2ನೇ ಹಂತದಲ್ಲಿ 150 ಕೆರೆಗೆ ಕೆ.ಸಿ.ವ್ಯಾಲಿ ನೀರು


Team Udayavani, Nov 18, 2019, 4:08 PM IST

kolar-tdy-2

ಕೋಲಾರ: ಅವಿಭಜಿತ ಜಿಲ್ಲೆಯ 150 ಕೆರೆಗಳಿಗೆ ಹೆಚ್ಚುವರಿಯಾಗಿ ಕೆ.ಸಿ. ವ್ಯಾಲಿ ನೀರು ಹರಿಸುವ 2ನೇ ಹಂತದ ಯೋಜನೆಗೆ ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ 450 ಕೋಟಿ ರೂ. ಬಿಡುಗಡೆಯಾಗಿದ್ದು, ಟೆಂಡರ್‌ ಪ್ರಕ್ರಿಯೆ ನಡೆದಿದೆ ಎಂದು ಮಾಜಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ತಾಲೂಕಿನ ಅಮ್ಮನಲ್ಲೂರು ಗ್ರಾಪಂ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮೊದಲ ಹಂತದಲ್ಲಿ ಕೆ.ಸಿ. ವ್ಯಾಲಿ ನೀರು ತಾಲೂಕಿನ ನರಸಾಪುರ, ಸುಗಟೂರು, ವೇಮಗಲ್‌ ಹೋಬಳಿಯ ಹಲವು ಕೆರೆಗಳಿಗೆ ಹರಿದಿದ್ದು, ಆ ಭಾಗದಲ್ಲಿ ಕೊಳವೆ ಬಾವಿಗಳಲ್ಲಿ ನೀರು ವೃದ್ಧಿಯಾಗಿದೆ, ಅಂತರ್ಜಲ ಹೆಚ್ಚಾಗಿದೆ ಎಂದು ಹೇಳಿದರು.

ಚಿಂತಾಮಣಿ ತಾಲೂಕಿಗೂ ನೀರು: ಮೊದಲ ಹಂತದಲ್ಲಿ ತುಂಬಿ 130 ಕೆರೆಗಳಿಗೆ ಹತ್ತಿರ ಇರುವ ಕೆರೆಗಳ ಸಾಲಿಗೆ ನೀರನ್ನು ಪಂಪ್‌ ಮಾಡಿ ಹರಿಸುವ ಯೋಜನೆ ಇದಾಗಿದ್ದು, ಈ ಯೋಜನೆಯಲ್ಲಿ 150 ಕೆರೆಗಳನ್ನು ಗುರುತಿಸಲಾಗಿದೆ. ಚಿಂತಾಮಣಿ ತಾಲೂಕಿನ ಮಾಡಿಕೆರೆ ಕೆರೆ ಬಳಿ ಪಂಪ್‌ ಹೌಸ್‌ ನಿರ್ಮಾಣ ಮಾಡಿ ಅಲ್ಲಿಂದ ಕೈವಾರ, ಮೈಲಾಪುರ ಚಿನ್ನಸಂದ್ರ, ಹೀರೆಕಟ್ಟಿಗೇನಹಳ್ಳಿ, ಕುರುಬೂರು ಕೆರೆಗಳಿಗೆ ನೀರು ಹರಿಸಲು ಅಂದಾಜು ಪಟ್ಟಿ ತಯಾರಿಸಲಾಗಿದೆ ಎಂದು ಹೇಳಿದರು.

150 ಕೆರೆಗಳಿಗೆ ಕುಡಿಯುವ ನೀರು: ಎತ್ತಿನ ಹೊಳೆ ಯೋಜನೆ ಕುಡಿಯುವ ನೀರಿನ ಯೋಜನೆಯಾಗಿದ್ದು, ಈ ನೀರು ತುಂಬಿಸಲು 150 ಕೆರೆಗಳನ್ನು ಆಯ್ಕೆ ಮಾಡಲಾಗಿದೆ. ಈ ಸರ್ಕಾರ ಬಂದ ಮೇಲೆ ಯೋಜನೆ ಕಾಮಗಾರಿ ಮಂದಗತಿಯಾಗಿದೆ ಎಂದು ಟೀಕಿಸಿದರು. ದೊಡ್ಡಬಳ್ಳಾಪುರ, ಕೊರಟಗೆರೆ ಬಳಿ ಡ್ಯಾಂ ನಿರ್ಮಿಸಲು ಭೂಸ್ವಾಧೀನ ಪ್ರಕ್ರಿಯೆ ತಡವಾಗಿದೆ. ಸಿದ್ದರಾಮಯ್ಯ ಈ ಯೋಜನೆಗೆ ಬೆಂಬಲನೀಡಿದ್ದರು. ಈಗಿನ ಬಿಜೆಪಿ ಸರ್ಕಾರಕ್ಕೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಬಗ್ಗೆ ಕಾಳಜಿ ಇಲ್ಲ ಎಂದರು.

ಸಿಬಿಕೆ ಬರುವ ಮುನ್ನವೇ ಶಾಸಕರು ಜಾಗ ಖಾಲಿ: ಶಾಸಕ ಕೆ.ಶ್ರೀನಿವಾಸಗೌಡರು ಮಾಜಿ ಸಚಿವ ಕೃಷ್ಣಬೈರೇಗೌಡರು ಬರುವ ಮುನ್ನವೇ ಗ್ರಾಮ ಪಂಚಾಯ್ತಿ ನೂತನ ಕಟ್ಟಡ ಲೋಕಾರ್ಪಣೆ ಮಾಡಿ ಅಲ್ಲಿಂದ ಹೊರ ನಡೆದರು. ಅನೇಕ ಮುಖಂಡರು ಸಿಬಿಕೆ ಬರುತ್ತಿದ್ದಾರೆ ಎಂದು ಹೇಳಿದರೂ ಅಲ್ಲಿ ನಿಲ್ಲದೇ ಬೇರೆ ಕೆಲಸವಿದೆ ಎಂದು ಹೇಳಿ ಹೊರ ನಡೆದ ನಂತರ ಬಂದ ಕೃಷ್ಣಬೈರೇಗೌಡರು ಕೇವಲ ಭಾಷಣ ಮಾಡಲು ಸೀಮಿತರಾದರು.

ಸಹಕಾರ: ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೆ.ಸಿ. ವ್ಯಾಲಿ ನೀರನ್ನು ಕೃಷಿಗೆ ಬಳಸಬೇಡಿ, ಅದರಿಂದ ಅಂತರ್ಜಲ ವೃದ್ಧಿಯಾದರೆ ಕೊಳವೆ ಬಾವಿಗಳಲ್ಲಿ ನೀರು ಮೇಲೆ ಬರುತ್ತದೆ. ಇಲ್ಲಿನ ಜನತೆ ಬೈರೇಗೌಡರಂತೆ ನನ್ನನ್ನೂ ಕೈಹಿಡಿದರು. ಇಲ್ಲಿನ ರಸ್ತೆ, ಕುಡಿಯುವ ನೀರು ಮತ್ತಿತರ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರದ ಭರವಸೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಪಂ ಅಧ್ಯಕ್ಷೆ ನಾಗರತ್ನಮ್ಮ ಮಾತನಾಡಿ, ನೂತನ ಕಟ್ಟಡಕ್ಕೆ 16.25 ಲಕ್ಷ ರೂ. ಖರ್ಚು ಮಾಡಲಾಗಿದೆ, ನನ್ನ ಅವಧಿಯಲ್ಲಿ ಸುಂದರ ಕಟ್ಟಡ ನಿರ್ಮಾಣವಾಗಿರುವುದಕ್ಕೆ ಖುಷಿ ಇದೆ ಎಂದರು.

ಪಿಡಿಒ ರವೀಂದ್ರ ನಿರೂಪಿಸಿದ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ನಾಗನಾಳ ಸೋಮಣ್ಣ, ಕೆ.ವಿ.ದಯಾನಂದ್‌, ಗ್ರಾಪಂಉಪಾಧ್ಯಕ್ಷ ಪಿ.ಎನ್‌.ಪಾಪಣ್ಣ, ಸದಸ್ಯರಾದ ವೀರಪ್ಪರೆಡ್ಡಿ, ವನಜಾಕ್ಷಮ್ಮ,

ಯಶೋದಮ್ಮ, ನಾಗರಾಜ್‌, ಬಸಪ್ಪ, ಶ್ವೇತಾ, ಭಾಗ್ಯಮ್ಮ, ಅರುಣ್‌ ಕುಮಾರ್‌, ನಾರಾಯಣಮ್ಮ, ಸುವರ್ಣಮ್ಮ, ಯಶೋದಮ್ಮ, ನಾರಾಯಣಸ್ವಾಮಿ, ಮುನಿರಾಜು, ಮುನಿಶಾಮಿಗೌಡ, ವೆಂಕಟಲಕ್ಷ್ಮಮ್ಮ, ತಾಪಂ ಸದಸ್ಯೆ ನಾಗವೇಣಿ, ಮುಖಂಡರಾದ ಲೇಔಟ್‌ ಹರೀಶ್‌, ಬಾಬುಮೌನಿ, ಶ್ರೀನಿವಾಸ್‌, ನಾಗೇಶ್‌, ಶೇಕ್‌ ಅಹಮದ್‌, ಅನ್ವರ್‌ ಪಾಷ, ಕೃಷ್ಣಾಪುರ ರಾಜಣ್ಣ, ದೊಡ್ಡಗೌಡ, ಮುನೇಗೌಡ, ಕಾರ್ಯದರ್ಶಿ ಎ.ಎನ್‌.ಶಂಕರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.