ನೇಗಿಲು ಭೂಮಿಗಿಳಿಸಿದ ಅನ್ನದಾತ

ತಾಲೂಕಿನಲ್ಲಿ ಸುರಿದ ಸಾಧಾರಣ ಮಳೆ • ಭೂಮಿ ಹದ ಮಾಡಲು ರೈತರು ಸಜ್ಜು

Team Udayavani, Apr 26, 2019, 2:42 PM IST

kolar-3-tdy..

ಎಂ.ರವಿಕುಮಾರ್‌

ಮಾಲೂರು: ತಾಲೂಕಿನ ಹಲವೆಡೆ ಮುಂಗಾರು ಪೂರ್ವ ಮಳೆ ಸಾಧಾರಣವಾಗಿ ಸುರಿದಿದ್ದು, ಕೆಲವು ರೈತರು ಮುಂಗಡವಾಗಿಯೇ ಭೂಮಿ ಹದ ಮಾಡಲು ಮುಂದಾಗಿದ್ದಾರೆ.

ತಾಲೂಕಿನ ಮಾಸ್ತಿ ಹೋಬಳಿಯಲ್ಲಿ 12.2 ಮಿ.ಮೀ., ಮಾಲೂರು ಪಟ್ಟಣ 3.2 ಮಿ.ಮೀ., ಟೇಕಲ್ನಲ್ಲಿ 25 ಮಿ.ಮೀ., ಲಕ್ಕೂರು 6 ಮಿ.ಮೀ. ಮಳೆಯಾಗಿದೆ. ಟೇಕಲ್ನ ಕೆಲವು ಭಾಗದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಇದರಿಂದ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ.

ರಣ ಬಿಸಿಲಿಗೆ ಬೆಂದಿದ್ದ ಭೂಮಿ ತಂಪಾಗಿದೆ. ರೈತರ ಮೊಗದಲ್ಲೂ ಸಂತಸ ತರಿಸಿದೆ. ತಾಲೂಕಿನ ಮಾಸ್ತಿ, ಲಕ್ಕೂರು ಮತ್ತು ಚಿಕ್ಕತಿರುಪತಿ ಅಸುಪಾಸಿನಲ್ಲಿ ಮೂರು ನಾಲ್ಕು ದಿನಗಳಿಂದ ಸಾಧಾರಣ ಮಳೆಯಾದ್ದರಿಂದ ರೈತರು ಕೃಷಿಯತ್ತ ಮುಖಮಾಡುತ್ತಿದ್ದಾರೆ. ಎತ್ತುಗಳನ್ನು ಹೊಂದಿರುವ ರೈತರು ಸುಗ್ಗಿ ನಂತರ ಮೂಲೆ ಸೇರಿದ್ದ ನೇಗಿಲು, ಕೃಷಿ ಸಲಕರಣೆಗಳನ್ನು ಸರಿಪಡಿಸಿಕೊಂಡು ಉಳುಮೆಗೆ ಅಣಿಯಾಗುತ್ತಿದ್ದರೆ, ಇನ್ನು ಎತ್ತುಗಳಿಲ್ಲದ ರೈತರು, ಟ್ರ್ಯಾಕ್ಟರ್‌ಗಳಲ್ಲಿ ಗೇಯ್ಮೆ ಮಾಡಿಸಲು ಮುಂದಾಗಿದ್ದಾರೆ.

ಟ್ರ್ಯಾಕ್ಟರ್‌ನಲ್ಲಿ ಮೊದಲ ಉಳುಮೆ: ಮೊದಲ ಉಳುಮೆ ಟ್ರ್ಯಾಕ್ಟರ್‌ನಲ್ಲಿ ಮಾಡಿಸಿದರೆ, ಸಾಲುಗಳು ಆಳ ಮತ್ತು ಅಗಲವಾಗಿ ಬೀಳುವುದರಿಂದ ಮುಂದಿನ ದಿನಗಳಲ್ಲಿ ಕಡಿಮೆ ಮಳೆಯಾದ್ರೂ ಉಳುಮೆ ಮಾಡಲು ಅನುಕೂಲವಾಗುತ್ತದೆ ಹಾಗೂ ನೆಲವು ಹೆಚ್ಚು ನೀರು ಹಿಡಿದಿಟ್ಟುಕೊಳ್ಳುತ್ತದೆ. ಮುಂದೆ ಮಳೆ ಸ್ವಲ್ಪ ತಡವಾಗಿ ಬಂದ್ರೂ ಬೆಳೆಗಳು ಬೇಗ ಒಣಗುವುದಿಲ್ಲ. ಹೀಗಾಗಿ ಮೊದಲ ಉಳುಮೆ ರೈತರು ಟ್ರ್ಯಾಕ್ಟರ್‌ಗಳಲ್ಲಿ ಮಾಡಿಸುತ್ತಾರೆ. ತಾಲೂಕಿನ ಬಹುಪಾಲು ರೈತರು ಪ್ರಥಮ ಉಳುಮೆಗಾಗಿ ಟ್ರ್ಯಾಕ್ಟರ್‌ ಅವಲಂಬಿಸಿರುವ ಕಾರಣ ಬೇಡಿಕೆ ಹೆಚ್ಚುತ್ತಿದೆ. ತಾಲೂಕಿನ ಮಾಸ್ತಿ ಸುತ್ತಮುತ್ತಲಿನ ರೈತರಿಗೆ ಶ್ರೀಕ್ಷೇತ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಬಾಡಿಗೆ ಆಧಾರದಲ್ಲಿ ಕೃಷಿ ಉಪಕರಣ ಒದಗಿಸುತ್ತಿರುವುದು ಈ ಭಾಗದ ರೈತರಿಗೆ ಹೆಚ್ಚು ವರದಾನವಾಗಿದೆ. ಉಳಿದಂತೆ ಲಕ್ಕೂರು, ಟೇಕಲ್ ಮತ್ತು ಕಸಬಾ ಹೋಬಳಿಗಳಲ್ಲಿ ಖಾಸಗಿ ಟ್ರ್ಯಾಕ್ಟರ್‌ಗಳನ್ನೇ ಅವಲಂಬಿಸಬೇಕಾಗಿದೆ.

ಮಳೆ ಆಶ್ರಿತ ಬೇಸಾಯ: ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟ ಕಾರಣ ಇದ್ದ ಬೋರ್‌ವೆಲ್ಗಳೂ ಬತ್ತಿಹೋಗಿವೆ. ಸಾಲ ಮಾಡಿ ಹೊಸದಾಗಿ 1750 ಅಡಿ ಕೊರೆಸಿದರೂ ನೀರು ಸಿಗುತ್ತಿಲ್ಲ. ಹೀಗಾಗಿ ತೋಟಗಾರಿಕೆ ಬೆಳೆ ಕೈಬಿಟ್ಟ ರೈತರು, ಪ್ರಸ್ತುತ ಬೀಳುತ್ತಿರುವ ಅಲ್ಪ ಸ್ವಲ್ಪ ಮಳೆಯಿಂದ ಬೀಡು ತೋಟಗಳನ್ನು ಉಳಮೆ ಮಾಡಿ ಮಳೆ ಅಶ್ರಿತ ಬೆಳೆ ಬೆಳೆಯಲು ಮುಂದಾಗಿದ್ದಾರೆ.

ಈ ಬಾರಿ ತಾಲೂಕಿನಲ್ಲಿ ಕೃಷಿ ಭೂಮಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಸರ್ಕಾರ ನೀಲಗಿರಿ ನಿಷೇಧಿಸಿರುವುದರ ಜೊತೆಗೆ ಬೆಲೆಯೂ ಕಡಿಮೆಯಾದ್ದರಿಂದ ರೈತರು ಹತ್ತಾರು ವರ್ಷಗಳಿಂದ ಎಕರೆಗಟ್ಟಲೆ ಬೆಳೆದಿದ್ದ ನೀಲಗಿರಿ ತೆಗೆದು ಮಾವು, ಸಪೋಟ, ಸೀಬೆ ಹೀಗೆ ಹಣ್ಣಿನ ಬೇಸಾಯಕ್ಕೆ ಮುಂದಾಗುತ್ತಿದ್ದರೆ, ನೀರಿನ ಅನುಕೂಲವಿಲ್ಲದ ರೈತರು ಮಳೆ ಆಶ್ರಿತ ಬೇಸಾಯದಲ್ಲಿ ನಿರತರಾಗಿದ್ದಾರೆ.

ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯು ತಾಲೂಕಿನ ಲಕ್ಕೂರು, ಮಾಸ್ತಿ, ಚಿಕ್ಕತಿರುಪತಿ ಭಾಗದಲ್ಲಿ ಉತ್ತಮವಾಗಿ ಬಿದ್ದಿದ್ದು, ಕಸಬಾ ಹೋಬಳಿಯ ಕೆಲವು ಪ್ರದೇಶಗಳಲ್ಲಿ ಸಾಧಾರಣವಾಗಿ, ಮಾಲೂರು ಪಟ್ಟಣದಲ್ಲಿ ಆಶಾದಾಯಕ ಮಳೆಯಾ ಗಿದೆ. ಇದರಿಂದ ಭೂಮಿ ತಂಪಾಗಿ ಬಿಸಿಲಿನ ಝಳ ಮತ್ತು ಧೂಳಿನಿಂದ ಸಾರ್ವಜನಿಕರಿಗೆ ಮುಕ್ತಿ ಸಿಕ್ಕಿದೆ.

ಎಳ್ಳು, ತೊಗರಿ ಬೇಸಾಯಕ್ಕೆ ಸಿದ್ಧತೆ:

ತಾಲೂಕಿನ ಮಾಸ್ತಿ ಹೋಬಳಿಯ ಕೆಲವು ರೈತರು ಅಶ್ವಿ‌ನಿ ಮಳೆಯಲ್ಲಿ ಹೊಲ ಉಳಮೆ ಮಾಡಿ, ಭರಣಿ ಮಳೆಯಲ್ಲಿ ಎಳ್ಳು ಬೇಸಾಯ ಮಾಡುತ್ತಾರೆ. ಕೆಲವು ರೈತರು ಈ ವೇಳೆ ಉಳಮೆ ಅರಂಭಿಸಿ ಮುಂದಿನ ಭರಣಿ, ಕೃತಿಕಾ ಮಳೆಗಳಲ್ಲಿ ತೊಗರಿ, ನೆಲಗಡಲೆ ಮತ್ತಿತರ ದ್ವಿದಳ ಧಾನ್ಯಗಳ ಬಿತ್ತನೆ ಮಾಡುವುದರಿಂದ ಪ್ರಸ್ತುತ ಸುರಿದ ಮಳೆಯು ರೈತರ ಪಾಲಿಗೆ ವರದಾನವಾಗಿದೆ. ಮಾಸ್ತಿ, ಚಿಕ್ಕ ಇಗ್ಗಲೂರು, ದೊಡ್ಡ ಇಗ್ಗಲೂರು, ಬಾಳಿಗಾನಹಳ್ಳ ಲಕ್ಕೂರು ಹೋಬಳಿಯ ಮಿಣಸಂದ್ರ ತಾಳಕುಂಟೆ, ಕುಡಿಯನೂರು ಮತ್ತಿತರ ಕಡೆಗಳಲ್ಲಿ ಕೃಷಿ ಚುಟುವಟಿಕೆ ಭರದಿಂದ ನಡೆಯುತ್ತಿದೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.