Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!


Team Udayavani, May 28, 2024, 7:50 AM IST

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

ಮಡಿಕೇರಿ: ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಕೆಲವು ಪ್ರದೇಶಗಳಲ್ಲಿ ಪ್ರವಾಸಿಗರ ನಿರ್ಲಕ್ಷ್ಯದ ನಡೆ ಅಪಾಯವನ್ನು ಆಹ್ವಾನಿಸುತ್ತಿದೆ.

ನಗರದ ಜನರಲ್‌ ತಿಮ್ಮಯ್ಯ ವೃತ್ತದ ಮೂಲಕ ಮಂಗಳೂರು ರಸ್ತೆ ಕಡೆಗೆ ತೆರಳುವ ಮಾರ್ಗದಲ್ಲಿ ನಿರ್ಮಿಸಲಾಗಿರುವ ತಡೆಗೋಡೆ ಪ್ರದೇಶ ಇದೀಗ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ರಾಜಾಸೀಟು ಉದ್ಯಾನವನದ ಬೆಟ್ಟದ ಕೆಳಗಿರುವ ಈ ತಡೆಗೋಡೆಯ ಅಪಾಯಕಾರಿ ಪ್ರದೇಶ ಸಾವಿರ ಅಡಿಗೂ ಹೆಚ್ಚು ಪ್ರಪಾತವನ್ನೂ ಹೊಂದಿದೆ.

ಇದರ ಅರಿವಿಲ್ಲದ ಪ್ರವಾಸಿಗರು ಇಲ್ಲಿ ನಿಂತು ತಮ್ಮ ಮೊಬೈಲ್‌ ಕೆಮರಾಗಳ ಮೂಲಕ ಪರಿಸರದ ಸೊಬಗನ್ನು ಸೆರೆ ಹಿಡಿಯುತ್ತಿದ್ದಾರೆ. ಜತೆಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.

ಪ್ರವಾಸಿಗರ ಈ ನಡೆ ಅತ್ಯಂತ ಅಜಾಗರೂಕತೆಯಿಂದ ಕೂಡಿದೆ.ಕೆಲವರು ತಡೆಗೋಡೆ ತುತ್ತ ತುದಿಯಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸಿದರೆ ಮತ್ತೆ ಕೆಲವರು, ರೀಲ್ಸ್‌ ಮಾಡೋ ನೆಪದಲ್ಲಿ ಹುಚ್ಚು ಧೈರ್ಯ ತೋರುತ್ತಿದ್ದಾರೆ. ಯುವಕ, ಯುವತಿಯರು ಮಾತ್ರವಲ್ಲದೆ ದಂಪತಿಗಳು ಕೂಡ ಚಿಕ್ಕ ಮಕ್ಕಳೊಂದಿಗೆ ಫೋಟೋಗಳಿಗೆ ಪೋಸು ನೀಡುತ್ತಾ ಅಪಾಯವನ್ನು ಆಹ್ವಾನಿಸಿಕೊಳ್ಳುತ್ತಿದ್ದಾರೆ.

ತಡೆಗೋಡೆಯ ಸ್ಥಳದಿಂದ ನಿಂತು ನೋಡಿದರೆ ಕಣ್ಣು ಹಾಯಿಸಿದಷ್ಟು ದೂರದವರೆಗೆ ಹಚ್ಚ ಹಸಿರ ಪರಿಸರ, ಭತ್ತದ ಗದ್ದೆ ಬಯಲುಗಳ ಸಹಿತ ಮಂಜು ಮುಸುಕಿದ ವಾತಾವರಣ ಸ್ವರ್ಗದಂತೆ ಗೋಚರಿಸುತ್ತದೆ. ಈ ದೃಶ್ಯ ನೋಡಲು ಎಷ್ಟು ಸುಂದರವಾಗಿದೆಯೋ ಅದಕ್ಕಿಂತ ದುಪ್ಪಟ್ಟು ಅಪಾಯವೂ ಇಲ್ಲಿದೆ. ಈ ಪ್ರದೇಶ ಕಣಿವೆ ಮಾದರಿಯಲ್ಲಿದ್ದು, ಬಲವಾದ ಗಾಳಿಯೂ ಬೀಸುತ್ತದೆ. ತಡೆಗೋಡೆಯ ಮೇಲೆ ಯಾವುದೇ ರೀತಿಯ ಸುರಕ್ಷಾ ಬೇಲಿಗಳಿಲ್ಲದ ಕಾರಣ ಸ್ವಲ್ಪ ಎಡವಿದರೂ ಬದುಕುಳಿಯುವ ಸಾಧ್ಯತೆ ಇಲ್ಲಿಲ್ಲ.

2018ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕುಸಿಯುವ ಅಪಾಯದಲ್ಲಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೋಟ್ಯಂತರ ರೂ.ಗಳಲ್ಲಿ ಸದೃಢವಾದ ತಡೆಗೋಡೆ ನಿರ್ಮಿಸಿದೆ. ಕಾಮಗಾರಿ ಪೂರ್ಣಗೊಂಡ ಅನಂತರ‌ ಅತ್ತ ಕಡೆ ಯಾರೂ ತೆರಳದಂತೆ ಬಿದಿರಿನ ಬೇಲಿ ಹಾಕಲಾಗಿತ್ತು. ಗಾಳಿ, ಮಳೆಗೆ ಬೇಲಿ ಇನ್ನಿಲ್ಲವಾಗಿದ್ದು, ಪ್ರವಾಸಿಗರಿಗೆ ಈ ಪ್ರದೇಶ ಮುಕ್ತವಾಗಿದೆ. ಇಲ್ಲಿ ಮದ್ಯದ ಬಾಟಲಿಗಳು ಬಿದ್ದಿದ್ದು, ಪ್ರವಾಸಿಗರ ವರ್ತನೆ ಮಿತಿ ಮೀರುತ್ತಿರುವುದಕ್ಕೆ ಸಾಕ್ಷಿ ಹೇಳುತ್ತಿವೆ.

ಪೊಲೀಸರಿಂದ ಕ್ರಮ
ಪ್ರವಾಸಿಗರು ಅಪಾಯದೊಂದಿಗೆ ಚೆಲ್ಲಾಟವಾಡುತ್ತಿದ್ದ ದೃಶ್ಯವನ್ನು ಕಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಅಲ್ಲಿದ್ದವರಿಗೆ ಬುದ್ಧಿ  ಹೇಳಿ ಕಳುಹಿಸಿದ್ದಾರೆ. ಕೆಲವರು ಹೆದ್ದಾರಿ ಬದಿಯಲ್ಲೇ ವಾಹನಗಳನ್ನು ನಿಲ್ಲಿಸಿಕೊಂಡು ಇತರ ವಾಹನ ಸಂಚಾರಕ್ಕೆ ಅಡ್ಡಿ ಮಾಡುತ್ತಿದ್ದ ಕಾರಣ ಎಲ್ಲ ವಾಹನಗಳನ್ನು ಸ್ಥಳದಿಂದ ತೆರವು ಮಾಡಿದ್ದಾರೆ. ಬಳಿಕ ಅಪಾಯಕಾರಿ ಪ್ರದೇಶಕ್ಕೆ ಯಾರೂ ಸುಳಿಯದಂತೆ ಎಚ್ಚರಿಕೆಯ ಟೇಪ್‌ ಅನ್ನು ಅಳವಡಿಸಲಾಯಿತು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

0023

Kasargod: ಅಪಹರಿಸಿ ಹಲ್ಲೆ ಪ್ರಕರಣ: ಬಂಧನ

Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌

Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌

man-a

Kumble: ಕಾರು ಅಪಘಾತ; ಗಾಯಾಳು ಮಹಿಳೆ ಸಾವು

12

Madikeri: 2022ರಲ್ಲಿ ನಡೆದ ಮಹಿಳೆಯ ಹತ್ಯೆ: ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.