ಮಡಿಕೇರಿ: ಶ್ರಮ ಜೀವಿಗೆ ಸಮ್ಮಾನ
Team Udayavani, Apr 13, 2017, 5:03 PM IST
ಮಡಿಕೇರಿ: ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪೌರಕಾರ್ಮಿಕರನ್ನು ಪೊನ್ನಂಪೇಟೆ ನಿಸರ್ಗ ಯುವತಿ ಮಂಡಳಿ ವತಿಯಿಂದ ಸಮ್ಮಾನಿಸಲಾಯಿತು.
ಕಳೆದ 30 ವರ್ಷಗಳ ಕಾಲ ಪೊನ್ನಂಪೇಟೆ ಗ್ರಾಮ ಪಂಚಾಯತ್ನಲ್ಲಿ ಪೌರಕಾರ್ಮಿಕ ರಾಗಿ ಸುದೀರ್ಘ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಶಿವ ಕಾಲೋನಿಯ ನಿವಾಸಿಯಾದ ನಂಜಮ್ಮನವರನ್ನು ವಿರಾಜಪೇಟೆ ತಾಲೂಕು ಯುವ ಒಕ್ಕೂಟ ಹಾಗೂ ಪೊನ್ನಂಪೇಟೆ ನಿಸರ್ಗ ಯುವತಿ ಮಂಡಳಿ ವತಿಯಿಂದ ಸಮ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ನಿಸರ್ಗ ಯುವತಿ ಮಂಡಳಿಯ ಅಧ್ಯಕ್ಷರಾದ ರೇಖಾ ಶ್ರೀಧರ್, ಸಮಾಜದಲ್ಲಿ ಬೇರೆಬೇರೆ ವೃತ್ತಿಯಲ್ಲಿ ಸಾಧನೆ ಮಾಡಿದವರನ್ನು ಗುರುತಿಸುವುದು ಸಹಜ. ಆದರೆ ಇಡೀ ಪಟ್ಟಣದ ಶುಚಿತ್ವದ ಕಾಯಕದಲ್ಲಿ ಕಳೆದ 30 ವರ್ಷಗಳಿಂದ ನಿರಂತರವಾಗಿ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸಿದ ನಂಜಮ್ಮನವರನ್ನು ಸಮ್ಮಾನಿಸುತ್ತಿರುವುದು ಗಮನಾರ್ಹವೆಂದರು.
ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಯ ಪರಿಶ್ರಮ ಮತ್ತು ಸಾಧನೆಯನ್ನು ಪ್ರತಿಯೊಬ್ಬರು ಗುರುತಿಸುವಂತಾಗಬೇಕು ಎಂಬ ಕಾರಣದಿಂದ ಇವರನ್ನು ಸನ್ಮಾನಿಸಲಾಗಿದೆ.
ಪೊನ್ನಂಪೇಟೆ ಗ್ರಾಮ ಪಂಚಾಯತ್ಗೆ ಉತ್ತಮ ಗ್ರಾಮ ಪುರಸ್ಕಾರ ಪ್ರಶಸ್ತಿ ಹಾಗೂ 5 ಲಕ್ಷ ರೂ. ಅನುದಾನ ಬರಲು ನಂಜಮ್ಮನವರಂತಹ ಪೌರ ಕಾರ್ಮಿಕರ ಅವಿರತ ಪರಿಶ್ರಮ ಕಾರಣವೆಂದು ರೇಖಾ ಶ್ರೀಧರ್ ಶ್ಲಾ ಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮನೆಯಪಂಡ ಶೀಲಾ ಬೋಪಣ್ಣ ಮಾತನಾಡಿ ಪ್ರತಿಯೊಬ್ಬರು ಕೂಡ ವಿವಿಧ ರಂಗದಲ್ಲಿ ಸಾಧನೆ ಮಾಡಿದ ಇಂತಹ ವ್ಯಕ್ತಿಗಳನ್ನು ಗುರುತಿಸಿ ಸಮ್ಮಾನಿಸುವಂತಾಗಬೇಕು. ಕೇವಲ ಅರ್ಜಿ, ಬೇರೆಯವರಿಂದ ಒತ್ತಡ ಹಾಕಿಸಿಕೊಂಡು ಸಮ್ಮಾನ ಪಡೆದುಕೊಳ್ಳುವುದು ನಿಲ್ಲುವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಹಿರಿಯರಾದ ಪಾರ್ವತಿಗೋವಿಂದನ್, ನಿಸರ್ಗ ಯುವತಿ ಮಂಡಳಿ ಕಾರ್ಯದರ್ಶಿ ಜಯಂತಿ ಸುರೇಶ್, ಖಜಾಂಜಿ ಅನುಪಮ ವಿನೋದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.