ಕೌಶಲ್ಯಗಳಿಸಿ ತಾಂತ್ರಿಕತೆಯ ಸವಾಲು ಎದುರಿಸಿ


Team Udayavani, May 12, 2019, 11:36 AM IST

kolar-tdy-8..

ಕೋಲಾರದ ಸರ್ಕಾರಿ ಮಹಿಳಾ ಕಾಲೇಜಿನ ವಾರ್ಷಿಕೋತ್ಸವಕ್ಕೆ ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ.ಟಿ.ಡಿ.ಕೆಂಪರಾಜ್‌ ಚಾಲನೆ ನೀಡಿದರು. ಚಿತ್ರನಟ ಕಿಶೋರ್‌ ಇದ್ದರು.

ಕೋಲಾರ: ಗುಣಮಟ್ಟದ ಶಿಕ್ಷಣದ ಜತೆ ಮೌಲ್ಯಗಳನ್ನು ರೂಢಿಸಿಕೊಂಡು ಕೌಶಲ್ಯ ಅಭಿವೃದ್ಧಿಯ ಮೂಲಕ ಆಧುನಿಕತೆ ಮತ್ತು ತಾಂತ್ರಿಕ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಎಂದು ವಿದ್ಯಾರ್ಥಿನಿಯರಿಗೆ ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ.ಟಿ.ಡಿ.ಕೆಂಪರಾಜ್‌ ಸಲಹೆ ನೀಡಿದರು.

ನಗರದ ಮಹಿಳಾ ಕಾಲೇಜು ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಕ್ರೀಡಾ, ಸಾಂಸ್ಕೃತಿಕ, ಶೈಕ್ಷಣಿಕ ಸಾಧಕರನ್ನು ಪುರಸ್ಕರಿಸಿ ಮಾತನಾಡಿ, ಶಿಕ್ಷಣದಲ್ಲಿ ಆಧುನಿಕತೆ, ತಾಂತ್ರಿಕತೆ ಅಳವಡಿಕೆಯಾಗುತ್ತಿದ್ದು, ಬದಲಾದ ಕಾಲಕ್ಕೆ ತಕ್ಕಂತೆ ಮನೆಯಲ್ಲೇ ಕುಳಿತು ಪರೀಕ್ಷೆ ಬರೆಯುವ ಕಾಲವೂ ಬರಬಹುದು. ಅದಕ್ಕೂ ನೀವು ಸಿದ್ಧರಾಗಬೇಕು ಎಂದರು.

ವಿಶ್ವ ಭಾರತದ ಕಡೆ ನೋಡುತ್ತಿದೆ. 2025ರ ವೇಳೆಗೆ 18ರಿಂದ 28 ವರ್ಷ ವಯೋಮಿತಿಯುಳ್ಳ ಯುವ ಜನತೆ ಶೇ.56 ಆಗಲಿದೆ. ವಿಶ್ವದ ಯಾವ ರಾಷ್ಟ್ರದಲ್ಲೂ ಯುವ ಸಂಪತ್ತು ಈ ಪ್ರಮಾಣದಲ್ಲಿ ಇಲ್ಲ. ದೇಶದ ಯುವಸಂಪತ್ತಿಗೆ ಬಲನೀಡಲು ಗುಣಮಟ್ಟದ ಶಿಕ್ಷಣ, ಕೌಶಲ ಒದಗಿಸುವುದು ಶಾಲಾ ಕಾಲೇಜು, ವಿಶ್ವವಿದ್ಯಾಲಯಗಳ ಜವಾಬ್ದಾರಿ ಎಂದು ಹೇಳಿದರು.

ಒಳ್ಳೆಯ ತಾಯಿಯಾಗಿ: ಚಲನ ಚಿತ್ರ ನಟ ಜಿ.ಕಿಶೋರ್‌ ಕುಮಾರ್‌ ಮಾತನಾಡಿ, ಹೆಣ್ಣು ಮಕ್ಕಳು ಈ ಸಮಾಜಕ್ಕೆ ಮಾದರಿಯಾಗಿದ್ದಾರೆ. ಯಾವುದೇ ರಂಗದಲ್ಲೂ ತಾವೇ ಮುಂದು ಎಂದು ಸಾಬೀತು ಮಾಡುತ್ತಿದ್ದಾರೆ. ನಿಮ್ಮಲ್ಲಿನ ಛಲ, ಕೌಶಲ್ಯ, ಕಲಿಕಾಸಕ್ತಿಗೆ ಸಾಟಿಯಿಲ್ಲ ಎಂದ ಅವರು, ನೀವು ಜೀವನದಲ್ಲಿ ಒಳ್ಳೆಯ ತಾಯಿಯಾಗಿ ಸಮಾಜಕ್ಕೆ ಕೊಡುಗೆ ನೀಡಿ ಎಂದರು.

ಕೊಡುಗೆ ನೀಡಿ: ರಾಷ್ಟ್ರೀಯ ಬಾಸ್ಕೆಟ್ಬಾಲ್ ಪಟು ಸಿ.ಮಹಾನಂದ್‌, ಒಂದು ಮಗುವನ್ನು ಅಮ್ಮ ಮಾತ್ರ ದಾರಿಗೆ ತರಬಲ್ಲಳು, ಆ ಮಗುವಿನ ಭವಿಷ್ಯ ರೂಪಿಸಬಲ್ಲಳು, ಆಕೆ ಮಾತ್ರವೇ ದೈವವಾಗಿ ಸಮಾಜ, ದೇಶಕ್ಕೆ ಕೊಡುಗೆ ನೀಡಲು ಸಾಧ್ಯ ಎಂದರು.

ಪ್ರೊ.ರಾಜೇಂದ್ರ ಮಾತನಾಡಿ, ಸರ್ಕಾರಿ ಕಾಲೇಜು ಎಂಬ ಕೀಳರಿಮೆ ಇಲ್ಲ. ಹೋಂಡಾ ಕಂಪನಿ ನೀಡಿರುವ ಆಡಿಟೋರಿಯಂ, ಮಹೀಂದ್ರ ಕಂಪನಿ ನೀಡಿರುವ ಶೌಚಾಲಯ, ಮತ್ತಿತರ ಸೌಲಭ್ಯಗಳಿಗೆ ಧನ್ಯವಾದ ಸಲ್ಲಿಸಿದರು.

ಉತ್ತಮ ಸಹಕಾರ: ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪಂಡಿತ್‌ ಮುನಿವೆಂಕಟಪ್ಪ, ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕರು, ಸಚಿವರಿಗೂ ಮನವಿ ಮಾಡಿದ್ದೇವೆ ಎಂದರು.

ಪ್ರೊ.ಅಶ್ವತ್ಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜು ನಾಲ್ಕೈದು ವರ್ಷಗಳಿಂದ ಸತತ ಪದವಿಯಲ್ಲಿ ರ್‍ಯಾಂಕ್‌ ಪಡೆಯುತ್ತಿದೆ. ಹಲವು ವಿದ್ಯಾರ್ಥಿಗಳು ಚಿನ್ನದ ಪದಕಕ್ಕೂ ಭಾಜನರಾಗಿದ್ದಾರೆ ಎಂದರು. ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕವಾಗಿ ಸಾಧನೆ ಮಾಡಿದವರಿಗೆ ಬಹುಮಾನ ವಿತರಿಸಲಾಯಿತು. ಹೇಮಮಾಲಿನಿ ನಿರೂಪಿಸಿ, ಶ್ರೀವಿದ್ಯಾ, ಜೀವಿತಾ ಪ್ರಾರ್ಥಿಸಿ, ಬೃಂದಾ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಅಶೋಕ್‌, ವಿಜಯಕುಮಾರ್‌, ಸೀನಾನಾಯಕ್‌, ರವೀಂದ್ರ, ಶಿವಪ್ಪ, ಅಮರನಾರಾಯಣ, ಸುನೀಲ್, ಸೀನಪ್ಪ, ಮಂಜುನಾಥ್‌ ಉಪಸ್ಥಿತರಿದ್ದು, ಎನ್‌.ಎಲ್.ವಿಜಯ ವಂದಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDP ಮುಖಂಡನ ಹತ್ಯೆಗೆ ನೆರವು: ಇಬ್ಬರು ಪೊಲೀಸರ ಅಮಾನತು

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

14-bng

Kolar: 1.25 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಪತ್ತೆ

CM-Dineh

Eagles Eye: ಭ್ರೂಣಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ನಿಗಾ: ದಿನೇಶ್‌

Benga-Club

Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.