ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಭರ್ಜರಿ ರೋಡ್‌ ಶೋ


Team Udayavani, Apr 10, 2019, 12:18 PM IST

muniswamy

ಶ್ರೀನಿವಾಸಪುರ: ಭಯೋತ್ಪಾದನೆ ಸಂಪೂರ್ಣ ನಿರ್ಮೂಲನೆಗಾಗಿ ಕೇಂದ್ರ ಸರ್ಕಾರ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದು, ದೇಶದ ರಕ್ಷಣೆ ಮತ್ತು ಹಳ್ಳಿಗಳ ಅಭಿವೃದ್ಧಿಗೆ ಒತ್ತು ನೀಡುವುದರೊಂದಿಗೆ ರೈತರ ಬೆನ್ನೆಲುಬಾಗಿ ಮೋದಿ ನಿಂತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಪಟ್ಟಣದಲ್ಲಿ ಕೋಲಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌. ಮುನಿಸ್ವಾಮಿ ಪರ ಭರ್ಜರಿ ರೋಡ್‌ ಶೋ ನಡೆಸಿದ ಅವರು, ಕಾಶ್ಮೀರಕ್ಕೆ ಪ್ರತ್ಯೇಕವಾಗಿ ರೂಪಿಸಿರುವ ಆರ್ಟಿಕಲ್‌ 370 ಹಾಗೂ 35 ಎ ಅನ್ನು ತೆಗೆಯುವ ಮೂಲಕ ಎಲ್ಲಾ ಧರ್ಮಿಯರು ಒಂದೇ ತಾಯಿ ಮಕ್ಕಳಂತೆ ಬಾಳಲು ಅನುಕೂಲ ಕಲ್ಪಿಸಲಾಗುತ್ತಿದೆ. ನಗರ ಪ್ರದೇಶದಲ್ಲಿ ಮಾತ್ರ ಮೋದಿ ಮೋದಿ ಎಂಬ ಘೋಷಣೆ ಕೇಳುತ್ತಿದ್ದೆ, ಈಗ ಗ್ರಾಮೀಣ ಪ್ರದೇಶಗಳಲ್ಲಿಯೂ ಮೋದಿ ನಾಮ ಸ್ಮರಣೆ ಮಾಡುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ಎರಡನೇ ವ್ಯಕ್ತಿ ಮೋದಿ ಎಂದು ಹೇಳಿದರು.

ಶ್ರೀನಿವಾಸಪುರ ತಾಲೂಕಿನ ಪ್ರತಿಯೊಬ್ಬರ ಬಾಯಲ್ಲೂ ಮೋದಿ ಹೆಸರು ಕೇಳಿ ಸಂತಸವಾಗಿದೆ. ಇದರಿಂದ ದೇಶಕ್ಕೆ ಒಳ್ಳೆ ದಿನಗಳು ಬರುತ್ತವೆ ಎಂದು ತಮ್ಮ ಮನದಾಳದ ಮಾತನ್ನು ವ್ಯಕ್ತಪಡಿಸುವುದರೊಂದಿಗೆ, ನನೆಗುದಿಗೆ
ಬಿದ್ದಿರುವ ಎತ್ತಿನ ಹೊಳೆ ಯೋಜನೆ ಕಾರ್ಯ ರೂಪಕ್ಕೆ ತರಲು ಯೋಜನೆ ರೂಪಸಿಲಾಗಿದೆ. ಹೇಮಾವತಿ, ಮೇಕೆದಾಟು, ಕೃಷ್ಣಾ ಹಾಗೂ ಮುಂತಾದ ನದಿ ಜೋಡಣೆಯಿಂದ ನೀರಿನ ಅಭಾವ ಎದುರಿಸುತ್ತಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹರಿಸುವ ವಿಚಾರಕ್ಕೆ ಕೇಂದ್ರ ಸಚಿವ ನಿತಿನ್‌ಗಡ್ಕರಿ ಅವರೊಂದಿಗೆ ಮಾತನಾಡಿದ್ದೇನೆ

ಎಂದು ಹೇಳಿದರು. ಮುಳಬಾಗಿಲು ಮಾಜಿ ಶಾಸಕ ಕೊತ್ತೂರ್‌ ಮಂಜುನಾಥ್‌ ಮಾತನಾಡಿ, ಕೋಲಾರದಲ್ಲಿ ನ್ಯಾಯ-ಅನ್ಯಾಯದ ಮಧ್ಯೆ ಚುನಾವಣೆ ನಡೆಯುತ್ತಿದೆ. ಜಿಲ್ಲೆಯ ಶಾಸಕರು ಜನತೆಗಾಗಿ ಅಭಿವೃದ್ಧಿ ಕೆಲಸಗಳನ್ನು
ಮಾಡಿದ್ದಾರೆ. ಆದರೆ, ಲೋಕಸಭೆ ಸದಸ್ಯರು ಏನು ಅಭಿವೃದ್ಧಿ ಮಾಡಿದ್ದಾರೆ. ನಾವು ನಿಷ್ಠಾವಂತರಾಗಿ ಜನರಿಗೆ ದುಡಿಯುವವರು. ನಮ್ಮನ್ನು ಸಂಸದ ಕೆ.ಎಚ್‌. ಮುನಿಯಪ್ಪ ಮುಗಿಸುತ್ತಿದ್ದಾರೆ. ಈಗ ಅದೇ ತಿರುಗುಬಾಣವಾಗಿದೆ ಎಂದು ಹೇಳಿದರು. ಚಿಂತಾಮಣಿ ಮಾಜಿ ಶಾಸಕ ಎಂ.ಸಿ.ಸುಧಾಕರ್‌ ಕೂಡ ಕೆಎಚ್‌ಎಂ ವಿರುದ್ಧ ವಾಗ್ಧಾಳಿ ನಡೆಸಿದರು. ಬಿಜೆಪಿ ಅಭ್ಯರ್ಥಿಎಸ್‌. ಮುನಿಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ, ತಾಲೂಕು ಅಧ್ಯಕ್ಷ
ವೆಂಕಟೇಗೌಡ, ಮುಖಂಡರುಗಳಾದ ಎಸ್‌ಎಲ್‌ಎನ್‌ ಮಂಜುನಾಥ್‌, ಡಾ.ವೇಣುಗೋಪಾಲ್‌, ವಕೀಲ ನಾಗರಾಜ್‌, ನಾಗೇಂದ್ರ ಕೊಳ್ಳೂರು, ಚಿರುವನಹಳ್ಳಿ ಲಕ್ಷ್ಮಣಗೌಡ, ರಾಜ್ಯ ಪರಿಷತ್‌ನ ಜಯರಾಮರೆಡ್ಡಿ, ಪದ್ಮನಾಭ, ಯುವ ಮೋರ್ಚಾ ಅಧ್ಯಕ್ಷ ರಾಮಾಂಜಿ, ಎಸ್‌.ಸಿ ಮೋರ್ಚಾ ಶ್ರೀನಿವಾಸ್‌ ಹಾಗೂ ಮುಂತಾದವರು ಭಾಗವಹಿಸದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.