ಅನ್ನಭಾಗ್ಯ ತೊಗರಿಬೇಳೆ ಕಳಪೆ, ವಾಪಸ್‌ ಕಳುಹಿಸಿ


Team Udayavani, May 19, 2019, 3:24 PM IST

kolar-tdy-03..

ಕಳಪೆ ತೊಗರಿಬೇಳೆ ವಿತರಿಸಿದ ಟೆಂಡರ್‌ದಾರರು, ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ರೈತ ಸಂಘ ಆಹಾರ ಸರಬರಾಜು ಇಲಾಖೆ ವ್ಯವಸ್ಥಾಪಕ ಶಿವಣ್ಣಗೆ ಆಗ್ರಹಿಸಿತು.

ಕೋಲಾರ: ಅನ್ನಭಾಗ್ಯ ಯೋಜನೆಯಡಿ ವಿತರಿಸುವ ತೊಗರಿಬೇಳೆ ಸಂಪೂರ್ಣ ಕಳಪೆಯಾಗಿದ್ದು, ಟೆಂಡರ್‌ದಾರರು, ಅವರಿಗೆ ಕುಮ್ಮಕ್ಕು ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಆಹಾರ ಸರಬರಾಜು ಇಲಾಖೆ ವ್ಯವಸ್ಥಾಪಕ ಶಿವಣ್ಣಗೆ ರೈತ ಸಂಘದಿಂದ ಮನವಿ ನೀಡಲಾಯಿತು.

ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಅಪೌಷ್ಟಿಕತೆಯಿಂದ ಯಾವ ವ್ಯಕ್ತಿಯೂ ನರಳಬಾರದೆಂದು ಸಾವಿರಾರು ಕೋಟಿ ಖರ್ಚು ಮಾಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಆದರೆ, ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಟೆಂಡರ್‌ದಾರರ ಹಣದಾಹಕ್ಕೆ ಬಡವರ ಆಹಾರ ಕಳಪೆ ಹಾಗೂ ಕಾಳಸಂತೆಯಲ್ಲಿ ಮಾರಾಟ ಮಾಡುವ ದೊಡ್ಡ ದಂಧೆಕೋರರು ಜಿಲ್ಲೆಯಲ್ಲಿದ್ದಾರೆ ಎಂದು ಆರೋಪಿಸಿದರು.

ವಾಪಸ್‌ ಕಳುಹಿಸಿ: ಎರಡು ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ತೊಗರಿಬೇಳೆ ವಿತರಿಸುತ್ತಿಲ್ಲ. ಖಾಸಗಿ ಟೆಂಡರ್‌ದಾರರ ಎನ್‌ಸಿಡಿಎಕ್ಸ್‌ ಕಂಪನಿಯಿಂದ ಉಪ ಗುತ್ತಿಗೆ ಪಡೆದು, ಅತಿ ಕಳಪೆ ತೊಗರಿಬೇಳೆ ಪೂರೈಕೆ ಮಾಡಿದ್ದರಿಂದ ಅದನ್ನು ಕೋಲಾರ ತಾಲೂಕಿನಿಂದ ವಾಪಸ್‌ ಕಳುಹಿಸಿದ್ದೀರಿ. ಆದರೆ, ಈಗಾಗಲೇ ಮಾಲೂರು, ಬಂಗಾರಪೇಟೆ, ಶ್ರೀನಿವಾಸಪುರ, ಮುಳಬಾಗಿಲು ತಾಲೂಕುಗಳಿಗೆ ಪೂರೈಕೆ ಮಾಡಿರುವ ತೊಗರಿಯನ್ನೂ ಕೂಡಲೇ ವಾಪಸ್‌ ಕಳುಹಿಸಬೇಕು ಎಂದು ಒತ್ತಾಯಿಸಿದರು.

ತೊಗರಿಬೇಳೆಯ ಗುಣಮಟ್ಟವನ್ನು ಪರಿಶೀಲನೆ ಮಾಡಲು ನೇಮಿಸಿರುವ ಅಧಿಕಾರಿಯು ಸಹ ಟೆಂಡರ್‌ದಾರರ ಜೊತೆ ಶಾಮೀಲಾಗಿ ಈ ರೀತಿ ಕಳಪೆ ಆಹಾರವನ್ನು ಗ್ರಾಹಕರಿಗೆ ನೀಡಿ, ವಂಚನೆ ಮಾಡುತ್ತಿರುವುದು ಬಹಿರಂಗವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುಣಮಟ್ಟದ ಬೇಳೆ ವಿತರಿಸಿ: ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್‌ ಮಾತನಾಡಿ, ಈಗಾಗಲೇ ಪೂರೈಕೆಯಾಗಿರುವ ಕಳಪೆ ತೊಗರಿ ವಾಪಸ್‌ ಕಳುಹಿಸಿ, ಗುಣಮಟ್ಟದ್ದನ್ನು ಎರಡು ದಿನದ ಒಳಗೆ ನೀಡದೇ ಹೋದರೆ, ತಮ್ಮ ಇಲಾಖೆ ಮುಂದೆ ಸಾವಿರಾರು ಗ್ರಾಹಕರ ಜೊತೆ ತೊಗರಿ ಸುರಿದು ನ್ಯಾಯ ಪಡೆದುಕೊಳ್ಳಬೇಕಾಗುತ್ತದೆಂದು ಎಚ್ಚರಿಕೆ ನೀಡಿದರು.

ಸೂಕ್ತ ಕ್ರಮದ ಭರವಸೆ: ಮನವಿ ಸ್ವೀಕರಿಸಿದ ವ್ಯವಸ್ಥಾಪಕ ಶಿವಣ್ಣ ಮಾತನಾಡಿ, ಅನ್ನಭಾಗ್ಯ ಯೋಜನೆಯಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ಪೂರೈಸುತ್ತಿರುವ ತೊಗರಿಬೇಳೆ ಗುಣಮಟ್ಟ ಕಡಿಮೆ ಇದ್ದು, ಅದನ್ನು ವಾಪಸ್‌ ಕಳುಹಿಸುವ ಜೊತೆ 3 ತಿಂಗಳಿಂದ ಸಮರ್ಪಕ ಬೇಳೆಯನ್ನು ಟೆಂಡರ್‌ದಾರರು ಪೂರೈಸುತ್ತಿಲ್ಲ. ಇದರಿಂದ ನ್ಯಾಯಬೆಲೆ ಅಂಗಡಿ ಮಾಲಿಕರಿಗೆ ತೊಂದರೆಯಾಗಿದೆ. ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತಂದು ಗುಣಮಟ್ಟದ ಬೇಳೆ ತರಿಸಿಕೊಡುವ ಭರವಸೆ ನೀಡಿದರು.

ಮನವಿ ನೀಡುವಾಗ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್‌, ಮಂಗಸಂದ್ರ ವೆಂಕಟೇಶ್‌, ತಿಪ್ಪಣ್ಣ, ಅಶೋಕ್‌, ಅಶ್ವತ್ಥಪ್ಪ, ಮಂಗಸಂದ್ರ ನಾಗೇಶ್‌ ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.