ಮಳೆಗಾಗಿ ಮಳೆ ಮಲ್ಲೇಶ್ವರ ಬೆಟ್ಟಕ್ಕೆ ಪಾದಯಾತ್ರೆ


Team Udayavani, Apr 12, 2017, 5:20 PM IST

10ss2-bettadalli-padayathri.jpg

ಶನಿವಾರಸಂತೆ: ಸೋಮವಾರಪೇಟೆ ತಾಲೂಕಿನ ಮಾಲಂಬಿ ಗ್ರಾಮದಲ್ಲಿರುವ ಮಳೆ ಮಲ್ಲೇಶ್ವರ ಬೆಟ್ಟವನ್ನೇರಿದರೆ ಮಳೆಯಾಗುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆ. ಅದರಂತೆ ಸೋಮವಾರ ಶನಿವಾರಸಂತೆ ಪಟ್ಟಣದ ಶ್ರೀ ಮಂಜುನಾಥ ಸ್ವಾಮಿ ಪಾದಯಾತ್ರೆ ಸಮಿತಿ ವತಿಯಿಂದ ಮಾಲಂಬಿ ಮಳೆ ಮಲ್ಲೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಯಿತು. 

ಪಟ್ಟಣದಿಂದ 12 ಕಿ.ಮೀ. ದೂರದಲ್ಲಿರುವ ಸಮುದ್ರ ಮಟ್ಟದಿಂದ 5,778 ಅಡಿ ಎತ್ತರದಲ್ಲಿರುವ ಮಾಲಂಬಿ ಮಳೆಮಲ್ಲೇಶ್ವರ ಬೆಟ್ಟವನ್ನೇರಿದ ಪಾದಯಾತ್ರಿಗಳು ಬೆಟ್ಟದ ಮೇಲಿರುವ ಶ್ರೀ ಮಳೆಮಲ್ಲೇಶ್ವರ ದೇವಾಲಯದಲ್ಲಿ ಮಳೆಮಲ್ಲೇಶ್ವರನಿಗೆ ವಿಶೇಷ ಪೂಜಾ ವಿಧಿ ವಿಧಾನವನ್ನು ಸಲ್ಲಿಸಿದರು. 

ಮಳೆಯ ಬರುವಿಕೆಗೆ ಈ ಬೆಟ್ಟವನ್ನೇರಿದರೆ ಮಳೆಯಾಗುತ್ತದೆ ಎಂಬುವುದು ಈ ಭಾಗದ ಜನರ ಪ್ರತೀತಿ. ಮಾಲಂಬಿ ಮಳೆಮಲ್ಲೇಶ್ವರ ಬೆಟ್ಟಕ್ಕೆ ಸುಮಾರು 350 ವರ್ಷಗಳ ಇತಿಹಾಸ ಇದ್ದು ಬೆಟ್ಟ ಚಾರಣ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ.

ಶನಿವಾರಸಂತೆ ಪಾದಯಾತ್ರೆ ಸಮಿತಿಯಿಂದ ಸೋಮವಾರ ಬೆಳಗ್ಗೆ ಮಾಲಂಬಿ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಪಯಣ ಬೆಳೆಸಿತು. 3ನೇ ವರ್ಷದ ಪಾದಯಾತ್ರೆ ಕಾರ್ಯಕ್ರಮ ಇದಾಗಿದ್ದು ಸೋಮವಾರ ಬೆಳಗ್ಗೆ 8-30 ಕ್ಕೆ ಪಾದಯಾತ್ರೆ ಸಮಿತಿ ಪ್ರಮುಖ ಎ.ಡಿ. ಮೋಹನ್‌ಕುಮಾರ್‌ ನೇತೃತ್ವದಲ್ಲಿ ಸುತ್ತಮುತ್ತಲಿನ ಗ್ರಾಮಗಳಿಂದ ಬಂದ 50 ಕ್ಕಿಂತ ಹೆಚ್ಚಿನ ಪಾದಯಾತ್ರಿಗಳ ತಂಡ, ಪಟ್ಟಣದ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆಯನ್ನು ಸಲ್ಲಿಸಿದ ಬಳಿಕ ವಾದ್ಯಗೋಷ್ಠಿಯೊಂದಿಗೆ ಪಾದಯಾತ್ರೆ ಹೊರಟಿಸಿದರು. 

ಭಜನೆ ಮೂಲಕ ಪ್ರಾರ್ಥನೆ
ಪಾದಯಾತ್ರಿಗಳು ಗುಡುಗಳಲೆ ಜಂಕ್ಷನ್‌ ಮೂಲಕವಾಗಿ ಗೋಪಾಲಪುರ, ರಾಮನಹಳ್ಳಿ, ನಂದಿಗುಂದ ಮಾರ್ಗವಾಗಿ ಮಾಲಂಬಿ ಮಳೆಮಲ್ಲೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಚಾರಣ ಬೆಳೆಸಿದರು. ಮಧ್ಯಾಹ್ನ 1 ಗಂಟೆಗೆ ಬೆಟ್ಟದ ಮೇಲಿರುವ ದೇವಾಲಯವನ್ನು ತಲುಪಿದ ಪಾದಯಾತ್ರಿಗಳು ದೇವಾಲಯದ ಲ್ಲಿರುವ ಶ್ರೀ ಗಣಪತಿಗೆ ವಿಶೇಷ ಪೂಜಾ ಸೇವೆ ಯನ್ನು ಸಲ್ಲಿಸಿದರು. ಬಳಿಕ ಶನಿವಾರಸಂತೆ ಶ್ರೀ ರಾಮಾಂಜನೇಯ ಭಜನೆ ಮಂಡಳಿಯಿಂದ ಮಳೆ ಮಲ್ಲೇಶ್ವರನಿಗೆ ಭಜನೆ ಮೂಲಕ ಮಳೆಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.  

ಈ ಸಂದರ್ಭದಲ್ಲಿ ಶ್ರೀ ಮಳೆಮಲ್ಲೇಶ್ವರನಿಗೆ ರುದ್ರಾಭಿಷೇಕ, ಮಹಾಮಂಗಳಾರತಿ ಮುಂತಾದ ಪೂಜಾ ವಿಧಿವಿಧಾನವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಪಾದಯಾತ್ರಾ ಸಮಿತಿ ಮತ್ತು ದಾನಿಗಳಿಂದ ಪಾದಯಾತ್ರಿಗಳಿಗೆ ಮತ್ತು ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮತ್ತು ಅನ್ನದಾನವನ್ನು ಏರ್ಪಡಿಸಲಾಯಿತು. 

ಈ ಸಂದರ್ಭದಲ್ಲಿ ಮಹಿಳೆಯರು ಮತ್ತು ಮಕ್ಕಳು ಉತ್ಸಾಹದಿಂದ ಪಾದಯಾತ್ರೆ ಕಾರ್ಯ ಕ್ರಮದಲ್ಲಿ ಪಾಲ್ಗೊಂಡಿದ್ದರು. ಪಾದಯಾತ್ರಾ ಕಾರ್ಯಕ್ರಮದಲ್ಲಿ ಪ್ರಮುಖರಾದ ಸಿ.ವಿ. ಜಯಪ್ಪ, ಎ.ಕೆ. ರಾಜಶೇಖರ್‌, ಅಶೋಕ್‌ ಮುಂತಾದವರಿದ್ದರು. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.