![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 30, 2022, 6:38 PM IST
ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ಹೊಂದಿದ್ದು, ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ನಾಯಕರ ಸೂಚನೆಮೇರೆಗೆ ಕೋಲಾರ ಕ್ಷೇತ್ರದಲ್ಲಿ ಜನಸೇವೆ ಮಾಡುತ್ತಿದ್ದೇನೆ. ಆದರೆ ಕಾಂಗ್ರೆಸ್ನ ನಾಯಕರು ಮಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗುವುದಿಲ್ಲ ಎಂದು ಹೇಳಿದ ಕಾರಣ ನಾನು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಸಮಾಜ ಸೇವಕ ಅರಿಕೆರೆ ಮಂಜುನಾಥ್ ಗೌಡ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿಮಾತನಾಡಿ, ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ನಿಮಗೆ ಟಿಕೆಟ್ ಕೊಡುತ್ತೇವೆ. ಈಗಿನಿಂದಲೇ ಕ್ಷೇತ್ರದಲ್ಲಿ ಕೆಲಸ ಮಾಡಿಎಂದು ನನಗೆ ಹೇಳಿದ್ದರು. ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎಚ್ ಮುನಿಯಪ್ಪ ಟಿಕೆಟ್ ಕೊಡಿಸುವುದಾಗಿ ಮೊದಲ ದಿನವೇ ನನಗೆ ಭರವಸೆ ನೀಡಿದ್ದರು. ನಂತರ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸಹ ಟಿಕೆಟ್ ಭರವಸೆ ನೀಡಿದ್ದರು. ಆದರೆ ಈಗ ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎಚ್.ಮುನಿಯಪ್ಪ, ಡಿ.ಕೆ.ಶಿವಕುಮಾರ್ ಹಾಗೂಸಿದ್ದರಾಮಯ್ಯ ಅವರು ನನಗೆ ಅಭ್ಯರ್ಥಿಯಾಗಲು ಅವಕಾಶ ಕಡಿಮೆಯಿದೆ ಎಂದಿದ್ದು, ಮತ್ತೆ ಜೆಡಿಎಸ್ಗೆ ಮರಳಿದ್ದೇನೆ ಎಂದರು.
ನಾನೂ ಸಹ ಜೆಡಿಎಸ್ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೂ ಸಹ ನನಗೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಮುಖಂಡ ಅರಾಭಿಕೊತ್ತನೂರು ಗಜೇಂದ್ರ ಮತ್ತು ಮುನೇಶ್ ಹಾಜರಿದ್ದರು.
You seem to have an Ad Blocker on.
To continue reading, please turn it off or whitelist Udayavani.