ಪದವಿ ಕಾಲೇಜು ವಿದ್ಯಾರ್ಥಿನಿ ಈಗ ಪುರಸಭೆ ಸದಸ್ಯೆ

ಜನಸೇವೆ ಜೊತೆಗೆ ವಕೀಲರಾಗುವ ಬಯಕೆ

Team Udayavani, Jun 1, 2019, 10:49 AM IST

kolar-tdy-2..

ಮಾಲೂರು ವಾರ್ಡ್‌ ಸಂಖ್ಯೆ 27ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಯ ಸಾಧಿಸಿದ ಬಿ.ಎ.ವಿದ್ಯಾರ್ಥಿನಿ ಸುಮಿತ್ರಾ ಅವರನ್ನು ಮುಖಂಡರು ಅಭಿನಂದಿಸಿದರು.

ಮಾಲೂರು: ಪುರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ವಿದ್ಯಾಭ್ಯಾಸದ ದಿನಗಳಲ್ಲಿಯೇ 19ರ ಕಾಲೇಜು ಪೋರಿಯೊಬ್ಬಳು ರಾಜಕೀಯಕ್ಕೆ ಇಳಿದು ಅಚ್ಚರಿ ಮೂಡಿಸಿದ್ದಾಳೆ.

ಪಟ್ಟಣದ ವಾರ್ಡ್‌ ಸಂಖ್ಯೆ 27ರ ಸಾಮಾನ್ಯ ಮಹಿಳಾ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು, ಜಯ ಸಾಧಿಸಿರುವ ಪಿ.ಸುಮಿತ್ರಾ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿ. ಕಳೆದ ಅವಧಿಯಲ್ಲಿ ತನ್ನ ತಂದೆ ಪಚ್ಚಪ್ಪ ಇದೇ ವಾರ್ಡ್‌ ನಿಂದ ಜೆಡಿಎಸ್‌ ಸದಸ್ಯರಾಗಿದ್ದರು. ಈ ಬಾರಿ ಮೀಸಲಾತಿ ಬದಲಾವಣೆಯಿಂದ ತಂದೆಯ ಶಿಫಾ ರಸ್ಸಿನಿಂದ ಸಿಕ್ಕ ಅವಕಾಶ ಬಳಸಿಕೊಂಡ ಸುಮಿತ್ರಾ 393 ಮತ ಪಡೆದು ಗೆಲುವು ಸಾಧಿಸಿದ್ದಾರೆ.

ವಕೀಲರಾಗುವ ಆಸೆ: ಈ ವೇಳೆಯಲ್ಲಿ ಉದಯವಾಣಿಯೊಂದಿಗೆ ಮಾತನಾಡಿದ ಪಿ.ಸುಮಿತ್ರಾ, ರಾಜಕಾರಣಕ್ಕೆ ಬರುವ ಬಗ್ಗೆ ಕನಸು ಮನಸ್ಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಪದವಿಯ ನಂತರ ಕಾನೂನು ಪದವಿಯನ್ನು ಪಡೆದು ವಕೀಲಿ ವೃತ್ತಿಯನ್ನು ಆರಂಭಿಸುವ ಮಹತ್ವದ ಕನಸ್ಸು ಹೊಂದಿದ್ದೇನೆ. ಕಾಲೇಜಿನಿಂದ ಮನೆಗೆ ಬರುವ ವೇಳೆಗೆ ತಂದೆಯವರ ಮಾತಿಗೆ ಮರು ಮಾತನಾಡದೆ ಬಿಜೆಪಿ ಬಿ ಫಾರಂನೊಂದಿಗೆ ಚುನಾವಣೆಗೆ ಸ್ಪರ್ಧಿಸಿದೆ ಎಂದು ಹೇಳಿದರು.

ಕಳೆದ ಐದು ವರ್ಷಗಳಲ್ಲಿ ತಂದೆಯವರು ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಪ್ರಭಾವಿತರಾದ ಇಂದಿರಾ ನಗರದ ವಾಸಿಗಳು ತಮ್ಮ ಮೇಲೆ ವಿಶ್ವಾಸವಿಟ್ಟು ಚುನಾವಣೆಯಲ್ಲಿ ಅಧಿಕ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ಅವರ ಅಶೋತ್ತರಗಳಿಗೆ ಚ್ಯುತಿಯಾಗದಂತೆ ಅಭಿವೃದ್ಧಿ ಮಾಡುತ್ತೇನೆ. ಜನಸೇವೆಗೆ ಸಿಕ್ಕ ಅವಕಾಶ ಬಳಕೆ ಮಾಡಿಕೊಳ್ಳುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಪುರಸಭಾ ಸಾಮಾನ್ಯ ಸಭೆಗಳಲ್ಲಿ ಮಹಿಳಾ ಸದಸ್ಯರು ಮಾತನಾಡುವುದಿಲ್ಲ ಎಂಬ ಮಾತಿದೆ. ಈ ಬಗ್ಗೆ ಸುಮಿತ್ರಾ ಅಭಿಪ್ರಾಯ ಸಂಗ್ರಹಿಸಿದಾಗ, ಮುಂದಿನ ಸಭೆಗಳಲ್ಲಿ ಗಮನಿಸಿ ಸಭೆಗಳಲ್ಲಿ ಗಂಭೀರವಾಗಿ ಚರ್ಚಿಸಿ ನನ್ನ ಜನತೆಗೆ ಬೇಕಾಗಿರುವ ಸೌಲಭ್ಯ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆಯಲ್ಲಿ ಮಾಜಿ ಸದಸ್ಯ ಪಚ್ಚಪ್ಪ ಮಾತನಾಡಿ, ಕ್ಷೇತ್ರದ ಜನರು ಮತ್ತು ಮುಖಂಡರ ಒತ್ತಾಯದ ಮೇರೆಗೆ ಕಿರಿಯ ಪುತ್ರಿ ಸುಮಿತ್ರಾ ಅವರನ್ನು ಕಣಕ್ಕೆ ಇಳಿಸಿದ್ದೆ. ಕಾಲೇಜು ವಿದ್ಯಾರ್ಥಿನಿಯಾದ್ರೂ ಜನರು ಹೆಚ್ಚಿನ ಮತ ನೀಡಿ ಗೆಲ್ಲಿಸಿದ್ದಾರೆ ಎಂದರು.

ಇದೇ ರೀತಿಯಲ್ಲಿ 2003 ಪುರಸಭಾ ಚುನಾವಣೆಯಲ್ಲಿ ವಾರ್ಡ್‌ 4ರಿಂದ ಕೋಮಲಾ ಎಂಬ ಟಿಸಿಎಚ್ ವಿದ್ಯಾರ್ಥಿನಿಯನ್ನು ಗೆಲ್ಲಿಸಿದ್ದು, ಐದು ವರ್ಷಗಳ ಅಡಳಿತದ ನಂತರ ಕೋಮಲಾ ಅವರ ಪ್ರಸ್ತುತ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.