ವಾಣಿಜ್ಯ ಮಳಿಗೆಗಳ ತೆರವು ಕಾರ್ಯಾಚರಣೆ


Team Udayavani, Apr 5, 2022, 4:25 PM IST

ವಾಣಿಜ್ಯ ಮಳಿಗೆಗಳ ತೆರವು ಕಾರ್ಯಾಚರಣೆ

ಕೋಲಾರ: ಟೆಂಡರ್‌ ಅವಧಿ ಮುಗಿದ ವಾಣಿಜ್ಯ ಮಳಿಗೆಗಳ ತೆರವಿಗೆ ನೀಡಿದ್ದ 45 ದಿನಗಳ ಗಡುವು ಮುಗಿದ ಹಿನ್ನಲೆಯಲ್ಲಿ ಸೋಮವಾರ ಬೆಳಗ್ಗೆ ಪೊಲೀಸ್‌ ಇಲಾಖೆ ನೆರವಿನೊಂದಿಗೆ ಕಾರ್ಯಚರಣೆ ನಡೆಸಿ, 15 ಅಂಗಡಿಗಳನ್ನು ತೆರವು ಮಾಡಿಸಿ ನಗರಸಭೆ ಸ್ವಾಧೀನಕ್ಕೆ ಪಡೆಯಲಾಗಿದೆ ಎಂದು ನಗರಸಭೆ ಪೌರಾಯುಕ್ತ ಪ್ರಸಾದ್‌ ತಿಳಿಸಿದರು.

ನಗರಸಭೆ ಕಾರ್ಯಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಗರಸಭೆಗೆ ಸೇರಿದ ವಾಣಿಜ್ಯ ಸಂಕೀರ್ಣಗಳ 220 ಮಳಿಗೆಗಳ ಪೈಕಿ 205 ಮಳಿಗೆಗಳನ್ನು ತೆರವು ಮಾಡಲಾಗಿತ್ತು. ಉಳಿದ ಅಂಗಡಿಗಳ ತೆರವಿಗೆ ನೋಟಿಸ್‌ ನೀಡಲಾಗಿತ್ತು. ಈ ಸಂಬಂಧವಾಗಿ ಹಾಲಿ ಮಳಿಗೆಯಲ್ಲಿನ ಅಂಗಡಿ ಮಾಲೀಕರು ಹೂಡಿದ್ದ ದಾವೆಯ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರೆದಿದ್ದು, ಇನ್ನು ಯಾವೂದೇ ತೀರ್ಪು ಬಂದಿಲ್ಲ ಎಂದರು.

ಯುಗಾದಿ ಹಬ್ಬಕ್ಕೆ ಗಡುವು ಪೂರ್ಣ: ಈ ಅಂಗಡಿಗಳಿಗೆ ಸಂಬಂಧ ಪಟ್ಟಂತೆ ಈ ಹಿಂದೆ ಹರಾಜಿನಲ್ಲಿ ಬಿಡ್‌ದಾರರು ಮಳಿಗೆಯನ್ನು ಪಡೆದಿದ್ದಾರೆ. ನ್ಯಾಯಾಲಯದಲ್ಲಿ ಈ ಸಂಬಂಧವಾಗಿ 15 ಮಂದಿ ಪ್ರಕರಣ ದಾಖಲು ಮಾಡಿರುವುದರಿಂದ ತೆರವು ಮಾಡಿಸಲು ಕಾನೂನು ತೊಡುಕುಗಳಿದ್ದವು, ಈಗ ಸ್ವಾಧೀನಕ್ಕೆ ಪಡೆಯಲು ನೀಡಿದ್ದ ನೋಟಿಸ್‌ ಯುಗಾದಿ ಹಬ್ಬಕ್ಕೆ ಗಡುವು 45 ದಿನಗಳು ಪೂರ್ಣಗೊಂಡಿತ್ತು. ಆದರೆ, ಹಬ್ಬವೆಂದು, ಮಾರನೇ ದಿನ ಭಾನುವಾರ ರಜೆ ದಿನವೆಂದು ಎರಡು ದಿನಗಳು ಮಳಿಗೆ ಯಲ್ಲಿದ್ದ ವಸ್ತುಗಳನ್ನು ತೆರವು ಮಾಡಲು ಅವಕಾಶ ನೀಡಿದ್ದು, ಸೋಮವಾರ ಬೆಳಗ್ಗೆ ಪೊಲೀಸ್‌ ವರಿಷ್ಠಾಧಿ ಕಾರಿಗಳಿಗೆ ಭದ್ರತೆ ಕೋರಿ, ಪೊಲೀಸ್‌ ಸಿಬ್ಬಂದಿಗಳ ನೆರವಿ ನೊಂದಿಗೆ ಶತಶೃಂಗ ಕಾಂಪ್ಲೇಕ್ಸ್‌ನಲ್ಲಿ 12 ಮಳಿಗೆಗಳು ಮತ್ತು ಗಂಗೋತ್ರಿ ಕಾಂಪ್ಲೆಕ್ಸ್‌ನಲ್ಲಿ 3 ಮಳಿಗೆಗಳು ಸೇರಿ ಒಟ್ಟು 15 ಮಳಿಗೆಗಳನ್ನು ತೆರವು ಮಾಡಿಸಿ ಸ್ವಾಧೀನಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು.

ನ್ಯಾಯಾಲಯದ ತೀರ್ಪಿನ ಪ್ರಕಾರ ಮುಂದುವರೆ ಯಬೇಕಾಗಿದೆ. ನಂತರ ನಗರಸಭೆಯ ಕಾನೂನು ಸಲಹೆಗಾರರು ನೀಡುವ ಸೂಚನೆಗಳ ಪ್ರಕಾರ ಹೋಗಬೇಕಾಗಿದೆ ಎಂದು ಹೇಳಿದರು. ತೆರವು ಕಾರ್ಯಚರಣೆಯಲ್ಲಿ ಕಂದಾಯಾಧಿಕಾರಿ ಚಂದ್ರು, ಕಂದಾಯ ನಿರೀಕ್ಷಕರಾದ ತ್ಯಾಗರಾಜ್‌ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು. ಅದೇ ರೀತಿ ಪೊಲೀಸ್‌ ಇಲಾಖೆಯ ಎಸ್‌.ಐ.ಅಣ್ಣಯ್ಯಪ್ಪ ಮತ್ತು ಸಿಬ್ಬಂದಿ ವರ್ಗದವರು ಉತ್ತಮ ಸಹಕಾರ ನೀಡಿರುವುದಕ್ಕೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿದರು.

ಪ್ರಶ್ನೆಯೊಂದಕ್ಕೆ ಹೌದು ಈ ಮಳಿಗೆಗಳ ತೆರವು ಸಂಬಂಧವಾಗಿ ಕೆಲವು ನಗರಸಭಾ ಸದಸ್ಯರು ಈ ಹಿಂದೆ ನೀಡಿದ್ದವರಿಗೆ ಮುಂದುವರೆಸಬೇಕು ಎಂದು ಈ ಹಿಂದೆ ಹರಾಜು ಪ್ರಕ್ರಿಯೆ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದುದು ನಿಜ. ಈ ಸಂಬಂಧವಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದರಿಂದ 15 ಮಳಿಗೆಗಳು ಸ್ವಾಧೀನಕ್ಕೆ ಪಡೆಯಲು ಸಾಧ್ಯವಾಗಿರಲಿಲ್ಲ. ಈಗ ನೋಟಿಸ್‌ ಅವಧಿ ಮುಗಿದಿದ್ದರಿಂದ ತೆರವು ಮಾಡಿಸಲು ನಗರಸಭೆ ಮುಂದಾಯಿತು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಕಂದಾಯಾಧಿಕಾರಿ ಚಂದ್ರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.