ಆಮೆಗತಿಯಲ್ಲಿ ರೈಲು ನಿಲ್ದಾಣ ಕಾಮಗಾರಿ


Team Udayavani, Jun 4, 2023, 4:23 PM IST

ಆಮೆಗತಿಯಲ್ಲಿ ರೈಲು ನಿಲ್ದಾಣ ಕಾಮಗಾರಿ

ಬಂಗಾರಪೇಟೆ: ಉದ್ಯೋಗಕ್ಕಾಗಿ ನಿತ್ಯ ಬೆಂಗಳೂರಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಶಂಕುಸ್ಥಾನೆಯಾದ ಹುದುಕುಳ ರೈಲ್ವೆ ನಿಲ್ದಾಣ ಕಾಮಗಾರಿ 9 ವರ್ಷ ಗಳಿಂದ ಆಮೆ ನಡಿಗೆಯಲ್ಲಿ ಸಾಗುತ್ತಿದ್ದರೂ, ಚುನಾಯಿತ ಪ್ರತಿನಿಧಿಗಳ ಇಚ್ಛಾಶಕ್ತಿಗೆ ಹಿಡಿದ ಕೈಕನ್ನಡಿಯಾಗಿದೆ.

ಯಾವುದೇ ಕಾರ್ಖಾನೆಗಳಿಲ್ಲದ ಬಂಗಾರಪೇಟೆ ಕ್ಷೇತ್ರದಲ್ಲಿ ಜೀವನ ಸಾಗಿಸಲು ನಿತ್ಯ 15ಸಾವಿರಕ್ಕೂ ಹೆಚ್ಚಿನ ಕಾರ್ಮಿಕರು ರೈಲುಗಳ ಮೂಲಕ ಬೆಂಗಳೂರಿಗೆ ಕೆಲಸಕ್ಕಾಗಿ ತೆರಳಿ ಸಂಜೆ ಮರಳುತ್ತಾರೆ. ಅಂತೆಯೇ ಕಸಬಾ ಹೋಬಳಿಯ ಜನರೂ ಸಹ ಅಧಿಕ ಸಂಖ್ಯೆಯಲ್ಲಿ ರೈಲಿನಲ್ಲಿ ಬೆಂಗಳೂರಿಗೆ ಪ್ರಯಾಣ ಮಾಡುವುದರಿಂದ ಈ ಹೋಬಳಿಯ ಜನರು ಮುಂಜಾನೆ 4 ಗಂಟೆಯಿಂದಲೇ ದ್ವಿಚಕ್ರ ವಾಹನಗಳಲ್ಲಿ ಪಟ್ಟಣಕ್ಕೆ ಬಂದು ರೈಲು ಹತ್ತಬೇಕಿತ್ತು. ಚಿಕ್ಕಬಳ್ಳಾಪುದಿಂದ ಕೋಲಾರ ಮೂಲಕ ಪಟ್ಟಣಕ್ಕೆ ಸಂಪರ್ಕಕಲ್ಪಿಸುವ ಈ ಮಾರ್ಗದ ಹುದುಕುಳ ಗ್ರಾಮದಲ್ಲಿ ಈ ಹಿಂದೆ ಬ್ರಿಟಿಷರ ಕಾಲದಲ್ಲಿ ರೈಲ್ವೆ ನಿಲ್ದಾಣವಿತ್ತು. ನಂತರ ದಿನಗಳಲ್ಲಿ ಆ ನಿಲ್ದಾಣ ಮುಚ್ಚಲಾಗಿತ್ತು.

ಚಿನ್ನಕೋಟೆ ಗ್ರಾಮದಲ್ಲಿ ಹಾಲ್ಟ್ ಸ್ಟೇಷನ್‌: ಈ ಹಿನ್ನೆಲೆಯಲ್ಲಿ ಹುದುಕುಳ ಗ್ರಾಮದಲ್ಲಿ ಮುಚ್ಚಿರುವ ರೈಲ್ವೆ ನಿಲ್ದಾಣ ಪುನರಾಂಭಿಸುವ ಮೂಲಕ ಈ ವ್ಯಾಪ್ತಿಯಲ್ಲಿನ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವಂತೆ ಅಂದಿನ ಸಂಸದರಾಗಿದ್ದ ಕೆ.ಹೆಚ್‌.ಮುನಿಯಪ್ಪ ರೈಲ್ವೆ ಸಚಿವರಾಗಿದ್ದಾಗ ಪ್ರಯಾಣಿಕರು ಮನವಿ ಸಲ್ಲಿಸಿದರು. ಅಂತೆಯೇ ಚಿನ್ನಕೋಟೆ ಗ್ರಾಮದಲ್ಲಿಯೂ ಸಹ ಹಾಲ್ಟ್ ಸ್ಟೇಷನ್‌ ಆರಂಭಿಸುವಂತೆ ಒತ್ತಾಯಕ್ಕೆ ಮಣಿದು ಎರಡೂ ಕಡೆ ಹೊಸ ನಿಲ್ದಾಣಕ್ಕೆ ಕೇಂದ್ರ ರೈಲ್ವೆ ಇಲಾಖೆ ಹಸಿರು ನಿಶಾನೆ ನೀಡಿತು.

ಪ್ರಯಾಣಿಕರಲ್ಲಿ ನಿರಾಸೆ: ಅಂದುಕೊಂಡ ಸಮಯದಲ್ಲಿ ಚಿನ್ನಕೋಟೆ ಗ್ರಾಮದಲ್ಲಿ ಮಾತ್ರ ಹಾಲ್ಟ್ ಸ್ಟೇಷನ್‌ ನಿರ್ಮಾಣವಾಗಿ ಉದ್ಘಾಟನೆ ಸಹವಾಯಿತು. ಆದರೆ ಹುದುಕುಳ ಗ್ರಾಮದಲ್ಲಿನ ಹೊಸ ನಿಲ್ದಾಣ ಕಾಮಗಾರಿಗೆ ಗ್ರಹಣ ಹಿಡಿಯಿತು. 9ವರ್ಷಗಳೇ ಕಳೆದರೂ ಕಟ್ಟಡವೇನೋ ತಲೆಎತ್ತಿದೆ, ಮುಂದಿನ ಚಟುವಟಿಕೆಗಳು ಮಾತ್ರ ಸಾಗಲೇ ಇಲ್ಲ. ಈ ಗ್ರಾಮದ ಸುತ್ತಮುತ್ತಲಿನ ಪ್ರಯಾಣಿಕರು ಇಂದೋ ನಾಳೆನೋ ರೈಲು ಗ್ರಾಮದಲ್ಲಿ ಬಂದು ನಿಲ್ಲಲಿದೆ ಎಂದು ಭಾವಿಸಿದ್ದ ವರಿಗೆ ನಿರಾಶೆ ಮೂಡಿಸಿದೆ. 9ವರ್ಷಗಳಿಂದ ಕಟ್ಟಡ ಬಳಕೆಗೆ ಬಾರದೆ ಕಡೆಗಣಿಸಿದ್ದರಿಂದ ಉದ್ಘಾ ಟನೆಗೂ ಮೊದಲೆ ಕಟ್ಟಡ ಶಿಥಿಲಾವಸ್ಥೆಗೆ ತಲು ಪಿತು. ಅಲ್ಲದೆ ರಾತ್ರಿಯ ವೇಳೆ ಈ ಕಟ್ಟಡ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.

ಅನೈತಿಕ ಚಟುವಟಿಕೆಗಳ ತಾಣವಾದ ಕಟ್ಟಡ: ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಇಲಾಖೆ ಮತ್ತೆ ದುರಸ್ತಿಗೊಳಿಸಿ ಹೆಸರು ಸಹ ಬರೆದು ಬಣ್ಣ ಬಡಿಯಲಾಗಿದೆ. ಪ್ರಯಾಣಿಕರು ನಿಲ್ಲಲು ಪ್ಲಾಟ್‌ ಫಾರಂ ನಿರ್ಮಾಣಕ್ಕೆ ಮಣ್ಣು ಹಾಕಿ ಬಿಟ್ಟಿರುವುದ ರಿಂದ ಮಳೆ ಬಂದರೆ ಅದು ಕೆಸರುಗದ್ದೆಯಾಗುವುದು. ಕಟ್ಟಡಕ್ಕೆ ಸಮರ್ಪಕ ರೀತಿ ಬಾಗಿಲು, ಕಿಟಕಿ ಅಳವಡಿಸದೆ ಹಾಗೆ ಬಿಟ್ಟಿರುವುದರಿಂದ ಮತ್ತೆ ರಾತ್ರಿಯ ವೇಳೆ ಕಾನೂನು ಬಾಹಿರ ಅಡ್ಡವಾಗಿ ಪರಿವರ್ತನೆಯಾಗಿದೆ. ಸಂಸದರು ನೆನೆಗುದಿಗೆ ಬಿದ್ದಿರುವ ಹುದುಕುಳ ನಿಲ್ದಾಣದ ಕಾಮಗಾರಿಗೆ ಮೋಕ್ಷ ಕಲ್ಪಿಸಿಕೊಟ್ಟು ಶೀಘ್ರ ಉದ್ಘಾಟನೆ ಯಾಗುವಂತೆ ಮಾಡಿ ಪ್ರಯಾಣಿಕರಿಗೆ ನೆರವಾಗುವಂತೆ ಕ್ರಮಕೈಗೊಳ್ಳಲಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತಾಲೂಕಿ ಹುದುಕುಳ ಗ್ರಾಮದ ಬಳಿ ಬ್ರಿಟೀಷರ ಕಾಲದಲ್ಲಿ ರೈಲ್ವೆ ನಿಲ್ದಾಣ ಹಳೆ ಕಟ್ಟಡವನ್ನು ಸಂಸದರಾಗಿದ್ದ ಕೆ.ಹೆಚ್‌.ಮುನಿಯಪ್ಪ ಹಾಗೂ ಶಾಸಕ ಎಸ್‌. ಎನ್‌.ನಾರಾಯಣಸ್ವಾಮಿ ಹೊಸದಾಗಿ ಕಟ್ಟಡವನ್ನು ನಿರ್ಮಾಣಕ್ಕೆ ಶ್ರಮಿಸಿದ್ದರು. ಗುತ್ತಿಗೆದಾರರ ಸಮರ್ಪಕವಾಗಿ ನಿರ್ಮಾಣ ಮಾಡದೇ ಇದ್ದುರಿಂದ ಮಳೆ ಬಂದರೆ ಸೋರುತ್ತಿತ್ತು. ಉದ್ಘಾಟನೆಗೂ ಮುಂಚೆ ಮತ್ತೆ ಎರಡನೇ ಬಾರಿ ಸುಣ್ಣ-ಬಣ್ಣ ಬಳಿದು ಮತ್ತೆ ರಿಪೇರಿ ಕೆಲಸ ಮಾಡಿದ್ದಾರೆ. ರೈಲ್ವೆ ಇಲಾಖೆಯವರು ಕಾಟಾಚಾರಕ್ಕೆ ಕೆಲಸ ಮಾಡುವಂತಿದೆ. ಪ್ರಯಾಣಿಕರಿಗೆ ಯಾವುದೇ ಅನುಕೂಲವಾಗುತ್ತಿಲ್ಲ. -ಹೆಚ್‌.ಎಂ.ರವಿ, ಅಧ್ಯಕ್ಷರು, ಚಿಕ್ಕಅಂಕಂಡಹಳ್ಳಿ ಗ್ರಾಪಂ, ಹುದುಕುಳ

-ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.