ಸ್ವಾತಂತ್ರ್ಯ ದಿನಾಚರಣೆ ಯಶಸ್ವಿಗೆ ಸಹಕರಿಸಲು ಜಿಲ್ಲಾಧಿಕಾರಿ ಕರೆ
ಜಿಲ್ಲಾಡಳಿತದಿಂದ ಪೂರ್ವಭಾವಿ ಸಭೆ
Team Udayavani, Aug 4, 2019, 5:15 AM IST
ಮಡಿಕೇರಿ: ಜಿಲ್ಲಾಡಳಿತ ವತಿಯಿಂದ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳು ಕೈಜೋಡಿಸಿ ಸ್ವಾತಂತ್ರ್ಯ ದಿನಾಚರಣೆ ಯಶಸ್ವಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಕೋರಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು. ಹಾಗೆಯೇ ಸರ್ಕಾರದ ಶಿಷ್ಟಾಚಾರದಂತೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶ ನೀಡಿದರು.
ವಾಟರ್ಫ್ರೂಫ್ ವೇದಿಕೆ ನಿರ್ಮಾಣ ಮಾಡುವಂತೆ ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಎಂಜಿನಿಯರ್ಗಳಿಗೆ ಸೂಚನೆ ನೀಡಿದರು.
ರಿಹರ್ಸ್ಲ್ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಲಘು ಉಪಹಾರ, ಕುಡಿಯುವ ನೀರು ವ್ಯವಸ್ಥೆ ಮಾಡುವಂತೆ ನಗರಸಭೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅವರು ಹೇಳಿದರು.
ಕಾರ್ಯಕ್ರಮಕ್ಕೆ ಆಗಮಿಸುವ ಶಾಲಾ ಮಕ್ಕಳಿಗೆ ಉಪಹಾರ ವ್ಯವಸ್ಥೆ ಮಾಡುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು. ಕಾವೇರಿ ಕಲಾಕ್ಷೇತ್ರದಲ್ಲಿ ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಧಿಕಾರಿಗಳು ಮತ್ತು ಸಿಬಂದಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರ್ಗಳು, ಅಧಿಕಾರಿಗಳು, ಶಾಲಾ ಕಾಲೇಜು ಮುಖ್ಯಸ್ಥರು, ಪ್ರಾಂಶುಪಾಲರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಲಹೆ ನೀಡಿದರು.
ಅಚ್ಚುಕಟ್ಟಾಗಿ ನಿರ್ವಹಿಸಿ
ಸ್ವಾತಂತ್ರ್ಯ ದಿನಾಚರಣೆ ಆಚರಣೆ ಸಂಬಂಧ ರಚಿಸಲಾಗಿರುವ ಸಮಿತಿಯ ಮುಖ್ಯಸ್ಥರು ತಮ್ಮ ಹಂತದಲ್ಲಿ ಸಭೆ ನಡೆಸಿ ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಸ್ವಾತಂತ್ರ್ಯ ದಿನಾಚರಣೆ ಇಡೀ ದೇಶದ ಎಲ್ಲರ ಸಂಭ್ರಮ ಆಚರಣೆಯಾಗಿದ್ದು, ಸ್ವಯಂ ಪ್ರೇರಣೆಯಿಂದ ಎಲ್ಲರೂ ಭಾಗವಹಿ ಸಬೇಕು. ಆಗಸ್ಟ್, 15 ರಂದು ಬೆಳಗ್ಗೆ ಕೋಟೆ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು, ಹಾಜರಾತಿಯಲ್ಲಿ ತಪ್ಪದೆ ಸಹಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!
Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ
World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ
Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.