ಸ್ಥಳೀಯ ಶಾಸಕರಿಗೆ ಜಿಲ್ಲೆಯ ಉಸ್ತುವಾರಿ ನೀಡಿ


Team Udayavani, May 21, 2023, 4:48 PM IST

ಸ್ಥಳೀಯ ಶಾಸಕರಿಗೆ ಜಿಲ್ಲೆಯ ಉಸ್ತುವಾರಿ ನೀಡಿ

ಕೋಲಾರ: ಬೆಂಗಳೂರಿಗೆ ಕೂಗಳತೆ ದೂರದಲ್ಲಿ ರುವ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ಜತೆಗೆ ಸ್ಥಳೀಯ ಶಾಸಕರನ್ನು ಉಸ್ತುವಾರಿ ಸಚಿವರನ್ನಾಗಿ ಆಯ್ಕೆ ಮಾಡಬೇಕೆಂದು ಮುಖ್ಯ ಮಂತ್ರಿಗಳಿಗೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮನವಿ ಮಾಡಿದರು.

ತಾಲೂಕಿನ ಮಂಗಸಂದ್ರ ಪ್ರಗತಿಪರ ರೈತ ವೆಂಕಟೇಶಪ್ಪನವರ ತೋಟದಲ್ಲಿ ನಡೆದ ರೈತ ಸಂಘದ ಸಭೆಯಲ್ಲಿ ಮಾತನಾಡಿ, ಹತ್ತಾರು ವರ್ಷಗಳಿಂದ ಜಿಲ್ಲೆಯ ಸ್ಥಳೀಯರಿಗೆ ಉಸ್ತುವಾರಿ ಸಿಕ್ಕಿಲ್ಲ. ದೇಶಕ್ಕೆ ಹಾಲು ಹಣ್ಣು, ತರಕಾರಿ ನೀಡುವ ಸ್ವಾಭಿಮಾನಿ ರೈತರ ಸಮಸ್ಯೆಗಳು ಸಮಸ್ಯೆಗಳಾಗಿಯೇ ಉಳಿದಿವೆ. ಕೃಷಿ ಆಧಾರಿತ ಕೈಗಾರಿಕೆಗಳು ಮಾವು ಸಂಸ್ಕರಣಾ ಘಟಕಗಳಿಗೆ ಆದ್ಯತೆ ಸೇರಿದಂತೆ ರೈತರ ಸಮಸ್ಯೆಗಳಿಗೆ ನೂತನ ಸರ್ಕಾರ ಸ್ಪಂದಿಸಲಿದೆ ಎನ್ನುವ ನೀರಿಕ್ಷೆಯಲ್ಲಿ ಜಿಲ್ಲೆಯ ಜನರಿದ್ದಾರೆ ಎಂದರು. ಮಹಿಳಾ ರೈತ ಸಂಘದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, 6 ಜನ ಶಾಸಕರ ಮೇಲೆ ಜಿಲ್ಲೆಯ 6 ಕ್ಷೇತ್ರದ ಅಭಿವೃದ್ಧಿ ಎಂಬುದು ಹೆಗಲ ಮೇಲೆ ನಿರೀಕ್ಷೆಗಳ ಮಹಾಪೂರವಿದೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಒತ್ತಾಯಿಸಿದರು.

ದಲ್ಲಾಳಿಗಳ ಹಾವಳಿ ನಿಯಂತ್ರಿಸಿ: ನಗರದ ಮಾರುಕಟ್ಟೆಯ ಜಾಗದ ಸಮಸ್ಯೆ, ನಕಲಿ ಔಷಧ , ಬಿತ್ತನೆ ಬೀಜ, ರಸಗೊಬ್ಬರಗಳ ನಿಯಂತ್ರಣ ಜತೆಗೆ ಸರ್ಕಾರಿ ಶಾಲೆ ಆಸ್ಪತ್ರೆ ಅಭಿವೃದ್ಧಿ, ಖಾಸಗಿಗಳ ಶಾಲೆಗಳ ಡೊನೇಷನ್‌ ಹಾವಳಿ, ಸರ್ಕಾರಿ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿಯಿಂದ ಜನಸಾಮಾನ್ಯರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಜವಬ್ದಾರಿ ಕೋಲಾರ ಶಾಸಕರ ಮೇಲಿದೆ. ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮಾವು ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವ ಜತೆಗೆ ಕಾರ್ಮಿಕರ ರಕ್ಷಣೆ, ಕಮಿಷನ್‌ ಹಾವಳಿಯಿಂದ ರೈತರ ರಕ್ಷಣೆಗೆ ಆದ್ಯತೆ ನೀಡಬೇಕು. ಮಾಲೂರು ಶಾಸಕ ಕೆ.ವೈ.ನಂಜೇಗೌಡರು ಸರ್ಕಾರಿ ಗೋಮಾಳ, ಗುಂಡುತೋಪು, ಕೆರೆ ರಾಜಕಾಲುವೆಗಳ ಮೇಲೆ ಆಕ್ರಮ ಗಣಿಗಾರಿಕೆ ನಿಷೇಧಿಸುವ ಮೂಲಕ ಜನರ ಆರೋಗ್ಯ ರೈತರ ಬೆಳೆ ರಕ್ಷಣೆ ಮಾಡಬೇಕಾದ ಜವಬ್ದಾರಿ ಇದೆ.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ: ಬಂಗಾರಪೇಟೆ ಶಾಸಕ ಎಸ್‌.ಎನ್‌ ನಾರಾಯಣಸ್ವಾಮಿ ಗಡಿಭಾಗದ ರೈತರ ನಿದ್ದೆಗೆಡಿಸುವ ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ನೀಡಬೇಕು. ಯರ್‌ಗೊಳ್‌ ಉದ್ಘಾಟನೆಗೆ ಮಾನ್ಯತೆ ನೀಡಿ ಕುಡಿಯುವ ನೀರು ಸರಬರಾಜು ಮಾಡುವ ಜವಾಬ್ದಾರಿ ಇದೆ. ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್‌ ಸರ್ಕಾರಿ ಆಸ್ತಿ ಉಳಿಸುವ ಜತೆಗೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ವಡ್ಡಹಳ್ಳಿ ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯಗಳಿಗೆ ಅದ್ಯತೆ ನೀಡಬೇಕು. ಕೆಜಿಎಫ್ ಶಾಸಕ ರೂಪ ಶಶಿಧರ್‌ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಧ್ವನಿ ಎತ್ತಬೇಕು. ಕೈಗಾರಿಕೆಗಳಿಗೆ ಆದ್ಯತೆ ನೀಡಿ ಉದ್ಯೋಗ ಸೃಷ್ಟಿಸುವಂತೆ ಶಾಸಕರು ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕೆ‌ಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್‌, ಮಂಗಸಂದ್ರ ತಿಮ್ಮಣ್ಣ, ಶೆ„ಲಜ, ಚೌಡಮ್ಮ, ರತ್ನಮ್ಮ, ವೆಂಕಟಮ್ಮ, ಲಕ್ಷ್ಮಮ್ಮ, ಶಾರದ, ನೇತ್ರ, ವೆಂಕಟೇಶಪ್ಪ, ಮುಂತಾದವರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.