ಬಿಜೆಪಿ ಅಭ್ಯರ್ಥಿ ಗೆಲುವು ನಮ್ಮ ಗುರಿ


Team Udayavani, Apr 6, 2023, 3:55 PM IST

TDY-12

ಕೆಜಿಎಫ್‌: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಕೆಜಿಎಫ್‌ನಲ್ಲಿ ಗೆಲ್ಲುವುದು ನಮ್ಮ ಗುರಿಯಾಗಿದ್ದು, ಅದನ್ನು ಸಾಧಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದರು.

ನಗರದ ಅಂಬೇಡ್ಕರ್‌ ಮತ್ತು ತಿರುವಳ್ಳುವರ್‌ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ ಅಪಾರ ಬೆಂಬಲಿಗರೊಂದಿಗೆ ಪ್ರಸನ್ನ ಲಕ್ಷ್ಮೀ ವೆಂಕಟರಮಣ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿ, ಬೆಂಗಳೂರಿನ ವೇಲು ನಾಯಕರ್‌ ಕೆಜಿಎಫ್‌ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಾಗಿದ್ದು, ತಮ್ಮೊಟ್ಟಿಗೆ ಬಂದು ಪೂಜೆ ಸಲ್ಲಿಸುವಂತೆ ಆಹ್ವಾನ ನೀಡಿದ್ದಕ್ಕೆ ಅವರೊಂದಿಗೆ ಬಂದು ಪೂಜೆ ಸಲ್ಲಿಸಿರುವುದಾಗಿ ತಿಳಿಸಿದರು.

ಯಾರೇ ಅಭ್ಯರ್ಥಿಯಾದರೂ ಒಟ್ಟಾಗಿ ಕೆಲಸ: ಕೆಜಿಎಫ್‌ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಐದಾರು ಮಂದಿ ಆಕಾಂಕ್ಷಿಗಳಿದ್ದು, ಪಕ್ಷಕ್ಕಾಗಿ ಹಗಲಿರುಳು ದುಡಿಯುತ್ತಿದ್ದು, ಅವರ ಗತಿಯೇನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯು ರಾಷ್ಟ್ರೀಯ ಪಕ್ಷವಾಗಿದ್ದು, ಪಕ್ಷಕ್ಕಾಗಿ ಹಲವಾರು ಮಂದಿ ದುಡಿಯುತ್ತಿದ್ದರೂ ಸಹ ಅಭ್ಯರ್ಥಿ ಒಬ್ಬರೇ ಆಗುತ್ತಾರೆ. ಪಕ್ಷ ಯಾರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿದರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷರು, ಕಾರ್ಯಕರ್ತರು ಮತ್ತು ಜನರ ಅನುಮತಿ ಪಡೆದುಕೊಳ್ಳಲಾಗಿದೆಯೇ ಎಂದು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ, ಇಂದು ವೇಲು ನಾಯಕರ್‌ ಪೂಜೆ ಮಾಡೋಣ ಬನ್ನಿ ಎಂದು ಕರೆದರು, ಅವರೊಟ್ಟಿಗೆ ಬಂದಿದ್ದೇನೆ. ಯಾರೇ ನನ್ನನ್ನು ಕರೆದರೂ ಅವರೆಲ್ಲರೊಟ್ಟಿಗೆ ಬರುವುದಾಗಿ ತಿಳಿಸಿದರು.

ಇಲ್ಲಿ ಲೋಕಲ್‌, ಔಟ್‌ ಸೈಡ್‌ನ‌ವರು ಎನ್ನುವುದು ಗಣನೆಗೆ ಬರುವುದಿಲ್ಲ, ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ಅಭ್ಯರ್ಥಿ ಯಾರೆಂಬುದನ್ನು ಪಕ್ಷ ತೀರ್ಮಾನಿಸುತ್ತದೆ. 9 ಜನ ಆಕಾಂಕ್ಷಿಗಳಿದ್ದರೂ ಒಬ್ಬರು ಅಭ್ಯರ್ಥಿಯಾಗುತ್ತಾರೆ, ಉಳಿದ 8 ಮಂದಿ ಒಬ್ಬ ವ್ಯಕ್ತಿಗೆ ಕೆಲಸ ಮಾಡುತ್ತಾರೆ ಎಂದರು.

ಗೆಲ್ಲುವಂತಹ ಅಭ್ಯರ್ಥಿ ಆಯ್ಕೆ: ಕೆಜಿಎಫ್‌ ನಲ್ಲಿ ಎಷ್ಟು ಜನ ಆಕಾಂಕ್ಷಿಗಳಿದ್ದಾರೋ ಅವರೆಲ್ಲರೂ ನಮ್ಮವರೇ, ಅದು ಸಂಪಂಗಿಯವರಾಗಲೀ, ಮೋಹನ್‌ಕೃಷ್ಣಾ ಆಗಲೀ ಎಲ್ಲರೂ ಒಂದೇ. ನಮ್ಮ ಉದ್ದೇಶ ಒಂದೇ ಆಕಾಂಕ್ಷಿಗಳೆಷ್ಟೇ ಜನ ಇದ್ದರೂ ಅಂತಿಮವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿ ಒಬ್ಬರೇ ಆಗಿದ್ದು, ಅವರು ಗೆಲ್ಲುವವ ರಾಗಿರಬೇಕು. ಅಂತಹ ಅಭ್ಯರ್ಥಿಯನ್ನು ಪಕ್ಷವು ಆಯ್ಕೆ ಮಾಡಲಿದೆ ಎಂದರು.

ಕ್ಷೇತ್ರದಲ್ಲಿ ಅವಕಾಶ ಕೊಟ್ಟರೇ ಒಟ್ಟಾಗಿ ಕೆಲಸ ಮಾಡುವೆ: ಬಿಜೆಪಿ ನೂತನ ಟಿಕೆಟ್‌ ಆಕಾಂಕ್ಷಿ ವೇಲು ನಾಯಕರ್‌ ಮಾತನಾಡಿ, ಕಾರ್ಯಕರ್ತರ ಸೇವೆಯನ್ನು ಗುರುತಿಸುವ ಪಕ್ಷವೆಂದರೆ ಅದು ಬಿಜೆಪಿ ಪಕ್ಷವಾಗಿದ್ದು, ನಾನು ಪರಿಶಿಷ್ಟ ಜಾತಿಯ ಬಲ ಪಂಥೀಯ ಸಮುದಾಯಕ್ಕೆ ಸೇರಿದವನಾಗಿದ್ದು, ಬೆಂಗಳೂರಿನಲ್ಲಿ ಬಹುತೇಕ ಸಾಮಾನ್ಯ ವರ್ಗಕ್ಕೆ ಸೀಟುಗಳು ಮೀಸಲಾಗಿದ್ದು, ಬೆಂಗಳೂರಿನ ಸುತ್ತಮುತ್ತಲು ಮೀಸಲು ಕ್ಷೇತ್ರಗಳಲ್ಲಿ ಕೆಜಿಎಫ್‌ ನ್ನು ಆಯ್ಕೆ ಮಾಡಿಕೊಂಡಿದ್ದು, ಇಲ್ಲಿರುವ ಆಕಾಂಕ್ಷಿಗಳೊಂದಿಗೆ ನಾನೂ ಸಹ ಒಬ್ಬ ಆಕಾಂಕ್ಷಿಯಾಗಿ ಇಲ್ಲಿಗೆ ಬಂದಿದ್ದೇನೆ ಎಂದರು.

ಬೆಂಗಳೂರಿನ ಲಕ್ಷ್ಮೀದೇವಿನಗರದ ಕಾರ್ಪೊರೇಟರ್‌ ಆದ ಬಳಿಕ ಬಿಬಿಎಂಪಿ ಅಕೌಂಟ್ಸ್‌ ಸಮಿತಿ ಅಧ್ಯಕ್ಷನಾಗಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದರಿಂದ ಬಿಜೆಪಿ ನನ್ನ ಸೇವೆ ಗುರುತಿಸಿ, ಗುಲ್ಬರ್ಗಾ ಚುನಾವಣೆ ಉಸ್ತುವಾರಿ ನೀಡಿದ್ದು, ಅಲ್ಲಿನ ನಾಲ್ಕು ವಾರ್ಡ್‌ಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದೆ. ಗೋವಾ ಮತ್ತು ತಮಿಳುನಾಡು ಚುನಾವಣಾ ಉಸ್ತುವಾರಿ ನೀಡಿದ್ದು, ಅಲ್ಲೆಲ್ಲಾ ಉತ್ತಮವಾಗಿ ಕಾರ್ಯನಿರ್ವಹಿಸಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದರಿಂದ ಕೆಜಿಎಫ್‌ನಲ್ಲಿ ಪಕ್ಷವು ಅವಕಾಶ ನೀಡಿದಲ್ಲಿ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವುದಾಗಿ ತಿಳಿಸಿದರು.

ಬಿಜೆಪಿ ನಗರ ಘಟಕ ಅಧ್ಯಕ್ಷ ಕಮಲ್‌ ನಾಥನ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್‌ ನಾರಾಯಣ್‌ ಕುಟ್ಟಿ, ಡಾ.ಅರಿವಳಗನ್‌, ಮುಖಂಡ ಚಂದ್ರಶೇಖರರೆಡ್ಡಿ (ಸುನೀಲ್‌), ಶ್ಯಾಮ್‌, ಕಣ್ಣೂರು ವಿಜಿಕುಮಾರ್‌, ಬಾಬಿ ಸುರೇಶ್‌ ಇದ್ದರು.

ಟಾಪ್ ನ್ಯೂಸ್

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

arest

Puttur: ವಂಚನೆ ಪ್ರಕರಣದ ಆರೋಪಿ ತೆಲಂಗಾಣದಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.