ಜನಸಾಮಾನ್ಯರ ಪಡಿತರ ವ್ಯವಸ್ಥೆ ನ್ಯೂನತೆ ಸರಿಪಡಿಸಲು ಆಗ್ರಹ


Team Udayavani, Jan 31, 2020, 2:09 AM IST

paditara

ಮಡಿಕೇರಿ: ಪಡಿತರ ವ್ಯವಸ್ಥೆಯಲ್ಲಿ ಕಂಡು ಬಂದಿರುವ ನ್ಯೂನತೆಗಳನ್ನು ಸರಿಪಡಿಸಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್ವಾದಿ) ನಗರದಲ್ಲಿ ಪತ್ರಿಭಟನೆ ನಡೆಸಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಆಹಾರ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಜನಸಾಮಾನ್ಯರಿಗೆ ವಂಚನೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಇ.ರಾ.ದುರ್ಗಾಪ್ರಸಾದ್‌, ನಕಲಿ ರೇಷನ್‌ ಕಾರ್ಡ್‌ಗಳ ಸೃಷ್ಟಿಗೆ ಸರ್ಕಾರ ಮತ್ತು ಮೇಲಧಿಕಾರಿಗಳ ನಿರ್ಲಕ್ಷ್ಯ ಧೋರಣೆಯೇ ಕಾರಣವೆಂದು ಆರೋಪಿಸಿದರು.

ನಕಲಿ ಕಾರ್ಡ್‌ಗಳನ್ನು ಪತ್ತೆ ಹಚ್ಚುವ ನೆಪದಲ್ಲಿ ಬಡವರು, ಕೂಲಿ ಕಾರ್ಮಿಕರು ಹಾಗೂ ಶೋಷಿತ ವರ್ಗಕ್ಕೆ ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ. ಈ ಪ್ರಯತ್ನದ ಹಿಂದೆ ಪಡಿತರ ವ್ಯವಸ್ಥೆಯನ್ನೇ ಸ್ಥಗಿತಗೊಳಿಸುವ ಹುನ್ನಾರ ಅಡಗಿದೆ ಎನ್ನುವ ಸಂಶಯ ಮೂಡುತ್ತಿದೆ ಎಂದು ಆರೋಪಿಸಿದರು.

ಎಪಿಎಲ್‌ ಮತ್ತು ಬಿಪಿಎಲ್‌ ಫ‌ಲಾನುಭವಿಗಳನ್ನು ಆಯ್ಕೆ ಮಾಡುವ ಕ್ರಮವೇ ಅವೈಜ್ಞಾನಿಕವಾಗಿದೆ ಎಂದು ಅಭಿಪ್ರಾಯಪಟ್ಟ ದುರ್ಗಾಪ್ರಸಾದ್‌, ಸಾಕಷ್ಟು ಅರ್ಹರನ್ನು ಪಡಿತರ ವ್ಯವಸ್ಥೆಯಿಂದ ದೂರವಿಟ್ಟು ವಂಚಿಸಲಾಗಿದೆ, ಇದು ಕೂಡ ವಂಚನೆಯ ಒಂದು ರೂಪವಾಗಿದೆ ಎಂದು ಟೀಕಿಸಿದರು.

ಪಾರದರ್ಶಕತೆಯನ್ನು ಸೃಷ್ಟಿಸುವ ಹೆಸರಿನಲ್ಲಿ ಸರಕಾರ ದಿನಕ್ಕೊಂದು ನಿಯಮ ರೂಪಿಸುತ್ತಿದ್ದು, ಈಗ ಹೆಬ್ಬೆರಳಿನ ಮುದ್ರೆ ಕೊಡಬೇಕಾದ ವ್ಯವಸ್ಥೆ ಇದೆ. ಈ ವ್ಯವಸ್ಥೆಯಿಂದ ಜನಸಾಮಾನ್ಯರಿಗೆ ಸಮಸ್ಯೆಗಳೇ ಹೆಚ್ಚಿದ್ದು, ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು, ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೇ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಸರಕಾರ ಈ ನಿಯಮದ ಅನುಷ್ಠಾನವನ್ನು ಸರಳೀಕರಿಸಿ ಜನಸಾಮಾನ್ಯರಿಗೆ ಸಹಾಯವಾಗುವಂತೆ ವ್ಯವಸ್ಥೆಯನ್ನು ರೂಪಿಸಬೇಕು ಎಂದು ದುರ್ಗಾಪ್ರಸಾದ್‌ ಒತ್ತಾಯಿಸಿದರು.

ವ್ಯವಸ್ಥೆ ಸರಳಗೊಳಿಸಿ
ಪಡಿತರ ವ್ಯವಸ್ಥೆಯನ್ನು ಸರಳೀಕರಿಸಬೇಕು, ತಿಂಗಳ ಮೊದಲ ಹತ್ತು ದಿನ ಮಾತ್ರ ಇರುವ ಕಾರ್ಯಕ್ರಮವನ್ನು ಇಡೀ ತಿಂಗಳಿಗೆ ವಿಸ್ತರಿಸಬೇಕು, ಎಪಿಎಲ್‌, ಬಿಪಿಎಲ್‌ ಮಾನದಂಡವನ್ನು ರದ್ದುಗೊಳಿಸಿ ಎಲ್ಲರಿಗೂ ಅನ್ವಯವಾಗುವ ಸಾರ್ವತ್ರಿಕ ಪಡಿತರ ವ್ಯವಸ್ಥೆಯನ್ನು ಜಾರಿಗೆ ತರಬೇಕು, ಸರಕಾರದ ನಿಯಮದಂತೆ ಅಂಗಡಿಗಳನ್ನು ತೆರೆದಿಡುವಂತಗಬೇಕು, ಸರಕಾರದಿಂದ ನೀಡುವ ಎಲ್ಲಾ ಸರಕುಗಳು ಎಲ್ಲಾ ಪಡಿತರ ಅಂಗಡಿಗಳಲ್ಲಿ ಏಕರೂಪದಲ್ಲಿ ಸಿಗುವಂತಾಗಬೇಕು, ಕೊಡಗು ಜಿಲ್ಲೆಗೆ ಅನ್ವಯವಾಗುವಂತೆ ಪಡಿತರ ಪ್ರಮಾಣವನ್ನು ಹೆಚ್ಚಿಸಬೇಕು, ನಿತ್ಯೋಪಯೋಗಿ ವಸ್ತುಗಳಾದ ಸಕ್ಕರೆ, ಬೇಳೆ, ಸೀಮೆ ಎಣ್ಣೆ, ತಾಳೆ ಎಣ್ಣೆ, ಸೋಪು ಪಡಿತರ ವ್ಯವಸ್ಥೆಯಲ್ಲಿ ನೀಡಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.