ಘಟಬಂಧನ್‌ ಸಾರ್ಥಕ್ಕಾಗಿ ಸಿದ್ದು ಬಲಿಪಶು ಮಾಡುವ ಯತ್ನ; ಗೋಪಾಲ್‌

ಈ ನಾಯಕರು ಜಿಲ್ಲೆಯಲ್ಲಿ ಪಕ್ಷ ಕಟ್ಟಿ ಬೆಳೆಸಲಿಕ್ಕೆ ಶ್ರಮ ಪಟ್ಟಿದ್ದಂತೂ ಇಲ್ಲ

Team Udayavani, Oct 19, 2022, 4:50 PM IST

ಘಟಬಂಧನ್‌ ಸಾರ್ಥಕ್ಕಾಗಿ ಸಿದ್ದು ಬಲಿಪಶು ಮಾಡುವ ಯತ್ನ; ಗೋಪಾಲ್‌

ಕೋಲಾರ: ಕೆಲವು ನಾಯಕರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ಸಿಗೆ ವಲಸಿಗರಾಗಿ ಬಂದ ಕೆಲವು ಮುಖಂಡರು ರಚಿಸಿಕೊಂಡಿರುವ ಮಹಾ ಘಟಬಂಧನ್‌ ಎಂಬ ಡ್ರಾಮ ಕಂಪನಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕೋಲಾರಕ್ಕೆ ತಂದು ಬಲಿಪಶುವಾಗಿಸುವ ಪ್ರಯತ್ನ ನಡೆಸಿದೆ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಶೇಷಾಪುರ ಗೋಪಾಲ್‌ ಲೇವಡಿ ಮಾಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಪಕ್ಷಾಂತರ ಮತ್ತು ಅವಕಾಶವಾದವನ್ನು ಅಸ್ತ್ರವಾಗಿಸಿಕೊಂಡು ವಲಸಿಗರಾಗಿ ಕಾಂಗ್ರೆಸ್ಸಿಗೆ ಬಂದು ಕಾರ್ಯ ಸಾಧನೆ ನಂತರ ಎಲ್ಲಾ ಸಿದ್ಧಾಂತಗಳನ್ನು ಉಲ್ಲಂಘಿಸಿ ತಮ್ಮ ಪ್ರತಿಷ್ಠೆಯಿಂದ ಹುಟ್ಟು ಹಾಕಿದ ಘಟಬಂಧನ್‌ ಡ್ರಾಮಾ ಕಂಪನಿಯ ರಾಜಕಾರಣ ಇಂದಿನ ಕಾಂಗ್ರೆಸ್‌ ದುಸ್ಥಿತಿಗೆ ಕಾರಣವಾಗಿದೆ ಎಂದು ಶಾಸಕ ರಮೇಶ್‌ಕುಮಾರ್‌ ಹಾಗೂ ಕೆ. ಶ್ರೀನಿವಾಸಗೌಡರ ವಿರುದ್ಧ ವಾಗ್ಧಾಳಿ ನಡೆಸಿದರು. ಅವಿಭಜಿತ ಕೋಲಾರ ಮತ್ತು ಅವಳಿ ಜಿಲ್ಲೆಗಳು ಕಾಂಗ್ರೆಸ್ಸಿನ ಭದ್ರಕೋಟೆಗಳು.

ತುರ್ತುಪರಿಸ್ಥಿತಿಯ ನಂತರದ ದಿನಗಳಲ್ಲಿ ಕೆಲವೊಂದು ಏಳು ಬೀಳುಗಳ ನಡುವೆಯೂ ಈ ಜಿಲ್ಲೆಯ ಮತದಾರರು ಎಂದು ಕಾಂಗ್ರೆಸ್ಸಿನ ಕೈಬಿಟ್ಟಿಲ್ಲ. ಕಾರಣ ಈ ಭಾಗದಲ್ಲಿ ರಾಜಕಾರಣದ ಬುನಾದಿಯನ್ನು ಹಾಕಿಕೊಟ್ಟ ನಾಯಕರು ಕೆ.ಸಿ.ರೆಡ್ಡಿ ಅವರಿಂದ ಹಿಡಿದು ಪಟ್ಟಾಭಿರಾಮನ್‌, ಟಿ ಚೆನ್ನಯ್ಯನವರು, ಎಂ ವಿ ಕೃಷ್ಣಪ್ಪನವರು, ಕೃಷ್ಣರಾಯರು, ಚೌಡರೆಡ್ಡಿ ಅವರು, ವಿ.ಮುನಿಯಪ್ಪ ಹಾದಿಯಾಗಿ ಕೆ.ಎಚ್‌ ಮುನಿಯಪ್ಪನವರವರೆಗೂ ಈ ಎಲ್ಲಾ ನಾಯಕರು ಹಾಕಿಕೊಂಡ ಸಮಾಜಮುಖೀ ಕಾರ್ಯ ಕ್ರಮಗಳ ಮೂಲಕ ಕಾಂಗ್ರೆಸ್‌ ಭದ್ರಕೋಟೆಯಾಗಿದೆ.

ಆದರೆ ಇದೇ ಸಮಯದಲ್ಲಿ ಕೆಲವು ನಾಯಕರು ತಮ್ಮ ರಾಜಕೀಯ ಉಳಿವಿಗಾಗಿ ಪಕ್ಷಾಂತರ ಮತ್ತು ಅವಕಾಶವಾದವನ್ನು ಅಸ್ತ್ರವಾಗಿಟ್ಟುಕೊಂಡು ವಲಸಿಗರಾಗಿ ಕಾಂಗ್ರೆಸ್ಸಿಗೆ ಬಂದು ಕಾರ್ಯ ಸಾಧನೆ ಮಾಡಿಕೊಂಡರು. ಬಳಿಕ ಎಲ್ಲಾ ಸಿದ್ಧಾಂತಗಳನ್ನು ಗಾಳಿಗೆ ತೂರಿ ತಮ್ಮ ಪ್ರತಿಷ್ಠೆಯಿಂದ ಹುಟ್ಟು ಹಾಕಿದ ಘಟಬಂಧನ್‌ ಡ್ರಾಮ ಕಂಪನಿ ಸೃಷ್ಟಿಸಿದರು. ಜಿಲ್ಲೆಯ ಕಾಂಗ್ರೆಸ್‌ ದುಸ್ಥಿತಿಗೆ ಕಾರಣವಾಗಿದೆ.ಈ ನಾಯಕರು ಜಿಲ್ಲೆಯಲ್ಲಿ ಪಕ್ಷ ಕಟ್ಟಿ ಬೆಳೆಸಲಿಕ್ಕೆ ಶ್ರಮ ಪಟ್ಟಿದ್ದಂತೂ ಇಲ್ಲ. ಅದರ ಬದಲಾಗಿ ಈ ಪಕ್ಷವೇ ನಮ್ಮಿಂದ ಎಂದು ರಾಜಕೀಯ ಮಾಡುತ್ತಿದ್ದಾರೆ.

ಮತದಾರರ ತ್ಯಾಗಕ್ಕೆ ಬೆಲೆಯೇ ಇಲ್ಲವೇ?
ಸಿದ್ದರಾಮಯ್ಯ ಅವರನ್ನು ಜಿಲ್ಲೆಯ ಅಭಿವೃದ್ಧಿಗಾಗಿ ತರುತ್ತಿದ್ದೇವೆ ಎಂದ ಮೇಲೆ 40 ವರ್ಷದಿಂದ ಜಿಲ್ಲೆಯಲ್ಲಿ ನಿಮ್ಮಗಳ ರಾಜಕೀಯ ಜೀವನದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳೇನು? ಶ್ರೀನಿವಾಸ್‌ ಗೌಡ್ರು ಹಾಗೂ ರಮೇಶ್‌ ಕುಮಾರ್‌ ಅವರು ದಿಗ್ಗಜ ನಾಯಕರು. ಇವರನ್ನ ಬೆಳೆಸಲಿಕ್ಕೆ ಕ್ಷೇತ್ರದ ಮತದಾರರು ಪಟ್ಟಕಷ್ಟ ಹಾಗೂ ಮಾಡಿದ ತ್ಯಾಗಗಳು ವ್ಯರ್ಥವಾದವೇ? ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಶೇಷಾಪುರ ಗೋಪಾಲ್‌ ಅಸಮಾಧಾನ ವ್ಯಕ್ತಪಡಿಸಿದರು. ಇನ್ನು ಸಿದ್ದರಾಮಯ್ಯನವರು ನಿಮ್ಮನ್ನು ನಂಬಿ ಈ ಕ್ಷೇತ್ರಕ್ಕೆ ಏಕೆ ಬರಬೇಕು? ಇವತ್ತಿನವರೆಗೂ ನಿಮ್ಮ ಸಾರ್ವಜನಿಕ ಹಾಗೂ ರಾಜಕೀಯ ಜೀವನದಲ್ಲಿ ನೀವು ವಿಶ್ವಾಸಕ್ಕೆ ಅರ್ಹರು ಅಂತ ಸಾಬೀತುಪಡಿಸುವ ಯಾವುದಾದರೂ ಒಂದು ಘಟನೆಯನ್ನು ಸಾರ್ವಜನಿಕವಾಗಿ ಹೇಳಬಲ್ಲಿರಾ ಎಂದು ಪ್ರಶ್ನಿಸಿದ್ದು, ಪ್ರಶ್ನೆಗಳಿಗೆ ಉತ್ತರ ನೀಡಬೇಕೆಂದು ಮುಖಂಡರನ್ನು ಆಗ್ರಹಿಸಿದರು.

ಟಾಪ್ ನ್ಯೂಸ್

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

02002

World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

000

World Tourism Day:ಚಾರಣ- ಇದು ಮಲೆಕುಡಿಯರ ಊರಿನ ನಡುವಿನ ನಿಗೂಢ ಜಲಪಾತ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

02002

World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.