ಫುಡ್‌ ಇನ್ಸ್‌ಪೆಕ್ಷರ್‌ ಎಂದು ನಂಬಿಸಿ ಮೋಸ

ನಕಲಿ ಆದೇಶ ಪ್ರತಿ ಇಟ್ಟುಕೊಂಡು ಅಂಗನವಾಡಿಗೆ ಭೇಟಿ ನೀಡಿ ಪರಿಶೀಲನೆ ಇಲಾಖೆಯಿಂದ ಹಣ ಕೊಡಿಸುವುದಾಗಿ ವಂಚನೆ

Team Udayavani, Oct 23, 2021, 2:43 PM IST

ನಕಲಿ food inspector

ಮಾಸ್ತಿ: ಸರ್ಕಾರಿ ಕಾರು, ಗುರುತಿನ ಚೀಟಿ, ಸರ್ಕಾರದ ಆದೇಶ ಪ್ರತಿ ಜೊತೆಗೆ ಶೂಟು ಬೂಟು ಹಾಕಿಕೊಂಡು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಹಾರ ಮತ್ತು ಆರೋಗ್ಯ ಸಂಶೋ ಧನಾ ಅಧಿಕಾರಿ(ಎ ಡಬ್ಲ್ಯು ಎಫ್‌ ಸಿ ಐ) ಎಂದು ನಂಬಿಸಿ ಜನರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಅಧಿಕಾರಿಯೊಬ್ಬನನ್ನು ಹೋಬಳಿಯ ನಟುವರಹಳ್ಳಿ ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ನಕಲಿ ಆದೇಶ, ಐಡಿ ಕಾರ್ಡ್‌ ಇಟ್ಟುಕೊಂಡು ಬಾಡಿಗೆ ಕಾರಿಗೆ ಸರ್ಕಾರಿ ಸ್ಟಿಕ್ಕರ್‌ ಅಂಟಿಸಿಕೊಂಡು ಸರ್ಕಾರಿ ವಾಹನ ಎಂದು ಮಾರ್ಪಡಿಸಿ ಅಂಗನವಾಡಿ ಕೇಂದ್ರ, ನಮ್ಮ ಇಲಾಖೆಯಿಂದ ವಸತಿ ಅಭಿವೃದ್ಧಿಗೆ ಎರಡೂವರೆ ಲಕ್ಷ ರೂ. ಕೊಡಿಸುವುದಾಗಿ ನಂಬಿಸಿ ಆಧಾರ್‌, ರೇಷನ್‌ ಕಾರ್ಡ್‌ ಜೆರಾಕ್ಸ್‌ನೊಂದಿಗೆ 2 ರಿಂದ 3 ಸಾವಿರ ರೂ. ವಸೂಲಿ ಮಾಡುತ್ತಿದ್ದ ನಕಲಿ ಅಧಿಕಾರಿಯನ್ನು ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಸಮೀಪದ ಬೊಮ್ಮಗಾನಹಳ್ಳಿ ವಿ.ವೇಣುಗೋಪಾಲಗೌಡ ಎಂದು ಗುರುತಿಸಲಾಗಿದೆ.

ಭೇಟಿ ಪುಸ್ತಕದಲ್ಲಿ ಸಹಿ ಹಾಕಿ ಮೊಹರು: ಇಲಾಖೆಯಿಂದ ನೀಡಿದ್ದಾರೆ ಎನ್ನಲಾದ ನಕಲಿ ಆದೇಶ ಪತ್ರ ಇಟ್ಟುಕೊಂಡು ನಾನು ಫ‌ುಡ್‌ ಚೆಕ್ಕಿಂಗ್‌ ಇನ್ಸ್‌ಪೆಕ್ಟರ್‌ ಎಂದು ಮಾಲೂರು ತಾಲೂಕಿನ ವೆಂಕಟರಾಜನಹಳ್ಳಿ, ತಿಮ್ಮನಾಯಕನಹಳ್ಳಿ, ಜಿನಗತಿಮ್ಮ ನಹಳ್ಳಿ, ನಾಗದೇನಹಳ್ಳಿ ಸೇರಿ ಟೇಕಲ್‌, ಕಸಬಾ, ಲಕ್ಕೂರು, ಮಾಸ್ತಿ ಹೋಬಳಿಯ ಕೆಲವು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೂ ಅಲ್ಲದೆ, ತಾನು ಭೇಟಿ ನೀಡಿದ ಪ್ರತಿ ಕಡೆಯೂ ಸರ್ಕಾರಿ ದಾಖಲೆಯ ಭೇಟಿ ಪುಸ್ತಕದಲ್ಲಿ ತಾನು ಬಂದು ಪರಿಶೀಲಿಸಿದ ಬಗ್ಗೆ ಬರೆದು ಸಹಿ ಹಾಕಿ, ನಕಲಿ ಮೊಹರನ್ನೂ ಹಾಕಿದ್ದಾನೆ ಈ ಭೂಪ.

ತದನಂತರ ಭೇಟಿ ಕೊಟ್ಟಿರುವ ಬಗ್ಗೆ ಮಾಹಿತಿ ಪತ್ರ ಕೂಡ ಅಂಗನವಾಡಿ ಕೇಂದ್ರದ ಮೇಲ್ವಿಚಾರಕರು, ಶಾಲೆ ಮುಖ್ಯೋಪಧ್ಯಾಯರಿಂದ ಪಡೆದಿದ್ದಾನೆ.

ಇದನ್ನೂ ಓದಿ:- ಸಿದ್ಧರಾಮಯ್ಯರನ್ನು ಆಫ್ಘಾನಿಸ್ತಾನಕ್ಕೆ ಕಳುಹಿಸಿ: ಶ್ರೀನಿವಾಸ್ ಪ್ರಸಾದ್

3 ಸಾವಿರ ರೂ. ವಸೂಲಿ: ಅಲ್ಲದೆ, ಹೋದ ಕಡೆ ನಮ್ಮ ಇಲಾಖೆಯಿಂದ ವಸತಿ ಅಭಿವೃದ್ಧಿಗೆ ಎರಡೂವರೆ ಲಕ್ಷ ರೂ. ಕೊಡಿಸುವುದಾಗಿ ನಂಬಿಸಿ ಆಧಾರ್‌, ರೇಷನ್‌ ಕಾರ್ಡ್‌ ಜೆರಾಕ್ಸ್‌ನೊಂದಿಗೆ 2 ರಿಂದ 3 ಸಾವಿರ ರೂ. ಹಣ ವರೆಗೂ ವಸೂಲಿ ಮಾಡಿ ವಂಚಿಸಿರುವ ಬಗ್ಗೆಯೂ ತಿಳಿದು ಬಂದಿದೆ.

ವಾರದಿಂದ ಈ ನಕಲಿ ಅಧಿಕಾರಿ ಬಂಗಾರಪೇಟೆ, ಮಾಲೂರು ತಾಲೂಕಾದ್ಯಂತ ಓಡಾಡುತ್ತಿದ್ದು, ತಾಲೂಕು ಆಡಳಿತ ಏನು ಮಾಡುತ್ತಿದೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಸದಸ್ಯನ ಕೈಗೆ ಸಿಕ್ಕಿಬಿದ್ದ ಚೋರ ಮಾಸ್ತಿ ಹೋಬಳಿಯ ಹಸಾಂಡಹಳ್ಳಿ ಗ್ರಾಪಂ ವ್ಯಾಪ್ತಿಯ ನಟುವರಹಳ್ಳಿಗೆ ಗುರುವಾರ ನಕಲಿ ಅಧಿಕಾರಿ ವೇಣುಗೋಪಾಲಗೌಡ ಬಂದಾಗ ಅಲ್ಲಿನ ಗ್ರಾಪಂ ಸದಸ್ಯರೊಬ್ಬರಿಗೆ ಅನುಮಾನ ಬಂದು ತಕ್ಷಣವೇ ತಾಲೂಕು ಸಿಡಿಪಿಒಗೆ ಫೋನಾಯಿಸಿ ವಿಚಾರಿಸಿದಾಗ ಅವರು ಇಂತಹ ಅಧಿಕಾರಿ ನಮ್ಮ ಇಲಾಖೆಯಲ್ಲಿ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ತಕ್ಷಣವೇ ಗ್ರಾಮಸ್ಥರು ಆತನನ್ನು ಹಿಡಿದು ಮಾಸ್ತಿ ಪೊಲೀಸರ ವಶಕ್ಕೆ ಒಪ್ಪಿಸಿ ನಕಲಿ ಅಧಿಕಾರಿಯ ಮೇಲೆ ಕಾನೂನು ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಮಾಸ್ತಿ ಪೊಲೀಸರು ಆರೋಪಿ ವೇಣುಗೋಪಾಲಗೌಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಶುಕ್ರವಾರ ಕೇಸು ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.