ಯ, ಮಾಲತೀಶ್, ಎಸ್.ಟಿ. ಒಡೆಯರ್ ಹಾಗೂ ಪೊಲೀಸ್ ನಿರೀಕ್ಷಕರಾದ ಲೋಕೇಶ್, ಉಮೇಶ್, ಶಶಿಕಲಾ, ರವಿಕುಮಾರ್, ಶಶಿಕುಮಾರ್, ಪ್ರಕಾಶ್, ಜಯರತ್ನ, ರೂಪಶ್ರೀ ಹಾಗೂ ಸಿಬಂದಿ ಪಾಲ್ಗೊಂಡಿದ್ದರು.
ಇದನ್ನೂ ಓದಿ : ಓಲಾ ಹೊಸ ಸ್ಕೂಟರ್ ರಿಲೀಸ್; ಎಸ್1 ಏರ್ ಮಾದರಿಯ ದ್ವಿಚಕ್ರ ವಾಹನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಬೆಳಿಗ್ಗೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಮಧ್ಯಾಹ್ನ ಕಾಂಗ್ರೆಸ್ ಸೇರ್ಪಡೆ
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್ಯಾಲಿ
Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ಷರತ್ತುಬದ್ಧ ಜಾಮೀನು
Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.