ಸಾಮೂಹಿಕ ನಕಲು; ಬೀದರ್‌ ಪರೀಕ್ಷಾ ಕೇಂದ್ರ ರದ್ದು


Team Udayavani, May 26, 2022, 9:32 AM IST

1exam

ಕಲಬುರಗಿ: ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಎಂಪಿಸಿ ಮಾಡಿದ್ದು, ಬೀದರ್‌ನ ಸನ್‌ ಸಾಫ್ಟ್‌ ಪದವಿ ಕಾಲೇಜಿನಲ್ಲಿ ಸಾಮೂಹಿಕ ನಕಲು ನಡೆಸುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರವನ್ನು ರದ್ದು ಮಾಡಲಾಗಿದೆ.

ಬುಧವಾರ ಕಲಬುರಗಿ ಮತ್ತು ಬೀದರ್‌ ಜಿಲ್ಲೆಗಳ ಹಲವು ಕಾಲೇಜುಗಳಿಗೆ ಭೇಟಿ ನೀಡಿದ ಪರೀಕ್ಷಾ ವಿಭಾಗದ ಕುಲಸಚಿವೆ ಡಾ| ಮೇಧಾವಿನಿ ಕಟ್ಟಿ , ಬೀದರ್‌ನ ಚಂದ್ರಶೇಖರ ಪದವಿ ಮಹಾವಿದ್ಯಾಲಯದಲ್ಲಿ ಇಬ್ಬರು ವಿದ್ಯಾರ್ಥಿಗಳು ಪುಸ್ತಕ ಇಟ್ಟುಕೊಂಡು ನಕಲು ಮಾಡುತ್ತಿರುವುದನ್ನು ಗಮನಿಸಿ ತಕ್ಷಣವೇ ಅವರನ್ನು ಎಂ.ಪಿ.ಸಿ. ಮಾಡಿದರು. ಅಲ್ಲದೇ ಸರ್ಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯ, ಹುಮನಾಬಾದನಲ್ಲಿ ಬಿ.ಎಸ್ಸಿ ಐದನೇ ಸೆಮಿಸ್ಟರ್‌ ಭೌತಶಾಸ್ತ್ರ ವಿಷಯದ ಒಬ್ಬ ವಿದ್ಯಾರ್ಥಿ ನಕಲು ಮಾಡಿ ಸಿಕ್ಕು ಬಿದ್ದ ಪರಿಣಾಮ ಎಂಪಿಸಿ ಮಾಡಿದರು. ಇದಲ್ಲದೇ, ಕಲಬುರಗಿಯ ಎಸ್‌.ಬಿ. ವಾಣಿಜ್ಯ, ಎಸ್‌.ಬಿ. ವಿಜ್ಞಾನ ಪದವಿ ಮಹಾವಿದ್ಯಾಲಯ, ಶಾಂತಿನಿಕೇತನ ಪದವಿ ಮಹಾವಿದ್ಯಾಲಯ, ನೂತನ ವಿದ್ಯಾಲಯ, ನಾರ್ಥ ಕರ್ನಾಟಕ ಪದವಿ ಮಹಾವಿದ್ಯಾಲಯ, ಎಂಜೆಪಿ ಪದವಿ ಮಹಾವಿದ್ಯಾಲಯ ಮತ್ತು ಎಕೆಎಸ್‌ಜಿವಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದಾಗ ಈ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುತ್ತಿರುವುದನ್ನು ಗಮನಿಸಿ ಸಂತೋಷ ವ್ಯಕ್ತಪಡಿಸಿದರು.

ಪರೀಕ್ಷಾ ಕೇಂದ್ರ ರದ್ದು: ಬೀದರ್‌ ಸನ್‌ ಸಾಫ್ಟ್‌ ಪದವಿ ಮಹಾವಿದ್ಯಾಲಯ, ಚಂದ್ರಶೇಖರ ಪದವಿ ಮಹಾವಿದ್ಯಾಲಯ ಮನ್ನಾಖೇಳ್ಳಿ ಮತ್ತು ಬಿವಿಬಿ ಪರೀûಾ ಕೇಂದ್ರಗಳಿಗೆ ಭೇಟಿ ನೀಡಿದಾಗ ಸನ್‌ ಸಾಫ್ಟ್‌ ಪದವಿ ಮಹಾವಿದ್ಯಾಲಯದಲ್ಲಿ ಕಿರಿಯ ಮೇಲ್ವಿಚಾರಕರು ಮತ್ತು ಮಹಾವಿದ್ಯಾಲಯದ ಸಿಬ್ಬಂದಿ ಮತ್ತು ಏಳು ಜನ ವಿದ್ಯಾರ್ಥಿಗಳು ಸೇರಿಕೊಂಡು ಸಾಮೂಹಿಕ ನಕಲು ಮಾಡುತ್ತಿರುವುದನ್ನು ಪರೀಕ್ಷಾ ವಿಭಾಗದ ಕುಲಸಚಿವೆ ಡಾ| ಮೇಧಾವಿನಿ ಕಟ್ಟಿ ಕಂಡು ಸಿಡಿಮಿಡಿಗೊಂಡರು. ಅಲ್ಲದೆ, ಕೂಡಲೇ ಪರೀಕ್ಷಾ ಕೇಂದ್ರವನ್ನು ರದ್ದು ಮಾಡಲು ಆದೇಶ ಹೊರಡಿಸಿದರು. ರದ್ದಾದ ಪರೀಕ್ಷಾ ಕೇಂದ್ರದಲ್ಲಿ ನಡೆಬೇಕಾಗಿರುವ ಮುಂದಿನ ಪರೀಕ್ಷೆಗಳನ್ನು ಬಿವಿಬಿ ಪರೀಕ್ಷಾ ಕೇಂದ್ರಕ್ಕೆ ವರ್ಗಾಯಿಸಿದ್ದಾರೆ ಎಂದು ವಿವಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕಾಶ್ಮೀರಿ ನಟಿಯ ಮನೆಯ ಮೇಲೆ ದಾಳಿ ಮಾಡಿದ ಲಷ್ಕರ್ ಉಗ್ರರು; ನಟಿ ಸಾವು!

ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ನಕಲು ಮುಕ್ತವಾಗಿ ನಡೆಸಲು ಯೋಜಿಸಿದ್ದೇವೆ. ಅದರಂತೆ ಬುಧವಾರ ಹಲವು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದಾಗ ಸುಸೂತ್ರವಾಗಿ ನಡೆಯುತ್ತಿರುವುದು ಕಂಡು ಬಂದಿದೆ. ಬೀದರ್‌ನ ಮೂರು ಕಾಲೇಜುಗಳಲ್ಲಿ ನಕಲು ಮಾಡಿರುವುದು ಪತ್ತೆಯಾಗಿದೆ. ಕೇಂದ್ರ ರದ್ದು ಮಾಡಿ ವಿದ್ಯಾರ್ಥಿಗಳನ್ನು ಎಂಪಿಸಿ ಮಾಡಲಾಗಿದೆ. ಡಾ| ಮೇದಾವಿನಿ ಕಟ್ಟಿ, ಕುಲಸಚಿವರು, ಪರೀಕ್ಷಾ ವಿಭಾಗ, ಗುವಿವಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವ ಹೊಳೆಯಲ್ಲಿ ಪತ್ತೆMadikeri: ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವ ಹೊಳೆಯಲ್ಲಿ ಪತ್ತೆ

Madikeri: ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವ ಹೊಳೆಯಲ್ಲಿ ಪತ್ತೆ

Madikeri: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

Madikeri: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

1-wewe

Madikeri; ಕಟ್ಟೆಮಾಡು ದೇಗುಲ ವ್ಯಾಪ್ತಿಯಲ್ಲಿ ಮಾ.13ರ ವರೆಗೆ ನಿರ್ಬಂಧ

1-ml-2

ಗ್ರಾಮ ಆಡಳಿತ ಅಧಿಕಾರಿಗಳಿಂದ ಮತ್ತೆ ಮುಷ್ಕರ

1-kod

‘ಕೊಡವಾಮೆ ಬಾಳ್ಳೋ’ ಕೊಡವರ ಬೃಹತ್‌ ಪಾದಯಾತ್ರೆ ಸಮಾರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.