ವಾಣಿಜ್ಯ ಮಳಿಗೆಗಳ ತೆರವು ಕಾರ್ಯಾಚರಣೆ


Team Udayavani, Apr 5, 2022, 4:25 PM IST

ವಾಣಿಜ್ಯ ಮಳಿಗೆಗಳ ತೆರವು ಕಾರ್ಯಾಚರಣೆ

ಕೋಲಾರ: ಟೆಂಡರ್‌ ಅವಧಿ ಮುಗಿದ ವಾಣಿಜ್ಯ ಮಳಿಗೆಗಳ ತೆರವಿಗೆ ನೀಡಿದ್ದ 45 ದಿನಗಳ ಗಡುವು ಮುಗಿದ ಹಿನ್ನಲೆಯಲ್ಲಿ ಸೋಮವಾರ ಬೆಳಗ್ಗೆ ಪೊಲೀಸ್‌ ಇಲಾಖೆ ನೆರವಿನೊಂದಿಗೆ ಕಾರ್ಯಚರಣೆ ನಡೆಸಿ, 15 ಅಂಗಡಿಗಳನ್ನು ತೆರವು ಮಾಡಿಸಿ ನಗರಸಭೆ ಸ್ವಾಧೀನಕ್ಕೆ ಪಡೆಯಲಾಗಿದೆ ಎಂದು ನಗರಸಭೆ ಪೌರಾಯುಕ್ತ ಪ್ರಸಾದ್‌ ತಿಳಿಸಿದರು.

ನಗರಸಭೆ ಕಾರ್ಯಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಗರಸಭೆಗೆ ಸೇರಿದ ವಾಣಿಜ್ಯ ಸಂಕೀರ್ಣಗಳ 220 ಮಳಿಗೆಗಳ ಪೈಕಿ 205 ಮಳಿಗೆಗಳನ್ನು ತೆರವು ಮಾಡಲಾಗಿತ್ತು. ಉಳಿದ ಅಂಗಡಿಗಳ ತೆರವಿಗೆ ನೋಟಿಸ್‌ ನೀಡಲಾಗಿತ್ತು. ಈ ಸಂಬಂಧವಾಗಿ ಹಾಲಿ ಮಳಿಗೆಯಲ್ಲಿನ ಅಂಗಡಿ ಮಾಲೀಕರು ಹೂಡಿದ್ದ ದಾವೆಯ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರೆದಿದ್ದು, ಇನ್ನು ಯಾವೂದೇ ತೀರ್ಪು ಬಂದಿಲ್ಲ ಎಂದರು.

ಯುಗಾದಿ ಹಬ್ಬಕ್ಕೆ ಗಡುವು ಪೂರ್ಣ: ಈ ಅಂಗಡಿಗಳಿಗೆ ಸಂಬಂಧ ಪಟ್ಟಂತೆ ಈ ಹಿಂದೆ ಹರಾಜಿನಲ್ಲಿ ಬಿಡ್‌ದಾರರು ಮಳಿಗೆಯನ್ನು ಪಡೆದಿದ್ದಾರೆ. ನ್ಯಾಯಾಲಯದಲ್ಲಿ ಈ ಸಂಬಂಧವಾಗಿ 15 ಮಂದಿ ಪ್ರಕರಣ ದಾಖಲು ಮಾಡಿರುವುದರಿಂದ ತೆರವು ಮಾಡಿಸಲು ಕಾನೂನು ತೊಡುಕುಗಳಿದ್ದವು, ಈಗ ಸ್ವಾಧೀನಕ್ಕೆ ಪಡೆಯಲು ನೀಡಿದ್ದ ನೋಟಿಸ್‌ ಯುಗಾದಿ ಹಬ್ಬಕ್ಕೆ ಗಡುವು 45 ದಿನಗಳು ಪೂರ್ಣಗೊಂಡಿತ್ತು. ಆದರೆ, ಹಬ್ಬವೆಂದು, ಮಾರನೇ ದಿನ ಭಾನುವಾರ ರಜೆ ದಿನವೆಂದು ಎರಡು ದಿನಗಳು ಮಳಿಗೆ ಯಲ್ಲಿದ್ದ ವಸ್ತುಗಳನ್ನು ತೆರವು ಮಾಡಲು ಅವಕಾಶ ನೀಡಿದ್ದು, ಸೋಮವಾರ ಬೆಳಗ್ಗೆ ಪೊಲೀಸ್‌ ವರಿಷ್ಠಾಧಿ ಕಾರಿಗಳಿಗೆ ಭದ್ರತೆ ಕೋರಿ, ಪೊಲೀಸ್‌ ಸಿಬ್ಬಂದಿಗಳ ನೆರವಿ ನೊಂದಿಗೆ ಶತಶೃಂಗ ಕಾಂಪ್ಲೇಕ್ಸ್‌ನಲ್ಲಿ 12 ಮಳಿಗೆಗಳು ಮತ್ತು ಗಂಗೋತ್ರಿ ಕಾಂಪ್ಲೆಕ್ಸ್‌ನಲ್ಲಿ 3 ಮಳಿಗೆಗಳು ಸೇರಿ ಒಟ್ಟು 15 ಮಳಿಗೆಗಳನ್ನು ತೆರವು ಮಾಡಿಸಿ ಸ್ವಾಧೀನಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು.

ನ್ಯಾಯಾಲಯದ ತೀರ್ಪಿನ ಪ್ರಕಾರ ಮುಂದುವರೆ ಯಬೇಕಾಗಿದೆ. ನಂತರ ನಗರಸಭೆಯ ಕಾನೂನು ಸಲಹೆಗಾರರು ನೀಡುವ ಸೂಚನೆಗಳ ಪ್ರಕಾರ ಹೋಗಬೇಕಾಗಿದೆ ಎಂದು ಹೇಳಿದರು. ತೆರವು ಕಾರ್ಯಚರಣೆಯಲ್ಲಿ ಕಂದಾಯಾಧಿಕಾರಿ ಚಂದ್ರು, ಕಂದಾಯ ನಿರೀಕ್ಷಕರಾದ ತ್ಯಾಗರಾಜ್‌ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು. ಅದೇ ರೀತಿ ಪೊಲೀಸ್‌ ಇಲಾಖೆಯ ಎಸ್‌.ಐ.ಅಣ್ಣಯ್ಯಪ್ಪ ಮತ್ತು ಸಿಬ್ಬಂದಿ ವರ್ಗದವರು ಉತ್ತಮ ಸಹಕಾರ ನೀಡಿರುವುದಕ್ಕೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿದರು.

ಪ್ರಶ್ನೆಯೊಂದಕ್ಕೆ ಹೌದು ಈ ಮಳಿಗೆಗಳ ತೆರವು ಸಂಬಂಧವಾಗಿ ಕೆಲವು ನಗರಸಭಾ ಸದಸ್ಯರು ಈ ಹಿಂದೆ ನೀಡಿದ್ದವರಿಗೆ ಮುಂದುವರೆಸಬೇಕು ಎಂದು ಈ ಹಿಂದೆ ಹರಾಜು ಪ್ರಕ್ರಿಯೆ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದುದು ನಿಜ. ಈ ಸಂಬಂಧವಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದರಿಂದ 15 ಮಳಿಗೆಗಳು ಸ್ವಾಧೀನಕ್ಕೆ ಪಡೆಯಲು ಸಾಧ್ಯವಾಗಿರಲಿಲ್ಲ. ಈಗ ನೋಟಿಸ್‌ ಅವಧಿ ಮುಗಿದಿದ್ದರಿಂದ ತೆರವು ಮಾಡಿಸಲು ನಗರಸಭೆ ಮುಂದಾಯಿತು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಕಂದಾಯಾಧಿಕಾರಿ ಚಂದ್ರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.