Madikeri: ಕೋಟ್ಯಾಂತರ ಮೌಲ್ಯದ ಹೈಡ್ರೋ ಗಾಂಜಾ ವಶ; 7 ಆರೋಪಿಗಳ ಬಂಧನ

ಅಂತಾರಾಷ್ಟ್ರೀಯ ಮಾದಕ ವಸ್ತು ದಂಧೆ ಪ್ರಕರಣ ಭೇದಿಸಿದ ಕೊಡಗು ಪೊಲೀಸರು

Team Udayavani, Oct 2, 2024, 8:09 PM IST

madikeri

ಮಡಿಕೇರಿ: ಅಂತಾರಾಷ್ಟ್ರೀಯ ಮಾದಕ ವಸ್ತು ದಂಧೆ ಪ್ರಕರಣವನ್ನು ಭೇದಿಸಿರುವ ಕೊಡಗು ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿ, ಕೋಟ್ಯಾಂತರ ಮೌಲ್ಯದ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಕೊಡಗು ಜಿಲ್ಲೆಯ ಹೆಗ್ಗಳ ಗ್ರಾಮದ ನಾಸಿರುದ್ದೀನ್ ಎಂ.ಯು(26), ಎಡಪಾಲ ಗ್ರಾಮದ ಯಾಹ್ಯಾ ಸಿ.ಹೆಚ್(28), ಕುಂಜಿಲ ಗ್ರಾಮದ ಅಕನಾಸ್(26), ಬೇಟೋಳಿ ಗ್ರಾಮದ ವಾಜಿದ್(26), ಕೇರಳದ ಕಣ್ಣೂರು ಗ್ರಾಮದ ರಿಯಾಜ್(44), ಕಾಸರಗೋಡಿನ ಮೆಹರೂಫ್(37) ಹಾಗೂ ರವೂಫ್(28) ಬಂಧಿತ ಆರೋಪಿಗಳು.

ಇವರ ಬಳಿಯಿಂದ ಸುಮಾರು 3 ಕೋ.ರೂ.ಬೆಲೆ ಬಾಳುವ 3.31 ಕೆ.ಜಿ ಹೈಡ್ರೋ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ.

ಹೈಡ್ರೋ ಗಾಂಜಾವನ್ನು ವಿಮಾನದ ಮೂಲಕ ಭಾರತ ಮತ್ತು ದುಬೈಗೆ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ ಅಂತಾರಾಷ್ಟ್ರೀಯ ವ್ಯವಸ್ಥಿತ ಜಾಲವೊಂದನ್ನು ಕೊಡಗು ಪೊಲೀಸ್ ಅಧಿಕಾರಿಗಳು ಪತ್ತೆ ಹಚ್ಚಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸುದ್ದಿಗೋಷ್ಠಿಯಲ್ಲಿ ಹೆಮ್ಮೆ ವ್ಯಕ್ತಪಡಿಸಿದರು.

ಥೈಲ್ಯಾಂಡ್ ದೇಶದ ಬ್ಯಾಂಕಾಕ್ ನಗರದಲ್ಲಿ ಕೆಫೆ ಇಟ್ಟುಕೊಂಡಿರುವ ಕೇರಳ ಮೂಲದ ಮಹಮ್ಮದ್ ಅನೂಫ್ ಎಂಬಾತ ಕೇರಳದ ಕಾಸರಗೋಡಿನ ಮೆಹರೂಫ್, ರವೂಫ್ ಹಾಗೂ ಕೊಡಗಿನ ಬಂಧಿತ ಯುವಕರ ಮೂಲಕ ಭಾರತ ಮತ್ತು ದುಬೈಗೆ ಹೈಡ್ರೋ ಗಾಂಜಾವನ್ನು ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ ಎಂದು ಎಸ್‌ಪಿ ತಿಳಿಸಿದರು.

ಆರೋಪಿ ಯಾಹ್ಯಾ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೈಡ್ರೋ ಗಾಂಜಾವನ್ನು ತಂದು ನಂತರ ಅಲ್ಲಿಂದ ನಾಸೀರುದ್ದೀನ್, ಆಕನಾಸ್, ಅಜ್ಜಲ್, ರಿಯಾಜ್ ಹಾಗೂ ವಾಜೀದ್ ಅವರೊಂದಿಗೆ ಕಾರಿನಲ್ಲಿ ಗೋಣಿಕೊಪ್ಪದ ಬೆಳ್ಳಿಯಪ್ಪ ರೆಸಿಡೆನ್ಸಿಯೊಂದಕ್ಕೆ ಬಂದು ತಂಗುತ್ತಾರೆ. ಕೇರಳದ ಮೆಹರೂಫ್ ನ ಮುಂದಿನ ನಿರ್ದೇಶನಕ್ಕಾಗಿ ಕಾಯುತ್ತಿದ್ದ ತಂಡ ಒಂದೇ ಸ್ಥಳದಲ್ಲಿ ಇದ್ದರೆ ಯಾರಿಗಾದರೂ ಅನುಮಾನ ಬರುತ್ತದೆ ಎನ್ನುವ ಕಾರಣಕ್ಕೆ ಸ್ಥಳ ಬದಲಾವಣೆಗೆ ಮುಂದಾಗುತ್ತಾರೆ.

ವಿರಾಜಪೇಟೆಯಿಂದ ಮಡಿಕೇರಿಗೆ ಬರುವಾಗ ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸ್ ಅಧಿಕಾರಿಗಳು ವಿರಾಜಪೇಟೆ ರಸ್ತೆಯಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು.

ಕೃತ್ಯಕ್ಕೆ ಸಹಕರಿಸಿದ ಮತ್ತೊಬ್ಬ ಆರೋಪಿ ಆರ್ಜಿ ಗ್ರಾಮದ ರವೂಫ್ ನನ್ನು ಬೆಂಗಳೂರಿನ ಸಂಜಯನಗರ ಲೇಔಟ್ ನಿವಾಸದಲ್ಲಿ ಬಂಧಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿಯಾದ ಕಾಸರಗೋಡಿನ ಮೆಹರೂಫ್ ಥೈಲ್ಯಾಂಡ್ ದೇಶದ ಬ್ಯಾಂಕಾಕ್ ಗೆ ಪರಾರಿಯಾಗಲು ಯತ್ನಿಸಿದಾಗ ಕೇರಳದ ಎರ್ನಾಕುಲಂ ಜಿಲ್ಲೆಯ ಎಸ್.ಪಿ. ವೈಭವ್ ಸಕ್ಸೇನಾ ಹಾಗೂ ಕೊಚ್ಚಿನ್ ಏರ್ ಪೋರ್ಟ್ ಇಮಿಗ್ರೇಶನ್ ಅಧಿಕಾರಿಯಾದ ಕೃಷ್ಣರಾಜ್ ಅವರ ಸಹಕಾರದಿಂದ ಬಂಧಿಸಲಾಯಿತು ಎಂದು ಎಸ್‌ಪಿ ವಿವರಿಸಿದರು.

ಅಧಿಕ ನಶೆ
ಇದೊಂದು ಅಪರೂಪದ ಪ್ರಕರಣವಾಗಿದ್ದು, ಹೈಡ್ರೋ ಗಾಂಜಾ ಸಾಮಾನ್ಯ ಗಾಂಜಾಕ್ಕಿಂತ ಹೆಚ್ಚು ನಶೆಯನ್ನು ಕೊಡುವ ಮಾದಕ ದ್ರವ್ಯವಾಗಿದೆ ಮತ್ತು ದುಬಾರಿ ಬೆಲೆಯದ್ದಾಗಿದೆ. ಇದನ್ನು ವಿಭಿನ್ನ ರೀತಿಯ ಕೃತಕ ಬೆಳಕನ್ನು ಉಪಯೋಗಿಸಿ ಹವಾ ನಿಯಂತ್ರಿತ ಕೊಠಡಿಯಲ್ಲಿ ಬೆಳೆಸಲಾಗುತ್ತದೆ ಎಂದು ಎಸ್‌ಪಿ ಕೆ.ರಾಮರಾಜನ್ ಮಾಹಿತಿ ನೀಡಿದರು.

ಈ ಪ್ರಕರಣವನ್ನು ಕೊಡಗು ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್ ರಾಜ್ ಕೆ.ಎಸ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ರವಿಕುಮಾರ್ ಎಸ್. ಹಾಗೂ ಮಡಿಕೇರಿ ನಗರ ವೃತ್ತ ನಿರೀಕ್ಷಕ ರಾಜು ಪಿ.ಕೆ. ಅವರ ನೇತೃತ್ವದ ತಂಡ ಸತತ 72 ಗಂಟೆಗಳ ಕಾಲ ತನಿಖೆಯಲ್ಲಿ ತೊಡಗಿಸಿಕೊಂಡು ಯಶಸ್ವಿಯಾಗಿ ಬೇಧಿಸಿದೆ.

ಡಿ.ಸಿ.ಆರ್.ಬಿ ಘಟಕದ ಪೊಲೀಸ್ ನಿರೀಕ್ಷಕ ಮೇದಪ್ಪ ಐ.ಪಿ, ಡಿವೈಎಸ್‌ಪಿ ಮಹೇಶ್ ಕುಮಾರ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಯೋಗೇಶ್, ನಿರಂಜನ್, ಶರತ್ ರೈ, ರವಿಕುಮಾರ್, ನಾಪೋಕ್ಲು ಪೊಲೀಸ್ ಠಾಣೆಯ ಉಪನಿರೀಕ್ಷಕ ಮಂಜುನಾಥ್, ಸಿಬ್ಬಂದಿಗಳಾದ ಪ್ರದೀಪ್ ಕುಮಾರ್, ಮುರುಳಿ, ನವೀನ್ ಜಿಲ್ಲಾ ಪೊಲೀಸ್ ಘಟಕದ ತಾಂತ್ರಿಕ ಸಿಬ್ಬಂದಿಗಳಾದ ರಾಜೇಶ್ ಸಿ.ಕೆ ಹಾಗೂ ಪ್ರವೀಣ್ ಕುಮಾರ್ ಕಾರ್ಯಾಚರಣೆ ನಡೆಸಿದರು.

ಟಾಪ್ ನ್ಯೂಸ್

Udupi: ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಡಾ| ಕೆ.ವಿದ್ಯಾಕುಮಾರಿ

Udupi: ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಡಾ| ಕೆ.ವಿದ್ಯಾಕುಮಾರಿ

Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು

Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

Trap Shooting: ಶಾಟ್‌ ಗನ್‌ ಟ್ರ್ಯಾಪ್ ಶೂಟಿಂಗ್‌… ಸ್ಯಾಮುಯೆಲ್‌ ಸಿಮ್ಸನ್‌ಗೆ ಚಿನ್ನ

Trap Shooting: ಶಾಟ್‌ ಗನ್‌ ಟ್ರ್ಯಾಪ್ ಶೂಟಿಂಗ್‌… ಸ್ಯಾಮುಯೆಲ್‌ ಸಿಮ್ಸನ್‌ಗೆ ಚಿನ್ನ

jaaa

BBK11: ಆಚೆ ಕಡೆ ಹೋಗಿ ಬಿಗ್ ಬಾಸ್ ಮುಖವಾಡವನ್ನು ಬಯಲು ಮಾಡ್ತೇನೆ ಎಂದ ಜಗದೀಶ್

Swachh Bharat Mission: “ಸ್ವಚ್ಛಭಾರತ’ 21ನೇ ಶತಮಾನದ ಯಶಸ್ವಿ ಜನಾಂದೋಲನ: ಮೋದಿ

Swachh Bharat Mission: “ಸ್ವಚ್ಛಭಾರತ’ 21ನೇ ಶತಮಾನದ ಯಶಸ್ವಿ ಜನಾಂದೋಲನ: ಮೋದಿ

Beldale

Bidar: ನಿವೇಶನಗಳ ವಾಪಸ್ ಕೊಟ್ರೂ ಸಿದ್ದರಾಮಯ್ಯ ಕುಟುಂಬಕ್ಕೆ ಕಂಟಕ ತಪ್ಪಲ್ಲ: ಶಾಸಕ ಬೆಲ್ದಾಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Kasaragod: ಜ್ವರದಿಂದ ವಿದ್ಯಾರ್ಥಿನಿ ಸಾವು

ACT

Kumbale: ಎರಡು ಮನೆಗಳಿಂದ ಕಳವು: ಬಂಧನ

2

Kumble: ಎರಡು ಮನೆಗಳಿಂದ ಕಳವು; ಬಂಧನ

arre

Kumble: ಮಾವನ ಕೊಲೆಗೆ ಯತ್ನ: ಆರೋಪಿ ಬಂಧನ

Madikeri: ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜಿಗೆ ಪ್ರಯತ್ನ

Madikeri: ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜಿಗೆ ಪ್ರಯತ್ನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಡಾ| ಕೆ.ವಿದ್ಯಾಕುಮಾರಿ

Udupi: ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಡಾ| ಕೆ.ವಿದ್ಯಾಕುಮಾರಿ

Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು

Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

Trap Shooting: ಶಾಟ್‌ ಗನ್‌ ಟ್ರ್ಯಾಪ್ ಶೂಟಿಂಗ್‌… ಸ್ಯಾಮುಯೆಲ್‌ ಸಿಮ್ಸನ್‌ಗೆ ಚಿನ್ನ

Trap Shooting: ಶಾಟ್‌ ಗನ್‌ ಟ್ರ್ಯಾಪ್ ಶೂಟಿಂಗ್‌… ಸ್ಯಾಮುಯೆಲ್‌ ಸಿಮ್ಸನ್‌ಗೆ ಚಿನ್ನ

jaaa

BBK11: ಆಚೆ ಕಡೆ ಹೋಗಿ ಬಿಗ್ ಬಾಸ್ ಮುಖವಾಡವನ್ನು ಬಯಲು ಮಾಡ್ತೇನೆ ಎಂದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.