Madikeri: ಕೆಲಸ ಕೂಲಿ… ಗಾಂಜಾ ಮಾರಾಟದ ಆರೋಪ, ಬಯಲಾಗಿದ್ದು ಅಂತರ್ ಜಿಲ್ಲಾ ಕಳ್ಳತನ ಪ್ರಕರಣ
Team Udayavani, Jul 19, 2024, 1:50 PM IST
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಡಿ ಬಂಧಿಯಾಗಿರುವ ಆರೋಪಿಯೊಬ್ಬ ಅಂತರ್ ಜಿಲ್ಲಾ ವಾಹನ ಚೋರನೂ ಆಗಿದ್ದಾನೆ ಎನ್ನುವ ಮಾಹಿತಿ ವಿಚಾರಣೆ ವೇಳೆ ಬಹಿರಂಗಗೊಂಡಿದೆ.
ಆರ್ಜಿ ಗ್ರಾ.ಪಂ ವ್ಯಾಪ್ತಿಯ ಒಂದನೇ ಪೆರುಂಬಾಡಿ ಗ್ರಾಮದ ನಿವಾಸಿ, ಕೂಲಿ ಕಾರ್ಮಿಕ ಎನ್.ದರ್ಶನ್ ನಾಯಕ್ (26) ಬಂಧಿತ ಆರೋಪಿಯಾಗಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 11 ದ್ವಿಚಕ್ರ ವಾಹನಗಳು ಮತ್ತು ಒಂದು ಓಮ್ನಿ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಣಸೂರು, ಹನಗೋಡು, ಬಿಳಿಕೆರೆ, ರಾಮನಾಥಪುರ ಮತ್ತಿತರ ಕಡೆಗಳಲ್ಲಿ ಈತ ವಾಹನಗಳನ್ನು ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಕೆಲವು ದಿನಗಳ ಹಿಂದು ಆರ್ಜಿ ಗ್ರಾಮ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಯತ್ನ ಆರೋಪದಡಿ ವಿರಾಜಪೇಟೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಅಲ್ಲದೆ ನಾಲ್ಕು ದ್ವಿಚಕ್ರ ವಾಹನ ಮತ್ತು ಒಂದು ಓಮ್ನಿ ವಾಹನ ವಶಕ್ಕೆ ಪಡೆದಿದ್ದರು. ದರ್ಶನ್ ನಾಯಕ್ ಸೇರಿದಂತೆ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದರು.
ಬಂಧಿತರನ್ನು ವಿಚಾರಣೆಗೊಳಪಡಿಸಿದಾಗ ವಶ ಪಡಿಸಿಕೊಂಡ ವಾಹನಗಳಿಗೆ ದಾಖಲೆ ಇಲ್ಲದಿರುವುದು ಕಂಡು ಬಂದಿದೆ. ಈ ನಡುವೆ ಪರಾರಿಯಾಗಿದ್ದ ಇಬ್ಬರಿಗಾಗಿ ತನಿಖೆ ಕೈಗೊಂಡಿದ್ದ ಪೊಲೀಸರು ದರ್ಶನ್ ನಾಯಕ್ ನನ್ನು ಪೆರುಂಬಾಡಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಈತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಐಷಾರಾಮಿ ಜೀವನಕ್ಕಾಗಿ ವಾಹನಗಳನ್ನು ಕಳ್ಳತನ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಎನ್ನುವ ಮಾಹಿತಿ ಹೊರ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ವಿರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ವೃತ್ತ ನೀರಿಕ್ಷಕ ಬಿ.ಎಸ್.ಶಿವರುದ್ರ ಅವರ ನೇತೃತ್ವದಲ್ಲಿ ವಿರಾಜಪೇಟೆ ನಗರ ಪ್ರಬಾರ ಠಾಣಾಧಿಕಾರಿ ವಾಣಿಶ್ರೀ ಎ.ಎಸ್.ಐ ಮಂಜು, ಸಿಬ್ಬಂದಿಗಳಾದ ಎಸ್.ಟಿ.ಗಿರೀಶ್, ಧರ್ಮ ಕೆ.ಎಂ, ಗ್ರಾಮಾಂತರ ಪೊಲೀಸ್ ಠಾಣೆಯ ಜೋಸ್ ನಿಶಾಂತ್, ಮೋಹನ್, ಸತೀಶ್, ಸುರೇಶ್ ಅವರುಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.