ನಾಮಪತ್ರ ಸಲ್ಲಿಸಿದ ಸದಸ್ಯ ಚುನಾವಣೆ ಸಭೆಗೆ ಗೈರು !

ಕೋರಂ ಕೊರತೆ ಹಿನ್ನೆಲೆ ! ತಿಮ್ಮಂಪಲ್ಲಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ 11ಕ್ಕೆ ಮುಂದೂಡಿಕೆ

Team Udayavani, Feb 7, 2021, 2:33 PM IST

bhagepalli

ಬಾಗೇಪಲ್ಲಿ: ಸೋಲಿನ ಹತಾಶೆಗೆ ಗುರಿಯಾಗಿ ಪ್ರಮುಖ ರಾಜಕೀಯ ಪಕ್ಷಕ್ಕೆ ಸೇರಿರುವ ಒಂದೇ ಗುಂಪಿನ 11 ಗ್ರಾಪಂ ಸದಸ್ಯರು ಇಬ್ಭಾಗವಾಗಿ, ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಸಭೆಗೆ ಗೈರು ಆದ ಕಾರಣ ಸದಸ್ಯರ ಸಂಖ್ಯಾಬಲದ ಕೋರಂ ಕೊರತೆಯಿಂದ ಶನಿವಾರ ನಡೆಯಬೇಕಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಫೆ.11 ಕ್ಕೆ ಮುಂದೂಡಿರುವ ಘಟನೆ ತಿಮ್ಮಂಪಲ್ಲಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.

ಇಬ್ಟಾಗ: ತಾಲೂಕಿನ ತಿಮ್ಮಂಪಲ್ಲಿ ಗ್ರಾಪಂನಲ್ಲಿ 21 ಸದಸ್ಯರ ಸಂಖ್ಯಾಬಲ ಹೊಂದಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲು ಬಂದಿದೆ. ಆಡಳಿತರೂಢ ರಾಜಕೀಯ ಪಕ್ಷದ ಬೆಂಬಲಿತರು 11 ಸದಸ್ಯರ ಸಂಖ್ಯಾಬಲ ಹೊಂದಿದ್ದು, ಅಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿ ಪೈಪೋಟಿ ಏರ್ಪಟ್ಟು ಸದಸ್ಯರ ಗುಂಪು ಇಬ್ಭಾಗಗಳಾಗಿವೆ.

ಅಧ್ಯಕ್ಷ ಸ್ಥಾನ ಪ್ರತಿಷ್ಠೆ ತೆಗೆದುಕೊಂಡಿರುವ ಒಂದೇ ಪಕ್ಷದ ಎರಡು ಗುಂಪುಗಳು ಅಧ್ಯಕ್ಷ ಸ್ಥಾನದ ಗೊಂದಲ ಈಡೇರುವವರೆಗೂ ಚುನಾವಣೆಗೆ ಯಾರೂ ಸ್ಪರ್ಧಿಸುವುದು ಬೇಡ ಎಂದು ತೀರ್ಮಾನಿಸಿದರು. ಆದ್ದರಿಂದ ಶನಿವಾರ ನಡೆಯಬೇಕಾಗಿರುವ ಚುನಾವಣೆಯನ್ನು ಮುಂದೂಡಲಾಗಿದೆ. ಓರ್ವ ಸದಸ್ಯರ ಕೊರತೆ: ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್‌ ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ನಡೆಯಬೇಕಾಗಿದ್ದು, ಗ್ರಾಪಂನಲ್ಲಿ 21 ಸದಸ್ಯರ ಪೈಕಿ 10 ಜನ ಮಾತ್ರ ಹಾಜರಾಗಿ, ಉಳಿದ 11 ಸದಸ್ಯರು ಗೈರು ಆಗಿದ್ದಾರೆ.

ಚುನಾವಣೆ ನಡೆಸಲು ಶೇ.50 ಕ್ಕಿಂತ ಹೆಚ್ಚು ಸದಸ್ಯರು ಹಾಜರಾಗಬೇಕಾಗಿದ್ದು, ಒಬ್ಬ ಸದಸ್ಯನ ಕೋರಂ ಕೊರತೆಯಿಂದ ಚುನಾವಣೆ ಫೆ.11 ಕ್ಕೆ ಮುಂದೂಡಲಾಯಿತು ಎಂದು ತಹಶೀಲ್ದಾರ್‌ ಕೃಷ್ಣಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ :ತ್ಯಾಜ್ಯ ನಿರ್ವಹಣಾ ಘಟಕ ಪರಿಶೀಲನೆ

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ 5 ನಾಮಪತ್ರ ಸಲ್ಲಿಕೆ: ಬೆಳಗ್ಗೆ 9.30ಕ್ಕೆ ಅಧ್ಯಕ್ಷ ಸ್ಥಾನಕ್ಕೆ ಭಾರತಮ್ಮ ರಂಗಾರೆಡ್ಡಿ, ಅಮರಾವತಿ ನಂಜುಂಡಪ್ಪ, ಸುಕನ್ಯಾ ವೆಂಕಟರೆಡ್ಡಿ, ಉಪಾಧ್ಯಕ್ಷ ಸ್ಥಾನಕ್ಕೆ ಅಮರಾವತಿ ಚಿನ್ನಕೃಷ್ಣಪ್ಪ, ನರಸಿಂಹಮೂರ್ತಿ ನಾಮಪತ್ರ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಗ್ರಾಪಂ ಸದಸ್ಯ ನರಸಿಂಹಮೂರ್ತಿ 12 ಗಂಟೆಯಾದರೂ ಹಾಜರಾಗದ ಕಾರಣ ಚುನಾವಣೆ ಮುಂದೂಡಲಾಯಿತು.

ಪೊಲೀಸ್‌ ಬಂದೋಬಸ್ತ್: ಚುನಾವಣೆ ಮುಂದೂಡಿದ ನ್ನಲೆಯಲ್ಲಿ ಘಟನಾ ಸ್ಥಳದಲ್ಲಿ ಯಾವುದೇ ಅತಕರ ಘಟನೆಗಳು ನಡೆಯದಂತೆ ಚಿಕ್ಕಬಳ್ಳಾಪುರದ ಡಿವೈಎಸ್‌ಪಿ ರಶಂಕರ್‌ ಮತ್ತು ಪಿಎಸ್‌ಐ ಜಿ.ಕೆ. ಸುನಿಲ್‌ ಕುಮಾರ್‌ ಅವರ ನೇತೃತ್ವದಲ್ಲಿ ಪೋಲೀಸ್‌ ಬಂದೋ ಬಸ್ತ್ ಅಯೋಜಿಸಲಾಗಿತ್ತು.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.