ರಸ್ತೆ ದುರಸ್ತಿಪಡಿಸುವಲ್ಲಿ ವಿಫ‌ಲ


Team Udayavani, Sep 15, 2019, 1:08 PM IST

KOLAR-TDY-2

ಕೋಲಾರ: ನಗರದ ರಸ್ತೆ ದುರಸ್ತಿ ಪಡಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫ‌ಲವಾಗಿರುವ ಕ್ಷೇತ್ರದ ಶಾಸಕ ಕೆ.ಶ್ರೀನಿವಾಸಗೌಡರ ಜನ ವಿರೋಧಿ ಧೋರಣೆ ಖಂಡಿಸಿ ರೈತ ಸಂಘದಿಂದ ಶಾಸಕರ ಮನೆ ಮುಂದೆ ಪ್ರತಿಭಟಿಸಲಾಯಿತು.

ಹೋರಾಟದ ನೇತೃತ್ವ ವಹಿಸಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಜನರಿಂದ ಆಯ್ಕೆಯಾಗಿ ಜನರ ಮಧ್ಯೆಯಿದ್ದು, ಜ್ವಲಂತ ಸಮಸ್ಯೆ ಬಗೆಹರಿಸಬೇಕಾದ ಶಾಸಕರು ಕಾಣೆಯಾಗಿದ್ದಾರೆ. ಹುಡುಕಿಕೊಡಿ ಇಲ್ಲವೇ ಶಾಸಕರೇ ಎಲ್ಲೀದ್ದೀರಾ ಎಂದು ಮತ ಹಾಕಿದ ಕ್ಷೇತ್ರದ ಜನರು, ಕೇಳುವಂತಹ ಪರಿಸ್ಥಿತಿ ಇದೆ. ತಮ್ಮ ನಿವಾಸದ ರಸ್ತೆಗಳೇ ಸಂಪೂ ರ್ಣವಾಗಿ ಹದಗೆಡುವ ಜೊತೆಗೆ ನಗರ ಧೂಳಿನ ನಗರವಾಗಿದೆ. ಜೊತೆಗೆ ನಗರದ ರಸ್ತೆಗಳು ವಾಹನ ಸವಾರರಿಗೆ ಮೃತ್ಯು ಕೂಪಗ ಳಾಗುವ ಜೊತೆಗೆ ಅಪಘಾತಗಳಾಗಿ ಕೈಕಾಲು ಮುರಿದುಕೊಂಡು ಶಾಶ್ವತವಾಗಿ ಅಂಗವಿಕಲರಾಗುತ್ತಿದ್ದಾರೆಂದು ದೂರಿದರು.

ಕ್ಷೇತ್ರಾದ್ಯಂತ ನಡೆಯುತ್ತಿರುವ ಚೆಕ್‌ಡ್ಯಾಂ, ರಸ್ತೆಗಳ ಗುಣಮಟ್ಟವನ್ನು ಪ್ರಶ್ನೆ ಮಾಡುವಂತಿಲ್ಲದಾಗಿದೆ. ಇನ್ನೂ ಬೇರೆ ಇಲಾಖೆಗಳನ್ನು ಶಾಸಕರ ಹಿಂಬಾಲಕರು ವಿಭಾಗ ಮಾಡಿಕೊಂಡಿದ್ದಾರೆಂದು ಆರೋಪ ಮಾಡಿದರು.

ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿ ಮಾತನಾಡಿ, ನಗರದ ಕುಡಿಯುವ ನೀರಿನ ಕೆರೆಯಾದ ಅಮ್ಮೇರಹಳ್ಳಿ ಕೆರೆ ಹಾಗೂ ಕ್ಷೇತ್ರಾದ್ಯಂತ ಶಾಸಕರ ಹೆಸರೇಳಿಕೊಂಡು ರಾಜಾರೋಷವಾಗಿ ಆಕ್ರಮ ಮರಳುಗಾರಿಕೆ ನಡೆಯುತ್ತಿದೆ. ಇಷ್ಟೆಲ್ಲಾ ಅವ್ಯವಸ್ಥೆ ಕ್ಷೇತ್ರದಲ್ಲಿದ್ದರೂ ಮತ ಪಡೆದು ಅಧಿಕಾರ ಹಿಡಿದಿರುವ ಶಾಸಕರು ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಕೆ.ಶ್ರೀನಿವಾಸಗೌಡ, ಕ್ಷೇತ್ರವನ್ನು ನಾನು ಮರೆತಿಲ್ಲ, ಹತ್ತು ವರ್ಷ ನನ್ನನ್ನು ಹಿಂದಕ್ಕೆ ಹಾಕಿದ್ದೀರಿ, ಆದರೆ, ಈಗ ಅವಕಾಶ ಸಿಕ್ಕಿದೆ. ಆಡಳಿತ ಪಕ್ಷ ನಮಗೆ ಸ್ಪಂದಿಸುತ್ತಿಲ್ಲ. ಅಭಿವೃದ್ಧಿಗೆ ಬೇಕಾದ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ. ಜೊತೆಗೆ ಸರ್ಕಾರಿ ಇಲಾಖೆಗಳಲ್ಲಿ ಜನ ಸಾಮಾನ್ಯರ ಕೆಲಸ ಮಾಡಲು ಅಧಿಕಾರಿಗಳು ಹಣ ಹಾಗೂ ದಲ್ಲಾಳಿಗಳ ಹಾವಳಿಯಿರುವುದು ನನ್ನ ಗಮನಕ್ಕೂ ಬಂದಿದೆ ಎಂದರು. ಮಾರುಕಟ್ಟೆ ಜಾಗದ ಸಮಸ್ಯೆ ಒಂದು ತಿಂಗಳಲ್ಲಿ ಬಗೆಹರಿಸುವ ಜೊತೆಗೆ ಕಾಮಗಾರಿಗಳಲ್ಲಿನ ಕಳಪೆ ಗುಣಮಟ್ಟದ ಬಗ್ಗೆ ಸೂಕ್ತ ಅಧಿಕಾರಿಗಳಿಂದ ವರದಿ ತರಿಸಿಕೊಳ್ಳುವ ಜೊತೆಗೆ ನಾನೇ ಖುದ್ದಾಗಿ ಪರಿಶೀಲನೆ ಮಾಡುತ್ತೇನೆ. ನಗರದ ರಸ್ತೆಗಳ ಅವ್ಯವಸ್ಥೆ ಸರಿಪಡಿಸುವ ಭರವಸೆಯನ್ನು ನೀಡಿದರು.

ಹೋರಾಟದಲ್ಲಿ ರೈತ ಸಂಘದ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಈಕಂಬಳ್ಳಿ ಮಂಜುನಾಥ್‌, ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್‌, ಮಂಗಸಂದ್ರ ನಾಗೇಶ್‌, ತಿಮ್ಮಣ್ಣ, ವೆಂಕಟೇಶಪ್ಪ, ಸಹದೇವಪ್ಪ, ಮೂರ್ತಿ, ಪುರುಷೋತ್ತಮ್‌, ಕೊಮ್ಮರಹಳ್ಳಿ ನವೀನ್‌, ಸುಪ್ರೀಂಚಲ, ನಲ್ಲಾಂಡಹಳ್ಳಿ ಕೇಶವ, ಶಿವು, ಸಾಗರ್‌, ನವೀನ್‌, ಮೀಸೆ ವೆಂಕಟೇಶಪ್ಪ, ತೆರ್ನಹಳ್ಳಿ ಆಂಜಿನಪ್ಪ, ಚಂದ್ರಪ್ಪ, ಕ್ಯಾಸಂಬಳ್ಳಿ ಪ್ರತಾಪ್‌, ಪ್ರಕಾಶ್‌, ಪುತ್ತೇರಿ ರಾಜು ಇದ್ದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.