ಮಹಿಳಾ-ಮಕ್ಕಳ ಅಭಿವೃದ್ಧಿ ಸಮಿತಿ ಸಭೆ


Team Udayavani, Jul 23, 2017, 7:15 AM IST

Z-MAKKALA-SAMITHI-1.gif

ಮಡಿಕೇರಿ: ಮಕ್ಕಳ ಅಪೌಷ್ಟಿಕತೆ ನಿವಾರಿಸಲು ಸರಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದು, ಇವುಗಳನ್ನು ತಲುಪಿಸುವಂತೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎನ್‌.ಎ. ಹ್ಯಾರೀಸ್‌ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.  
 
ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಗುರುವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಿಲ್ಲೆಯಲ್ಲಿನ ಅಪೌಷ್ಟಿಕ ಮಕ್ಕಳು ಸೇರಿದಂತೆ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ತಲುಪಿಸಬೇಕು. ಅಪೌಷ್ಟಿಕ ಮಕ್ಕಳು ಸಾಮಾನ್ಯ ಮಕ್ಕಳಂತೆ ಆಗಲು ವಿಶೇಷ ಗಮನಹರಿಸಬೇಕು. ಭವಿಷ್ಯದ ಯುವ ಜನರನ್ನು ರಕ್ಷಿಸಬೇಕು ಎಂದು ಅವರು ಸೂಚನೆ ನೀಡಿದರು. 
 
ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಗಿರಿಜನ ಗರ್ಭಿಣಿ ಮತ್ತು ಬಾಣಂತಿಯರಿಗೆ ಸಹಾಯಧನ ಕಲ್ಪಿಸಲು ಸರಕಾರ 21 ಲಕ್ಷ ರೂ.ಬಿಡುಗಡೆ ಮಾಡಿದ್ದು, ಈ ಹಣ ಖರ್ಚು ಮಾಡದಿರುವುದಕ್ಕೆ ಸಮಿತಿ ಅಧ್ಯಕ್ಷರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.
 
ಸರಕಾರ ಹಣ ಬಿಡುಗಡೆ ಮಾಡಿರುವುದು ಏಕೆ ಎಂದು ಪ್ರಶ್ನಿಸಿದ ಸಮಿತಿ ಅಧ್ಯಕ್ಷರು, ಅರ್ಹರಿಂದ ಜಾತಿ ಪ್ರಮಾಣಪತ್ರ ಇಲ್ಲದಿದ್ದಲ್ಲಿ ಕಂದಾಯ ಇಲಾಖೆ ಗಮನಕ್ಕೆ ತಂದು ಜಾತಿ ಪ್ರಮಾಣಪತ್ರ ಪಡೆಯಲು ಅನುವು ಮಾಡಬೇಕು. ಅದನ್ನು ಬಿಟ್ಟು ಹಣ ಖರ್ಚು ಮಾಡದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.

ಜಾತಿ ಪ್ರಮಾಣ ಪತ್ರ ಒದಗಿಸಲು ಕಾಲಮಿತಿ ಯಿದ್ದು, ಅದರಂತೆ ಕಂದಾಯ ಇಲಾಖೆ ಅಧಿಕಾರಿಗಳು ಗಮನಹರಿಸುವಂತೆ ಸಮಿತಿ ಅಧ್ಯಕ್ಷರು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಸ್ತ್ರೀಶಕ್ತಿ ಗುಂಪುಗಳ ಸಂಖ್ಯೆ ಕಡಿಮೆ ಇದ್ದು, ಸ್ತ್ರೀಶಕ್ತಿ ಗುಂಪುಗಳನ್ನು ಹೆಚ್ಚಿಸಿ ಸರಕಾರದ ಸೌಲಭ್ಯಗಳನ್ನು  ಕಲ್ಪಿಸುವಂತಾಗಲು ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಆದರೆ ಸಿಬಂದಿಗಳ ಕೊರತೆ ಇದೆ ಎಂದು ಸಬೂಬು ಹೇಳುವುದು ಸರಿಯಲ್ಲ. ಸಿಬಂದಿಗಳ ಕೊರತೆ ನಡುವೆಯೂ ಉತ್ತಮವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದು ಅಧ್ಯಕ್ಷರು ಹೇಳಿದರು.

ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿಗಳು ಮತ್ತು ಉಪ ನಿರ್ದೇಶಕರು ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು. ಗುಣಮಟ್ಟದ ಆಹಾರ ಪೂರೈಕೆ ಮಾಡಬೇಕು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬುದನ್ನು ಮರೆಯಬಾರದು ಎಂದು ಅವರು ನಿರ್ದೇಶನ ನೀಡಿದರು. 

ಜಿಲ್ಲೆಯಲ್ಲಿ ಎಷ್ಟು ಅಂಗನವಾಡಿಗಳಿವೆ, ಅಂಗನ ವಾಡಿಗಳಲ್ಲಿ ಎಷ್ಟು ಮಕ್ಕಳಿದ್ದಾರೆ, ಮತ್ತಿತರ ಮಾಹಿತಿ ಪಡೆದ ಸಮಿತಿ ಅಧ್ಯಕ್ಷರು 19 ಸಾವಿರ ಅಂಗನವಾಡಿ ಮಕ್ಕಳ ಅಂಕಿ ಅಂಶ ಸಂಬಂಧ ನಿಖರ ಮಾಹಿತಿ ಒದಗಿಸುವಂತೆ ಸಮಿತಿ ಹ್ಯಾರೀಸ್‌ ಸೂಚನೆ ನೀಡಿದರು. 
  
ಜಿಲ್ಲೆಯಲ್ಲಿ ಎಷ್ಟು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಅಧ್ಯಕ್ಷರು ಮಾಹಿತಿ ಪಡೆದರು. 
 
ವಿಧಾನ ಪರಿಷತ್‌ ಸದಸ್ಯರಾದ ವೀಣಾ ಅಚ್ಚಯ್ಯ ಮಾತನಾಡಿ, ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರ್ಪಡೆ ಮಾಡುವಂತಾಗಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ ಹಾಗೂ ಕಾರ್ಮಿಕ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕು. ಕೂಲಿ ಕಾರ್ಮಿಕರ ಮಕ್ಕಳು ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈ ಬಗ್ಗೆ ಗಮನಹರಿಸಬೇಕಿದೆ ಎಂದರು.

ಜಿಲ್ಲೆಯ ಅಂಗನವಾಡಿಗಳಿಗೆ ಬಡ ಮಕ್ಕಳು ತೆರಳುತ್ತಿದ್ದಾರೆ. ಈ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ವೆಟರ್‌ ನೀಡಬೇಕು. ಚಳಿ, ಮಳೆ, ಗಾಳಿ ಹೆಚ್ಚಿರುವುದರಿಂದ ಅಂಗನವಾಡಿ ಮಕ್ಕಳಿಗೆ ಈ ಅವಕಾಶ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದರು. 
 
ಇದಕ್ಕೆ ಧ್ವನಿಗೂಡಿಸಿದ ಎನ್‌.ಎ.ಹ್ಯಾರೀಸ್‌ ಅವರು ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡದರು. ಸಮಿತಿ ಸದಸ್ಯರಾದ ಸುಧಾಕರ್‌ ಲಾಲ್‌ ಅವರು ಮಾತನಾಡಿ ದಿಡ್ಡಳ್ಳಿಯ ಗಿರಿಜನರಿಗೆ ಪುನರ್‌ ವಸತಿ ಒದಗಿಸಲಾಗಿರುವ ಬಸವನಹಳ್ಳಿ, ಬ್ಯಾಡಗೊಟ್ಟ ಪುನರ್‌ ವಸತಿ ಕೇಂದ್ರದಲ್ಲಿ ಅಂಗನವಾಡಿ ತೆರೆಯಲು ಮುಂದಾಗುವಂತೆ ಅವರು ಸಲಹೆ ನೀಡಿದರು. ಸಮಿತಿ ಸದಸ್ಯರಾದ ಅಪ್ಪಾಜಿಗೌಡ, ಜಯಮ್ಮ, ಲೆಹರ್‌ ಸಿಂಗ್‌, ಸರೋಜಾ, ಎಂ.ಎಂ. ಆಶಾ ಅವರು ಹಲವು ವಿಚಾರ ಪ್ರಸ್ತಾಪಿಸಿ, ಮಾಹಿತಿ ಪಡೆದರು.  
  
ಸಮಿತಿ ಉಪ ಕಾರ್ಯದರ್ಶಿ ಆಜಾದ್‌ ಅಹಮ್ಮದ್‌ಖಾನ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ದೀಪಾ ಮತ್ತಿತರರಿದ್ದರು. 

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.